ಆಂದೋಲನ ಪುರವಣಿ

ವನಿತೆ-ಮಮತೆ : ನಿಂಬೆ ಹಣ್ಣಿನ ಸಾರು

-ಭಾರತಿ ನಾಗರಮಠ

ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು ಮಾಡಿ ಸವಿದರೆ ದೇಹವನ್ನು ತಂಪಾಗಿಡಲು ಸಹಕಾರಿ.

ಬೇಕಾಗುವ ಪದಾರ್ಥಗಳು:

* ಎರಡು ಕಪ್ ನೀರು
* ಒಂದು ಮಧ್ಯಮ ಗಾತ್ರದ ಲಿಂಬೆಹಣ್ಣು
* ರುಚಿಗೆ ತಕ್ಕಷ್ಟು ಉಪ್ಪು
* ಮೂರು ಚಮಚ ಬೆಲ್ಲ


ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

ಒಂದು ಚಮಚದಷ್ಟು ಸಾಸಿವೆ, ಜೀರಿಗೆ ಮತ್ತು ಮೆಂತ್ಯಕಾಳು
ಮೂರು ಹಸಿಮೆಣಸಿನ ಕಾಯಿ
ಒಂದು ಚಿಟಿಕೆ ಇಂಗು
ಒಂದು ಚಿಕ್ಕ ಚಮಚ ಅರಿಶಿಣಪುಡಿ
ಎರಡು ಗರಿ ಕರಿಬೇವಿನ ಎಲೆ
ಎರಡು ಚಮಚದಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು.
ಒಂದು ಟೇಬಲ್ ಚಮಚ ಅಡುಗೆ ಎಣ್ಣೆ


ನಿಂಬೆಹಣ್ಣಿನ ಸಾರು ಮಾಡುವ ವಿಧಾನ:

ಒಂದು ಪಾತ್ರೆಯಲ್ಲಿ 2 ಕಪ್ ನೀರು ಕುದಿಯಲು ಇಟ್ಟು, ಅದಕ್ಕೆ ಉಪ್ಪು ಮತ್ತು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಲಿಂಬೆ ಹಣ್ಣಿನ ರಸ ಬೆರೆಸಿ ಒಂದು ಕುದಿ ಕುದಿಸಿ ಗ್ಯಾಸ್ ಆಫ್ ಮಾಡಬೇಕು.
ಒಗ್ಗರಣೆಗಾಗಿ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯ್ದ ನಂತರ ಅದಕ್ಕೆ ಒಂದು ಚಮಚದಷ್ಟು ಸಾಸಿವೆ, ಜೀರಿಗೆ, ಮೆಂತ್ಯಕಾಳು ಹಾಕಿ ಅದು ಚಟಪಟ ಶಬ್ಧ ಬಂದ ಮೇಲೆ ಅದಕ್ಕೆ ಹೆಚ್ಚಿಟ್ಟುಕೊಂಡ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು ಹಾಕಬೇಕು. ಕೊನೆಯದಾಗಿ ಇಂಗು ಮತ್ತು ಅರಿಸಿಣಪುಡಿ ಬೆರೆಸಿ ಗ್ಯಾಸ್ ಆಫ್ ಮಾಡಬೇಕು. ನಂತರ ಅದಕ್ಕೆ ಕುದಿಸಿಟ್ಟ ಲಿಂಬೆ ಹಣ್ಣಿನ ಮಿಶ್ರಣ ಸೇರಿಸಿ ಅದರ ಮೇಲೆ ಹೆಚ್ಚಿಟ್ಟುಕೊಂಡ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿಯಾದ ಲಿಂಬೆಸಾರು ಸಿದ್ಧ.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

19 mins ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

1 hour ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

2 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

3 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

4 hours ago