ಆಂದೋಲನ ಪುರವಣಿ

ವನಿತೆ-ಮಮತೆ : ಮಣ್ಣೆಂದರೆ ಬರಿ ಮಣ್ಣಲ್ಲ, ಇದು ಹೊನ್ನು

– ಜಯಶಂಕರ್ ಬದನಗುಪ್ಪೆ

ಹೊಸತು ಎಂಬುದು ನಿರಂತರ ಕ್ರಿಯಾಶೀಲತೆಗೆ ಸಂಬಂಧಪಟ್ಟದ್ದು, ಒಂದು ಪರಿಚಯವಾದರೆ ಮತ್ತೊಂದರ ಅವಿಷ್ಕಾರ ಆಗಲೇ ಬೇಕು. ಇದು ಆಧುನಿಕ ಜಗತ್ತಿನ ಅಭಿರುಚಿ, ಈ ಅಭಿರುಚಿ ನಿಂತ ನೀರಾಗಿರುವುದಿಲ್ಲ. ಸದಾ ಹೊಸದರೆಡೆಗಿನ ಸೆಳೆತ,ಆಕರ್ಷಣೆ ನಿರಂತರ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುತ್ತದೆ. ಶಿಲಾಯುಗದ ನಂತರ ನವ ನಾಗರಿಕ ಪ್ರಪಂಚದ ಮಸ್ತಿಷ್ಕಕಕ್ಕೆ ಹೊಳೆಯದೆ ಗೌಣವೆನಿಸಿದ್ದ ವಸ್ತುಗಳೆಲ್ಲ ಇವತ್ತಿನ ಕೌಶಲದ ನಾಜೂಕಿನ ಕೈಗಳಿಗೆ ಸಿಕ್ಕಿ ನವನವೀನ ರೂಪವನ್ನೇ ಪಡದುಕೊಳ್ಳುತ್ತಿವೆ. ಇಂತಹ ಕೌಶಲಗಳಲ್ಲಿ ಮಣ್ಣಿನ ‘ಟೆರ್ರಾಕೋಟಾ’ಕಲೆಯೂ ಒಂದು…!

ಅದರಲ್ಲೇನಿದೆ ಮಣ್ಣು…! ಇದು ಸಾಮಾನ್ಯ ಸಂದರ್ಭಗಳಲ್ಲೂ ಹೆಚ್ಚಾಗಿ ಹಳ್ಳಿಗರ ಬಾಯಿಂದ ಹೊರಡುವ ಗ್ರಾಮೀಣ ಸೊಗಡಿನ ಮಾತು.ತಿರುಳಿಲ್ಲದ್ದು,ಸಾರವಿಲ್ಲದ್ದು ಎಂಬುದೇ ಇದರ ಅರ್ಥ. ಆದರೆ ವಾಸ್ತವದಲ್ಲಿ ಮಣ್ಣಿನ ಒಡನಾಟವಿಲ್ಲದ ಮನುಷ್ಯನ ಬದುಕು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲದ್ದು. ಅದರ ಜತೆಗಿನ ಅವಿನಾಭಾವ ಸಂಬಂಧವೇ ಅಂಥದ್ದು.

ನವಯುಗದಲ್ಲಿ ಮಣ್ಣಿನ ಪರಿಕರಗಳ ಬಳಕೆ ಕ್ಷೀಣಿಸಿದರೂ ಇತ್ತೀಚೆಗೆ ಜಗತ್ತಿಗೆ ಆರೋಗ್ಯ ಪೂರ್ಣ ಬದುಕಿನ ವಾಸ್ತವಗಳನ್ನು ಅರುಹುವಲ್ಲಿ ‘ಕ್ರಿಯೇಟಿವಿಟಿ’ ಎಂಬ ಅಂಶ ಬಹಳ ಕೆಲಸ ಮಾಡುತ್ತಿದೆ. ಇದನ್ನೇ ಆರಂಭದಲ್ಲಿ ಹವ್ಯಾಸವಾಗಿ ತೆಗದುಕೊಂಡು ನಂತರ ವೃತ್ತಿಯಾಗಿಸಿಕೊಂಡು ವಿಭಿನ್ನ ರೀತಿಯಲ್ಲಿ ಬದುಕು ಕಟ್ಟಿಕೊಂಡವರು ಮೈಸೂರಿನ ಮಹಿಳೆ ‘ನೀಲಿ ಲೋಹಿತ್’!

