ಆಂದೋಲನ ಪುರವಣಿ

ವನಿತೆ ಮಮತೆ:ದೀಪದ ಹಬ್ಬಕ್ಕೆ ಚಿನ್ನ ಲೇಪಿತ ಬೆಳ್ಳಿ ಆಭರಣದ ಬೆಳಕು !

ಚೈತ್ರಾ ಎನ್. ಭವಾನಿ

ಲೈಫ್ ಸ್ಟೈಲ್ ಜರ್ನಲಿಸ್ಟ್

ಎಲ್ಲೆಲ್ಲೂ ಸುರು ಸುರು ಬತ್ತಿ ಬೆಳಕು. ಕತ್ತಲಲ್ಲಿ ಕಾರ್ತೀಕ ನಿಸರ್ಗದ ಚೆಲುವನ್ನು ತೋರಲು ದೀಪಗಳ ಹಬ್ಬ ಸಜ್ಜಾಗುತ್ತಿದೆ. ಬಂಗಾರದ ಅಂಗಡಿಗಳಲ್ಲೂ ವಿವಿಧ ವಿನ್ಯಾಸದ ಆಭರಣಗಳು ಗ್ರಾಹಕರನ್ನು ಸೆಳೆಯುತ್ತಿವೆ. ಬಂಗಾರದೊಡವೆ ಕೊಳ್ಳಲು ಸಾಧ್ಯವಿಲ್ಲದವರಿಗೆ ಚಿನ್ನ ಲೇಪಿತ ವರ್ಮೈಲ್ ಬೆಳ್ಳಿ ಆಭರಣಗಳು ಕೈ ಬೀಸಿ ಕರೆಯುತ್ತಿವೆ. ಅಷ್ಟೇ ಅಲ್ಲ, ಚಿನ್ನ ಬೇಡ ಎನ್ನುವವರಿಗೆ ಚಿನ್ನದಷ್ಟೇ ಅಂದ ಹೆಚ್ಚಿಸುವ ಈ ಆಭರಣಗಳು ಸದ್ಯದ ಟ್ರೆಂಡ್.

ಏನಿದು ವರ್ಮೈಲ್ ಆಭರಣಗಳು?

ಬೆಳ್ಳಿಯನ್ನು ಚಿನ್ನದಿಂದ ಎಲೆಕ್ಟ್ರೋಪ್ಲೇಟಿಂಗ್ ವಾಡುವ ಮೂಲಕ ಈ ಆಭರಣಗಳನ್ನು ವಿನ್ಯಾಸ ವಾಡಲಾಗಿದೆ. ಮೂಲ ಬೆಳ್ಳಿಯ ಆಭರಣವೇ ಆಗಿದ್ದರೂ ಗೋಲ್ಡ್ ಪ್ಲೇಟಿಂಗ್ ಮೂಲಕ ಚಿನ್ನದ ಆಭರಣದಂತೆ ಕಂಗೊಳಿಸುತ್ತದೆ. ಚಿನ್ನವನ್ನು ಬಿಟ್ಟರೇ ಚಿನ್ನದಷ್ಟೇ ಗುಣಮಟ್ಟದ ಆಭರಣಕ್ಕಾಗಿ ವರ್ಮೈಲ್ ಆಭರಣಗಳನ್ನು ಧರಿಸಬಹುದು.

ಯಾವೆಲ್ಲ ಡಿಸೈನ್ಸ್ ಇವೆ?

ನೆಕ್ಲೆಸ್, ಶಾರ್ಟ್ ಚೈನ್, ಲಾಂಗ್ ನೆಕ್ಲೆಸ್, ಕುಂದನ್ ಜುವ್ಕಾ, ಮುತ್ತಿನ ವಿನ್ಯಾಸದ ನೆಕ್ಲೆಸ್, ಕೈ ಕಡಗ, ಬಳೆ, ಉಂಗುರು ಸೇರಿದಂತೆ ಚಿನ್ನದ ಆಭರಣದಲ್ಲಿ ದೊರಕುವಂತೆ ಎಲ್ಲ ವಿನ್ಯಾಸಗಳೂ ಲಭ್ಯ.

