-ಭಾರತಿ ನಾಗರಮಠ
ನಿಂಬೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ‘ಸಿ’ ಇರುತ್ತದೆ. ಇದು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಂಬೆ ರಸ ದೇಹದ ವಿಷಕಾರಕಗಳನ್ನು ಹೊರ ಹಾಕಲು ನೆರವಾಗುತ್ತದ್ದಲ್ಲದೇ ಜೀರ್ಣ ಕ್ರಿಯೆ ಸುಲಭಗೊಳಿಸುತ್ತದೆ. ಬೇಸಿಗೆಯಲ್ಲಿ ವಾರಕ್ಕೆ ಮೂರು ಸಲ ನಿಂಬೆಸಾರು ಮಾಡಿ ಸವಿದರೆ ದೇಹವನ್ನು ತಂಪಾಗಿಡಲು ಸಹಕಾರಿ.
ಬೇಕಾಗುವ ಪದಾರ್ಥಗಳು:
* ಎರಡು ಕಪ್ ನೀರು
* ಒಂದು ಮಧ್ಯಮ ಗಾತ್ರದ ಲಿಂಬೆಹಣ್ಣು
* ರುಚಿಗೆ ತಕ್ಕಷ್ಟು ಉಪ್ಪು
* ಮೂರು ಚಮಚ ಬೆಲ್ಲ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
ಒಂದು ಚಮಚದಷ್ಟು ಸಾಸಿವೆ, ಜೀರಿಗೆ ಮತ್ತು ಮೆಂತ್ಯಕಾಳು
ಮೂರು ಹಸಿಮೆಣಸಿನ ಕಾಯಿ
ಒಂದು ಚಿಟಿಕೆ ಇಂಗು
ಒಂದು ಚಿಕ್ಕ ಚಮಚ ಅರಿಶಿಣಪುಡಿ
ಎರಡು ಗರಿ ಕರಿಬೇವಿನ ಎಲೆ
ಎರಡು ಚಮಚದಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು.
ಒಂದು ಟೇಬಲ್ ಚಮಚ ಅಡುಗೆ ಎಣ್ಣೆ
ನಿಂಬೆಹಣ್ಣಿನ ಸಾರು ಮಾಡುವ ವಿಧಾನ:
ಒಂದು ಪಾತ್ರೆಯಲ್ಲಿ 2 ಕಪ್ ನೀರು ಕುದಿಯಲು ಇಟ್ಟು, ಅದಕ್ಕೆ ಉಪ್ಪು ಮತ್ತು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಲಿಂಬೆ ಹಣ್ಣಿನ ರಸ ಬೆರೆಸಿ ಒಂದು ಕುದಿ ಕುದಿಸಿ ಗ್ಯಾಸ್ ಆಫ್ ಮಾಡಬೇಕು.
ಒಗ್ಗರಣೆಗಾಗಿ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯ್ದ ನಂತರ ಅದಕ್ಕೆ ಒಂದು ಚಮಚದಷ್ಟು ಸಾಸಿವೆ, ಜೀರಿಗೆ, ಮೆಂತ್ಯಕಾಳು ಹಾಕಿ ಅದು ಚಟಪಟ ಶಬ್ಧ ಬಂದ ಮೇಲೆ ಅದಕ್ಕೆ ಹೆಚ್ಚಿಟ್ಟುಕೊಂಡ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೊಪ್ಪು ಹಾಕಬೇಕು. ಕೊನೆಯದಾಗಿ ಇಂಗು ಮತ್ತು ಅರಿಸಿಣಪುಡಿ ಬೆರೆಸಿ ಗ್ಯಾಸ್ ಆಫ್ ಮಾಡಬೇಕು. ನಂತರ ಅದಕ್ಕೆ ಕುದಿಸಿಟ್ಟ ಲಿಂಬೆ ಹಣ್ಣಿನ ಮಿಶ್ರಣ ಸೇರಿಸಿ ಅದರ ಮೇಲೆ ಹೆಚ್ಚಿಟ್ಟುಕೊಂಡ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿಯಾದ ಲಿಂಬೆಸಾರು ಸಿದ್ಧ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…