ಆಂದೋಲನ ಪುರವಣಿ

ವನಿತೆ-ಮಮತೆ : ನಿಂಬೆ ಹಣ್ಣಿನ ಸಾರು

-ಭಾರತಿ ನಾಗರಮಠ

ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು ಮಾಡಿ ಸವಿದರೆ ದೇಹವನ್ನು ತಂಪಾಗಿಡಲು ಸಹಕಾರಿ.

ಬೇಕಾಗುವ ಪದಾರ್ಥಗಳು:

* ಎರಡು ಕಪ್ ನೀರು
* ಒಂದು ಮಧ್ಯಮ ಗಾತ್ರದ ಲಿಂಬೆಹಣ್ಣು
* ರುಚಿಗೆ ತಕ್ಕಷ್ಟು ಉಪ್ಪು
* ಮೂರು ಚಮಚ ಬೆಲ್ಲ


ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

ಒಂದು ಚಮಚದಷ್ಟು ಸಾಸಿವೆ, ಜೀರಿಗೆ ಮತ್ತು ಮೆಂತ್ಯಕಾಳು
ಮೂರು ಹಸಿಮೆಣಸಿನ ಕಾಯಿ
ಒಂದು ಚಿಟಿಕೆ ಇಂಗು
ಒಂದು ಚಿಕ್ಕ ಚಮಚ ಅರಿಶಿಣಪುಡಿ
ಎರಡು ಗರಿ ಕರಿಬೇವಿನ ಎಲೆ
ಎರಡು ಚಮಚದಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು.
ಒಂದು ಟೇಬಲ್ ಚಮಚ ಅಡುಗೆ ಎಣ್ಣೆ


ನಿಂಬೆಹಣ್ಣಿನ ಸಾರು ಮಾಡುವ ವಿಧಾನ:

ಒಂದು ಪಾತ್ರೆಯಲ್ಲಿ 2 ಕಪ್ ನೀರು ಕುದಿಯಲು ಇಟ್ಟು, ಅದಕ್ಕೆ ಉಪ್ಪು ಮತ್ತು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಲಿಂಬೆ ಹಣ್ಣಿನ ರಸ ಬೆರೆಸಿ ಒಂದು ಕುದಿ ಕುದಿಸಿ ಗ್ಯಾಸ್ ಆಫ್ ಮಾಡಬೇಕು.
ಒಗ್ಗರಣೆಗಾಗಿ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯ್ದ ನಂತರ ಅದಕ್ಕೆ ಒಂದು ಚಮಚದಷ್ಟು ಸಾಸಿವೆ, ಜೀರಿಗೆ, ಮೆಂತ್ಯಕಾಳು ಹಾಕಿ ಅದು ಚಟಪಟ ಶಬ್ಧ ಬಂದ ಮೇಲೆ ಅದಕ್ಕೆ ಹೆಚ್ಚಿಟ್ಟುಕೊಂಡ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು ಹಾಕಬೇಕು. ಕೊನೆಯದಾಗಿ ಇಂಗು ಮತ್ತು ಅರಿಸಿಣಪುಡಿ ಬೆರೆಸಿ ಗ್ಯಾಸ್ ಆಫ್ ಮಾಡಬೇಕು. ನಂತರ ಅದಕ್ಕೆ ಕುದಿಸಿಟ್ಟ ಲಿಂಬೆ ಹಣ್ಣಿನ ಮಿಶ್ರಣ ಸೇರಿಸಿ ಅದರ ಮೇಲೆ ಹೆಚ್ಚಿಟ್ಟುಕೊಂಡ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿಯಾದ ಲಿಂಬೆಸಾರು ಸಿದ್ಧ.

andolanait

Recent Posts

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

47 mins ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

57 mins ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

1 hour ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

2 hours ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

3 hours ago