ಹೊಸತು ಎಂಬುದು ನಿರಂತರ ಕ್ರಿಯಾಶೀಲತೆಗೆ ಸಂಬಂಧಪಟ್ಟದ್ದು, ಒಂದು ಪರಿಚಯವಾದರೆ ಮತ್ತೊಂದರ ಅವಿಷ್ಕಾರ ಆಗಲೇ ಬೇಕು. ಇದು ಆಧುನಿಕ ಜಗತ್ತಿನ ಅಭಿರುಚಿ, ಈ ಅಭಿರುಚಿ ನಿಂತ ನೀರಾಗಿರುವುದಿಲ್ಲ. ಸದಾ ಹೊಸದರೆಡೆಗಿನ ಸೆಳೆತ,ಆಕರ್ಷಣೆ ನಿರಂತರ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುತ್ತದೆ. ಶಿಲಾಯುಗದ ನಂತರ ನವ ನಾಗರಿಕ ಪ್ರಪಂಚದ ಮಸ್ತಿಷ್ಕಕಕ್ಕೆ ಹೊಳೆಯದೆ ಗೌಣವೆನಿಸಿದ್ದ ವಸ್ತುಗಳೆಲ್ಲ ಇವತ್ತಿನ ಕೌಶಲದ ನಾಜೂಕಿನ ಕೈಗಳಿಗೆ ಸಿಕ್ಕಿ ನವನವೀನ ರೂಪವನ್ನೇ ಪಡದುಕೊಳ್ಳುತ್ತಿವೆ. ಇಂತಹ ಕೌಶಲಗಳಲ್ಲಿ ಮಣ್ಣಿನ ‘ಟೆರ್ರಾಕೋಟಾ’ಕಲೆಯೂ ಒಂದು…!
ಅದರಲ್ಲೇನಿದೆ ಮಣ್ಣು…! ಇದು ಸಾಮಾನ್ಯ ಸಂದರ್ಭಗಳಲ್ಲೂ ಹೆಚ್ಚಾಗಿ ಹಳ್ಳಿಗರ ಬಾಯಿಂದ ಹೊರಡುವ ಗ್ರಾಮೀಣ ಸೊಗಡಿನ ಮಾತು.ತಿರುಳಿಲ್ಲದ್ದು,ಸಾರವಿಲ್ಲದ್ದು ಎಂಬುದೇ ಇದರ ಅರ್ಥ. ಆದರೆ ವಾಸ್ತವದಲ್ಲಿ ಮಣ್ಣಿನ ಒಡನಾಟವಿಲ್ಲದ ಮನುಷ್ಯನ ಬದುಕು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲದ್ದು. ಅದರ ಜತೆಗಿನ ಅವಿನಾಭಾವ ಸಂಬಂಧವೇ ಅಂಥದ್ದು.
ಮೈಸೂರಿನ ಕೆ.ಜಿ.ಕೊಪ್ಪಲಿನವರಾದ ನೀಲಿ ಲೋಹಿತ್ ಅವರು ಓದಿದ್ದು ಬಿಎ ಪದವಿ, ನಂತರ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ಡಿಪ್ಲೊಮಾ ಪಡೆದಿದ್ದಾರೆ. ಇವರಿಗೀಗ ೩೭ ವರ್ಷ. ಆದರೆ ಅವರ ಪರಿಕಲ್ಪನೆ ವಯಸ್ಸಿಗೂ ಮೀರಿದ್ದು.
ಅಮೆರಿಕಾದ ಕ್ಯಾಲಿಫೋರ್ನಿಯಾ, ಉಗಾಂಡ, ದೆಹಲಿ,ಹೈದರಾಬಾದ್, ತಮಿಳುನಾಡು, ಗುಜರಾತ್ ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳ ಗ್ರಾಹಕರಿಗೆ ಇವರು ಮಣ್ಣಿನಿಂದ ತಯಾರಿಸಿದ ಮೂಗುತಿ,ಕಿವಿಯೋಲೆ, ಬೈತಲೆಬೊಟ್ಟು,ವಿವಿಧ ಮಾದರಿಯ ಕತ್ತಿನ ಸರಗಳು, ತೋಳ್ಬಂದಿ, ಸೊಂಟದಪಟ್ಟಿ, ಕಾಲ್ಗೆಜ್ಜೆ,ಜಡೆಬಿಲ್ಲೆ ಮುಂತಾದ ಮಣ್ಣಿನ ಆಭರಣಗಳು ತಲುಪಿ, ಜನಪ್ರಿಯತೆ ಗಳಿಸಿವೆ.