ಬೆಲೆ ಎಷ್ಟು ?
ಉಂಗುರಗಳು ೧,೧೦೦ ರೂ. ನಿಂದ ಆರಂಭವಾದರೆ, ಶಾರ್ಟ್ ಸಾದಾ ನೆಕ್ಲೆಸ್ ೫,೦೦೦ ರೂ. ನಲ್ಲೂ ಲಭ್ಯವಿದೆ. ಇನ್ನೂ ಪರ್ಲ್, ಕುಂದನ್ ವಿನ್ಯಾಸದ ನೆಕ್ಲೆಸ್‌ಗಳು ೨೦,೦೦೦ ರೂ. ವರೆಗೂ ದೊರೆಯುತ್ತವೆ. ಇವೆಲ್ಲವುಗಳ ಬೆಲೆ ನಿಮ್ಮ ಆಯ್ಕೆಯ ಮೇಲೆ ನಿರ್ಧಾರ ಆಗುತ್ತದೆ.

ಕಸ್ಟಮೈಸ್ ಮತ್ತು ರೆಡಿ ಆಭರಣಗಳು ಲಭ್ಯ
ನಿಮಗಿಷ್ಟ ಬಂದ ಡಿಸೈನ್‌ಗಳನ್ನೂ ಹೇಳಿ. ಕಸ್ಟಮೈಸ್ ವಾಡಿಸಿಕೊಳ್ಳಬಹುದು. ಇಲ್ಲವೇ ಜ್ಯುವೆಲ್ಲರಿ ಅಂಗಡಿ, ಆನ್‌ಲೈನ್ ವಾರುಕಟ್ಟೆಯಲ್ಲೂ ವರ್ಮೈಲ್ ಆಭರಣಗಳು ಲಭ್ಯವಿವೆ.

ದಿನ ನಿತ್ಯ ಧರಿಸಲು ಸೂಕ್ತವೇ?

ಹಬ್ಬ, ಫಂಕ್ಷನ್‌ಗಳಿಗೆ ವಾತ್ರ ಈ ಆಭರಣ ಹೊಂದುತ್ತವೆ. ಪ್ರತಿನಿತ್ಯ ಧರಿಸುವುದರಿಂದ ಚಿನ್ನದ ಲೇಪನ ಬಹು ಬೇಗನೇ ವಾಸುವ ಸಾಧ್ಯತೆ ಇದೆ.

ನಿರ್ವಹಣೆ ಹೇಗೆ?
ಅಪರೂಪಕ್ಕೆ ಒಮ್ಮೆ ಡಿಶ್ ವಾಷಿಂಗ್ ಡಿಟರ್ಜೆಂಟ್‌ನಲ್ಲಿ ಬೆಚ್ಚಗಿನ ನೀರಿನಲ್ಲಿ ತೊಳೆದು ಗಾಳಿಯಾಡುವ ಜಾಗದಲ್ಲಿ ಇಟ್ಟು ಒಣಗಿಸಿ, ಜೋಪಾನವಾಗಿ ಎತ್ತಿಟ್ಟುಕೊಳ್ಳಬೇಕು. ಸೋಪು, ಶ್ಯಾಂಪೂ ಕೆಮಿಕಲ್ ತಗುಲದಂತೆ ನೋಡಿಕೊಂಡರೆ ದೀರ್ಘಕಾಲ ಬಾಳಿಕೆ ಬರುತ್ತವೆ.

ರೀಸೇಲ್ ವ್ಯಾಲ್ಯೂ ಕಡಿಮೆ
ಈ ಆಭರಣಗಳನ್ನು ವಾರಾಟ ವಾಡಲು ಬಯಸಿದರೇ ಇದರ ಬೆಲೆ ಸಹಜವಾಗಿಯೇ ಕಡಿಮೆಯಾಗುತ್ತದೆ.

ಈ ದೀಪಾವಳಿಗೆ ಚಿನ್ನದಷ್ಟೇ ಮೆರುಗು ನೀಡುವ ಚಿನ್ನ ಲೇಪಿತ ಬೆಳ್ಳಿ ಆಭರಣಗಳನ್ನು ಧರಿಸಿ ಚಿನ್ನದ ಖುಷಿಯನ್ನು ಅನುಭವಿಸಬಹುದು. ನವ ವಧುವರರಿಗೆ ಅಮ್ಮನ ಮನೆಯ ದೀಪಾವಳಿ ಉಡುಗೊರೆಯೂ ಆಗಬಹುದು.

andolanait

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

56 mins ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

59 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

2 hours ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago