-ಭಾರತಿ ನಾಗರಮಠ
ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು ಮಾಡಿ ಸವಿದರೆ ದೇಹವನ್ನು ತಂಪಾಗಿಡಲು ಸಹಕಾರಿ.
ಬೇಕಾಗುವ ಪದಾರ್ಥಗಳು:
* ಎರಡು ಕಪ್ ನೀರು
* ಒಂದು ಮಧ್ಯಮ ಗಾತ್ರದ ಲಿಂಬೆಹಣ್ಣು
* ರುಚಿಗೆ ತಕ್ಕಷ್ಟು ಉಪ್ಪು
* ಮೂರು ಚಮಚ ಬೆಲ್ಲ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
ಒಂದು ಚಮಚದಷ್ಟು ಸಾಸಿವೆ, ಜೀರಿಗೆ ಮತ್ತು ಮೆಂತ್ಯಕಾಳು
ಮೂರು ಹಸಿಮೆಣಸಿನ ಕಾಯಿ
ಒಂದು ಚಿಟಿಕೆ ಇಂಗು
ಒಂದು ಚಿಕ್ಕ ಚಮಚ ಅರಿಶಿಣಪುಡಿ
ಎರಡು ಗರಿ ಕರಿಬೇವಿನ ಎಲೆ
ಎರಡು ಚಮಚದಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು.
ಒಂದು ಟೇಬಲ್ ಚಮಚ ಅಡುಗೆ ಎಣ್ಣೆ
ನಿಂಬೆಹಣ್ಣಿನ ಸಾರು ಮಾಡುವ ವಿಧಾನ:
ಒಂದು ಪಾತ್ರೆಯಲ್ಲಿ 2 ಕಪ್ ನೀರು ಕುದಿಯಲು ಇಟ್ಟು, ಅದಕ್ಕೆ ಉಪ್ಪು ಮತ್ತು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಲಿಂಬೆ ಹಣ್ಣಿನ ರಸ ಬೆರೆಸಿ ಒಂದು ಕುದಿ ಕುದಿಸಿ ಗ್ಯಾಸ್ ಆಫ್ ಮಾಡಬೇಕು.
ಒಗ್ಗರಣೆಗಾಗಿ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯ್ದ ನಂತರ ಅದಕ್ಕೆ ಒಂದು ಚಮಚದಷ್ಟು ಸಾಸಿವೆ, ಜೀರಿಗೆ, ಮೆಂತ್ಯಕಾಳು ಹಾಕಿ ಅದು ಚಟಪಟ ಶಬ್ಧ ಬಂದ ಮೇಲೆ ಅದಕ್ಕೆ ಹೆಚ್ಚಿಟ್ಟುಕೊಂಡ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು ಹಾಕಬೇಕು. ಕೊನೆಯದಾಗಿ ಇಂಗು ಮತ್ತು ಅರಿಸಿಣಪುಡಿ ಬೆರೆಸಿ ಗ್ಯಾಸ್ ಆಫ್ ಮಾಡಬೇಕು. ನಂತರ ಅದಕ್ಕೆ ಕುದಿಸಿಟ್ಟ ಲಿಂಬೆ ಹಣ್ಣಿನ ಮಿಶ್ರಣ ಸೇರಿಸಿ ಅದರ ಮೇಲೆ ಹೆಚ್ಚಿಟ್ಟುಕೊಂಡ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿಯಾದ ಲಿಂಬೆಸಾರು ಸಿದ್ಧ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…