ಆಂದೋಲನ ಪುರವಣಿ

ವನಿತೆ-ಮಮತೆ : ನಿಂಬೆ ಹಣ್ಣಿನ ಸಾರು

-ಭಾರತಿ ನಾಗರಮಠ

ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು ಮಾಡಿ ಸವಿದರೆ ದೇಹವನ್ನು ತಂಪಾಗಿಡಲು ಸಹಕಾರಿ.

ಬೇಕಾಗುವ ಪದಾರ್ಥಗಳು:

* ಎರಡು ಕಪ್ ನೀರು
* ಒಂದು ಮಧ್ಯಮ ಗಾತ್ರದ ಲಿಂಬೆಹಣ್ಣು
* ರುಚಿಗೆ ತಕ್ಕಷ್ಟು ಉಪ್ಪು
* ಮೂರು ಚಮಚ ಬೆಲ್ಲ


ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

ಒಂದು ಚಮಚದಷ್ಟು ಸಾಸಿವೆ, ಜೀರಿಗೆ ಮತ್ತು ಮೆಂತ್ಯಕಾಳು
ಮೂರು ಹಸಿಮೆಣಸಿನ ಕಾಯಿ
ಒಂದು ಚಿಟಿಕೆ ಇಂಗು
ಒಂದು ಚಿಕ್ಕ ಚಮಚ ಅರಿಶಿಣಪುಡಿ
ಎರಡು ಗರಿ ಕರಿಬೇವಿನ ಎಲೆ
ಎರಡು ಚಮಚದಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು.
ಒಂದು ಟೇಬಲ್ ಚಮಚ ಅಡುಗೆ ಎಣ್ಣೆ


ನಿಂಬೆಹಣ್ಣಿನ ಸಾರು ಮಾಡುವ ವಿಧಾನ:

ಒಂದು ಪಾತ್ರೆಯಲ್ಲಿ 2 ಕಪ್ ನೀರು ಕುದಿಯಲು ಇಟ್ಟು, ಅದಕ್ಕೆ ಉಪ್ಪು ಮತ್ತು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಲಿಂಬೆ ಹಣ್ಣಿನ ರಸ ಬೆರೆಸಿ ಒಂದು ಕುದಿ ಕುದಿಸಿ ಗ್ಯಾಸ್ ಆಫ್ ಮಾಡಬೇಕು.
ಒಗ್ಗರಣೆಗಾಗಿ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯ್ದ ನಂತರ ಅದಕ್ಕೆ ಒಂದು ಚಮಚದಷ್ಟು ಸಾಸಿವೆ, ಜೀರಿಗೆ, ಮೆಂತ್ಯಕಾಳು ಹಾಕಿ ಅದು ಚಟಪಟ ಶಬ್ಧ ಬಂದ ಮೇಲೆ ಅದಕ್ಕೆ ಹೆಚ್ಚಿಟ್ಟುಕೊಂಡ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು ಹಾಕಬೇಕು. ಕೊನೆಯದಾಗಿ ಇಂಗು ಮತ್ತು ಅರಿಸಿಣಪುಡಿ ಬೆರೆಸಿ ಗ್ಯಾಸ್ ಆಫ್ ಮಾಡಬೇಕು. ನಂತರ ಅದಕ್ಕೆ ಕುದಿಸಿಟ್ಟ ಲಿಂಬೆ ಹಣ್ಣಿನ ಮಿಶ್ರಣ ಸೇರಿಸಿ ಅದರ ಮೇಲೆ ಹೆಚ್ಚಿಟ್ಟುಕೊಂಡ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿಯಾದ ಲಿಂಬೆಸಾರು ಸಿದ್ಧ.

andolanait

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

3 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

3 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

3 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

3 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

3 hours ago