2017 ರ ಆರಂಭದಲ್ಲಿ ಶೂನ್ಯದಿಂದಲೇ ಆರಂಭವಾದ ಮಣ್ಣಿನ ಆಭರಣಗಳ ಕುಟೀರ 2019ರ ಸೆಪ್ಟಂಬರ್ನಲ್ಲಿ ‘ನೀಲಿಕಲಾ ಕ್ರಿಯೇಷನ್ಸ್ ’ ರೂಪ ತಾಳಿತು. ಕೊರೊನಾ ಸಂದರ್ಭದಲ್ಲಿ 9 ವರ್ಷದಿಂದ 60 ವರ್ಷದ ವರೆಗಿನ ಗೃಹಿಣಿಯರೂ ಆನ್ಲೈನ್ ತರಗತಿಯಲ್ಲಿ ಮಣ್ಣಿನ ಆಭರಣಗಳ ತಯಾರಿಕೆ ಕೌಶಲದ ಬಗ್ಗೆ ಕಲಿತಿದ್ದಾರೆ.ಸಾಕಷ್ಟು ಹೋರಾಟದ ನಂತರ ಕಳೆದ ವರ್ಷ ಕುವೆಂಪುನಗರ ಎಸ್ಬಿಐ ಶಾಖೆಯಿಂದ ಆರ್ಥಿಕ ನೆರವು ಸಿಕ್ಕಿದೆ. ಮರುಪಾವತಿಯೂ ಆಗುತ್ತಿದೆ. ಸಾಲಕೊಡುವಾಗ ಖಾತರಿಯ ಬಗ್ಗೆ ಹಿಂದೆಮುಂದೆ ನೋಡಿದ್ದ ಬ್ಯಾಂಕ್ ಅಧಿಕಾರಿಗಳು ನಿರಾಳರಾಗಿದ್ದಾರೆ.ನೀಲಿ ಕಲಾ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿಚ್ಚಿಸುವವರು ಮೊಬೈಲ್ ಸಂಖ್ಯೆ : 7676960671 ಇಲ್ಲಿ ಸಂಪರ್ಕಿಸಬಹುದು. ವೆಬ್ಸೈಟ್: www.Neelikala.com
8 ಮಂದಿಗೆ ಉದ್ಯೋಗ ಕೊಟ್ಟಿದ್ದೇನೆ. ಈ ಕೆಲಸದಲ್ಲಿ ‘ಕ್ರಿಯೇಟಿವಿಟಿ’ ಬಹಳ ಮುಖ್ಯ. ಅದೇ ಬಂಡವಾಳ, ಸದಾ ಹೊಸತರ ಬಗ್ಗೆ ಯೋಚಿಸುತ್ತಿರಬೇಕು, ಜನರೂ ಸಹ ಹೊಸ ಹೊಸ ವಿನ್ಯಾಸಗಳನ್ನು ಬಯಸುತ್ತಾರೆ. ಅದಕ್ಕೆ ನಾನೂ ಹೊಂದಿಕೊಂಡಿದ್ದೇನೆ. 5 ವರ್ಷಗಳ ಪರಿಶ್ರಮದ ನಂತರ ಸ್ಪಷ್ಟತೆ,ನೆಮ್ಮದಿ ಎರಡೂ ಸಿಕ್ಕಿದೆ.
-ನೀಲಿ ಲೋಹಿತ್.
————————-
ಇಂಟ್ರಾ :
ಹೊಸತು ಎಂಬುದು ನಿರಂತರ ಕ್ರಿಯಾಶೀಲತೆಗೆ ಸಂಬಂಧಪಟ್ಟದ್ದು, ಒಂದು ಪರಿಚಯವಾದರೆ ಮತ್ತೊಂದರ ಅವಿಷ್ಕಾರ ಆಗಲೇ ಬೇಕು. ಇದು ಆಧುನಿಕ ಜಗತ್ತಿನ ಅಭಿರುಚಿ, ಈ ಅಭಿರುಚಿ ನಿಂತ ನೀರಾಗಿರುವುದಿಲ್ಲ. ಸದಾ ಹೊಸದರೆಡೆಗಿನ ಸೆಳೆತ,ಆಕರ್ಷಣೆ ನಿರಂತರ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುತ್ತದೆ. ಶಿಲಾಯುಗದ ನಂತರ ನವ ನಾಗರಿಕ ಪ್ರಪಂಚದ ಮಸ್ತಿಷ್ಕಕಕ್ಕೆ ಹೊಳೆಯದೆ ಗೌಣವೆನಿಸಿದ್ದ ವಸ್ತುಗಳೆಲ್ಲ ಇವತ್ತಿನ ಕೌಶಲದ ನಾಜೂಕಿನ ಕೈಗಳಿಗೆ ಸಿಕ್ಕಿ ನವನವೀನ ರೂಪವನ್ನೇ ಪಡೆದುಕೊಳ್ಳುತ್ತಿವೆ. ಇಂತಹ ಕೌಶಲಗಳಲ್ಲಿ ಮಣ್ಣಿನ ‘ಟೆರ್ರಾಕೋಟಾ’ಕಲೆಯೂ ಒಂದು…!
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…