ಮೈಸೂರಿನ ಕೆ.ಜಿ.ಕೊಪ್ಪಲಿನವರಾದ ನೀಲಿ ಲೋಹಿತ್ ಅವರು ಓದಿದ್ದು ಬಿಎ ಪದವಿ, ನಂತರ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ಡಿಪ್ಲೊಮಾ ಪಡೆದಿದ್ದಾರೆ. ಇವರಿಗೀಗ ೩೭ ವರ್ಷ. ಆದರೆ ಅವರ ಪರಿಕಲ್ಪನೆ ವಯಸ್ಸಿಗೂ ಮೀರಿದ್ದು.

ಕುವೆಂಪು ನಗರದ ಕಾಮಾಕ್ಷಿ ಆಸ್ಪತ್ರೆ ರಸ್ತೆಯಲ್ಲಿರುವ ಅವರ ಕುಟೀರ ಮಣ್ಣಿನಿಂದ ರೂಪಗೊಂಡ ಆಭರಣಗಳ ತಾಣ. ಸುಮಾರು 500 ಕ್ಕೂ ಹೆಚ್ಚು ವಿವಿಧ ಮಾದರಿಯ ವಿನ್ಯಾಸಗಳನ್ನೊಳಗೊಂಡ ಟೆರ್ರಾಕೋಟಾ ಕಲೆಯ ಮಣ್ಣಿನ ಆಭರಣಗಳು ನೋಡುವ ಆಸಕ್ತರಿಗೆ ತೆರೆದುಕೊಳ್ಳುತ್ತವೆ. ಕಾಲ್ಗೆಜ್ಜೆಯಿಂದ ಶುರುವಾಗಿ ಓರ್ವ ಮಧುವಣಗಿತ್ತಿಗೆ ಏನೆಲ್ಲಾ ಸಿಂಗಾರ ಮಾಡಬಹುದೋ ಅದೆಲ್ಲವೂ ಇಲ್ಲಿ ಮಣ್ಣಿನಿಂದ ತಯಾರಾಗುತ್ತದೆ. ಅಡುಗೆ ಮನೆ, ಅಲಂಕಾರಿಕ ವಸ್ತುಗಳಂತಹ ಕೆಲವೇ ಕೆಲವು ಪರಿಕರಗಳಿಗೆ ಸೀಮಿತವಾಗಿದ್ದ ಮಣ್ಣು ನೀಲಿಲೋಹಿತ್ ಅವರ ಕೈಚಳಕದಿಂದ ಆಭರಣ ಲೋಕಕ್ಕೆ ತನ್ನನ್ನು ತೆರೆದುಕೊಂಡಿದೆ.

ಇಳಕಲ್ ಸೀರೆ,ಮೊಣಕಾಲ್ಮೂರು, ಮೈಸೂರು ಸಿಲ್ಕ್ ನಂತಹ ಸೀರೆ ಉಡಲು ಇಚ್ಚಿಸುವ ನಾರಿಯರ ಸೌಂದರ್ಯವನ್ನು ಇಲ್ಲಿ ರೂಪುಗೊಳ್ಳುವ ಮಣ್ಣಿನ ಆಭರಣಗಳು ಇಮ್ಮಡಿಗೊಳಿಸುತ್ತವೆ. ದುರ್ಬೀನು ಹಾಕಿ ನೋಡಿದರೂ ಇದು ಮಣ್ಣಿನ ಆಭರಣವೆಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ. ಆದರೆ ಚೆಲುವಿನಲ್ಲಿ ಚಿನ್ನದ ಆಭರಣವನ್ನೂ ಮೀರಿಸುತ್ತವೆ. ಇದೀಗ ಈ ಆಭರಣಗಳೆಡೆಗಿನ ಆಸಕ್ತಿ ಹೆಚ್ಚುತ್ತಿದ್ದು ಮಹಿಳೆಯರನ್ನು ಆಕರ್ಷಿಸುತ್ತಿವೆ. ಹದಗೊಳಿಸಿದ ಮಣ್ಣಿನಿಂದ ರೂಪುಗೊಂಡ ಈ ಆಭರಣಗಳು ಗಟ್ಟಿತನವನ್ನು ಹೊಂದಿರುತ್ತವೆ. ನೀರು ಬಿದ್ದರೆ ಕರಗುತ್ತವೆ ಅಥವಾ ಅಂದ ಕಳೆದುಕೊಳ್ಳುತ್ತವೆ ಎಂಬ ಆತಂಕವೂ ಇರದು. ಸಭೆ-ಸಮಾರಂಭಗಳಲ್ಲಿ ಉಳಿದವರನ್ನು ತನ್ನತ್ತ ಆಕರ್ಷಿಸಿ, ಒಂದಷ್ಟು ಚರ್ಚೆಯನ್ನು ಸೃಷ್ಟಿಸುತ್ತವೆ ಮಣ್ಣಿನ ನಾಜೂಕಿನ ಆಭರಣಗಳು.

ನೇರ ಮಾರುಕಟ್ಟೆಯ ಜತೆಗೆ ನೀಲಿ ಲೋಹಿತ್ ಅವರು ತಮ್ಮ ಉತ್ಪನ್ನಗಳಿಗೆ ಆಧುನಿಕ ಮಾರುಕಟ್ಟೆ ವ್ಯವಸ್ಥೆಯನ್ನೂ ಕಂಡು ಕೊಂಡಿದ್ದಾರೆ. ಇದಕ್ಕಾಗಿ ಒಂದು ವೆಬ್ ಸೈಟ್ ಸೃಷ್ಟಿಸಿದ್ದಾರೆ. ಇದರ ಜತೆಗೆ ಸಾಮಾಜಿಕ ಜಾಲತಾಣ, ಫೇಸ್ ಬುಕ್, ಇನ್ಸ್ಟಾ ಗ್ರಾಮ್,ಯೂಟೂಬ್ ಕೂಡ ಇವರ ಆಭರಣ ಉತ್ಪನ್ನಗಳಿಗೆ ಗ್ರಾಹಕರನ್ನು ಒದಗಿಸಿಕೊಟ್ಟಿವೆ.

ಅಮೆರಿಕಾದ ಕ್ಯಾಲಿಫೋರ್ನಿಯಾ, ಉಗಾಂಡ, ದೆಹಲಿ,ಹೈದರಾಬಾದ್, ತಮಿಳುನಾಡು, ಗುಜರಾತ್ ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳ ಗ್ರಾಹಕರಿಗೆ ಇವರು ಮಣ್ಣಿನಿಂದ ತಯಾರಿಸಿದ ಮೂಗುತಿ,ಕಿವಿಯೋಲೆ, ಬೈತಲೆಬೊಟ್ಟು,ವಿವಿಧ ಮಾದರಿಯ ಕತ್ತಿನ ಸರಗಳು, ತೋಳ್ಬಂದಿ, ಸೊಂಟದಪಟ್ಟಿ, ಕಾಲ್ಗೆಜ್ಜೆ,ಜಡೆಬಿಲ್ಲೆ ಮುಂತಾದ ಮಣ್ಣಿನ ಆಭರಣಗಳು ತಲುಪಿ, ಜನಪ್ರಿಯತೆ ಗಳಿಸಿವೆ.

2017 ರ ಆರಂಭದಲ್ಲಿ ಶೂನ್ಯದಿಂದಲೇ ಆರಂಭವಾದ ಮಣ್ಣಿನ ಆಭರಣಗಳ ಕುಟೀರ 2019ರ ಸೆಪ್ಟಂಬರ್‌ನಲ್ಲಿ ‘ನೀಲಿಕಲಾ ಕ್ರಿಯೇಷನ್ಸ್ ’ ರೂಪ ತಾಳಿತು. ಕೊರೊನಾ ಸಂದರ್ಭದಲ್ಲಿ 9 ವರ್ಷದಿಂದ 60 ವರ್ಷದ ವರೆಗಿನ ಗೃಹಿಣಿಯರೂ ಆನ್‌ಲೈನ್ ತರಗತಿಯಲ್ಲಿ ಮಣ್ಣಿನ ಆಭರಣಗಳ ತಯಾರಿಕೆ ಕೌಶಲದ ಬಗ್ಗೆ ಕಲಿತಿದ್ದಾರೆ.ಸಾಕಷ್ಟು ಹೋರಾಟದ ನಂತರ ಕಳೆದ ವರ್ಷ ಕುವೆಂಪುನಗರ ಎಸ್‌ಬಿಐ ಶಾಖೆಯಿಂದ ಆರ್ಥಿಕ ನೆರವು ಸಿಕ್ಕಿದೆ. ಮರುಪಾವತಿಯೂ ಆಗುತ್ತಿದೆ. ಸಾಲಕೊಡುವಾಗ ಖಾತರಿಯ ಬಗ್ಗೆ ಹಿಂದೆಮುಂದೆ ನೋಡಿದ್ದ ಬ್ಯಾಂಕ್ ಅಧಿಕಾರಿಗಳು ನಿರಾಳರಾಗಿದ್ದಾರೆ.ನೀಲಿ ಕಲಾ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿಚ್ಚಿಸುವವರು ಮೊಬೈಲ್ ಸಂಖ್ಯೆ : 7676960671 ಇಲ್ಲಿ ಸಂಪರ್ಕಿಸಬಹುದು. ವೆಬ್‌ಸೈಟ್: www.Neelikala.com


8 ಮಂದಿಗೆ ಉದ್ಯೋಗ ಕೊಟ್ಟಿದ್ದೇನೆ. ಈ ಕೆಲಸದಲ್ಲಿ ‘ಕ್ರಿಯೇಟಿವಿಟಿ’ ಬಹಳ ಮುಖ್ಯ. ಅದೇ ಬಂಡವಾಳ, ಸದಾ ಹೊಸತರ ಬಗ್ಗೆ ಯೋಚಿಸುತ್ತಿರಬೇಕು, ಜನರೂ ಸಹ ಹೊಸ ಹೊಸ ವಿನ್ಯಾಸಗಳನ್ನು ಬಯಸುತ್ತಾರೆ. ಅದಕ್ಕೆ ನಾನೂ ಹೊಂದಿಕೊಂಡಿದ್ದೇನೆ. 5 ವರ್ಷಗಳ ಪರಿಶ್ರಮದ ನಂತರ ಸ್ಪಷ್ಟತೆ,ನೆಮ್ಮದಿ ಎರಡೂ ಸಿಕ್ಕಿದೆ.

-ನೀಲಿ ಲೋಹಿತ್.

————————-

ಇಂಟ್ರಾ :

ಹೊಸತು ಎಂಬುದು ನಿರಂತರ ಕ್ರಿಯಾಶೀಲತೆಗೆ ಸಂಬಂಧಪಟ್ಟದ್ದು, ಒಂದು ಪರಿಚಯವಾದರೆ ಮತ್ತೊಂದರ ಅವಿಷ್ಕಾರ ಆಗಲೇ ಬೇಕು. ಇದು ಆಧುನಿಕ ಜಗತ್ತಿನ ಅಭಿರುಚಿ, ಈ ಅಭಿರುಚಿ ನಿಂತ ನೀರಾಗಿರುವುದಿಲ್ಲ. ಸದಾ ಹೊಸದರೆಡೆಗಿನ ಸೆಳೆತ,ಆಕರ್ಷಣೆ ನಿರಂತರ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುತ್ತದೆ. ಶಿಲಾಯುಗದ ನಂತರ ನವ ನಾಗರಿಕ ಪ್ರಪಂಚದ ಮಸ್ತಿಷ್ಕಕಕ್ಕೆ ಹೊಳೆಯದೆ ಗೌಣವೆನಿಸಿದ್ದ ವಸ್ತುಗಳೆಲ್ಲ ಇವತ್ತಿನ ಕೌಶಲದ ನಾಜೂಕಿನ ಕೈಗಳಿಗೆ ಸಿಕ್ಕಿ ನವನವೀನ ರೂಪವನ್ನೇ ಪಡೆದುಕೊಳ್ಳುತ್ತಿವೆ. ಇಂತಹ ಕೌಶಲಗಳಲ್ಲಿ ಮಣ್ಣಿನ ‘ಟೆರ್ರಾಕೋಟಾ’ಕಲೆಯೂ ಒಂದು…!

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

15 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago