ಆಂದೋಲನ ಪುರವಣಿ

ವನಿತೆ ಮಮತೆ:ದೀಪದ ಹಬ್ಬಕ್ಕೆ ಚಿನ್ನ ಲೇಪಿತ ಬೆಳ್ಳಿ ಆಭರಣದ ಬೆಳಕು !

ಚೈತ್ರಾ ಎನ್. ಭವಾನಿ

ಲೈಫ್ ಸ್ಟೈಲ್ ಜರ್ನಲಿಸ್ಟ್

ಎಲ್ಲೆಲ್ಲೂ ಸುರು ಸುರು ಬತ್ತಿ ಬೆಳಕು. ಕತ್ತಲಲ್ಲಿ ಕಾರ್ತೀಕ ನಿಸರ್ಗದ ಚೆಲುವನ್ನು ತೋರಲು ದೀಪಗಳ ಹಬ್ಬ ಸಜ್ಜಾಗುತ್ತಿದೆ. ಬಂಗಾರದ ಅಂಗಡಿಗಳಲ್ಲೂ ವಿವಿಧ ವಿನ್ಯಾಸದ ಆಭರಣಗಳು ಗ್ರಾಹಕರನ್ನು ಸೆಳೆಯುತ್ತಿವೆ. ಬಂಗಾರದೊಡವೆ ಕೊಳ್ಳಲು ಸಾಧ್ಯವಿಲ್ಲದವರಿಗೆ ಚಿನ್ನ ಲೇಪಿತ ವರ್ಮೈಲ್ ಬೆಳ್ಳಿ ಆಭರಣಗಳು ಕೈ ಬೀಸಿ ಕರೆಯುತ್ತಿವೆ. ಅಷ್ಟೇ ಅಲ್ಲ, ಚಿನ್ನ ಬೇಡ ಎನ್ನುವವರಿಗೆ ಚಿನ್ನದಷ್ಟೇ ಅಂದ ಹೆಚ್ಚಿಸುವ ಈ ಆಭರಣಗಳು ಸದ್ಯದ ಟ್ರೆಂಡ್.

ಏನಿದು ವರ್ಮೈಲ್ ಆಭರಣಗಳು?

ಬೆಳ್ಳಿಯನ್ನು ಚಿನ್ನದಿಂದ ಎಲೆಕ್ಟ್ರೋಪ್ಲೇಟಿಂಗ್ ವಾಡುವ ಮೂಲಕ ಈ ಆಭರಣಗಳನ್ನು ವಿನ್ಯಾಸ ವಾಡಲಾಗಿದೆ. ಮೂಲ ಬೆಳ್ಳಿಯ ಆಭರಣವೇ ಆಗಿದ್ದರೂ ಗೋಲ್ಡ್ ಪ್ಲೇಟಿಂಗ್ ಮೂಲಕ ಚಿನ್ನದ ಆಭರಣದಂತೆ ಕಂಗೊಳಿಸುತ್ತದೆ. ಚಿನ್ನವನ್ನು ಬಿಟ್ಟರೇ ಚಿನ್ನದಷ್ಟೇ ಗುಣಮಟ್ಟದ ಆಭರಣಕ್ಕಾಗಿ ವರ್ಮೈಲ್ ಆಭರಣಗಳನ್ನು ಧರಿಸಬಹುದು.

ಯಾವೆಲ್ಲ ಡಿಸೈನ್ಸ್ ಇವೆ?

ನೆಕ್ಲೆಸ್, ಶಾರ್ಟ್ ಚೈನ್, ಲಾಂಗ್ ನೆಕ್ಲೆಸ್, ಕುಂದನ್ ಜುವ್ಕಾ, ಮುತ್ತಿನ ವಿನ್ಯಾಸದ ನೆಕ್ಲೆಸ್, ಕೈ ಕಡಗ, ಬಳೆ, ಉಂಗುರು ಸೇರಿದಂತೆ ಚಿನ್ನದ ಆಭರಣದಲ್ಲಿ ದೊರಕುವಂತೆ ಎಲ್ಲ ವಿನ್ಯಾಸಗಳೂ ಲಭ್ಯ.

ಬೆಲೆ ಎಷ್ಟು ?
ಉಂಗುರಗಳು ೧,೧೦೦ ರೂ. ನಿಂದ ಆರಂಭವಾದರೆ, ಶಾರ್ಟ್ ಸಾದಾ ನೆಕ್ಲೆಸ್ ೫,೦೦೦ ರೂ. ನಲ್ಲೂ ಲಭ್ಯವಿದೆ. ಇನ್ನೂ ಪರ್ಲ್, ಕುಂದನ್ ವಿನ್ಯಾಸದ ನೆಕ್ಲೆಸ್‌ಗಳು ೨೦,೦೦೦ ರೂ. ವರೆಗೂ ದೊರೆಯುತ್ತವೆ. ಇವೆಲ್ಲವುಗಳ ಬೆಲೆ ನಿಮ್ಮ ಆಯ್ಕೆಯ ಮೇಲೆ ನಿರ್ಧಾರ ಆಗುತ್ತದೆ.

ಕಸ್ಟಮೈಸ್ ಮತ್ತು ರೆಡಿ ಆಭರಣಗಳು ಲಭ್ಯ
ನಿಮಗಿಷ್ಟ ಬಂದ ಡಿಸೈನ್‌ಗಳನ್ನೂ ಹೇಳಿ. ಕಸ್ಟಮೈಸ್ ವಾಡಿಸಿಕೊಳ್ಳಬಹುದು. ಇಲ್ಲವೇ ಜ್ಯುವೆಲ್ಲರಿ ಅಂಗಡಿ, ಆನ್‌ಲೈನ್ ವಾರುಕಟ್ಟೆಯಲ್ಲೂ ವರ್ಮೈಲ್ ಆಭರಣಗಳು ಲಭ್ಯವಿವೆ.

ದಿನ ನಿತ್ಯ ಧರಿಸಲು ಸೂಕ್ತವೇ?

ಹಬ್ಬ, ಫಂಕ್ಷನ್‌ಗಳಿಗೆ ವಾತ್ರ ಈ ಆಭರಣ ಹೊಂದುತ್ತವೆ. ಪ್ರತಿನಿತ್ಯ ಧರಿಸುವುದರಿಂದ ಚಿನ್ನದ ಲೇಪನ ಬಹು ಬೇಗನೇ ವಾಸುವ ಸಾಧ್ಯತೆ ಇದೆ.

ನಿರ್ವಹಣೆ ಹೇಗೆ?
ಅಪರೂಪಕ್ಕೆ ಒಮ್ಮೆ ಡಿಶ್ ವಾಷಿಂಗ್ ಡಿಟರ್ಜೆಂಟ್‌ನಲ್ಲಿ ಬೆಚ್ಚಗಿನ ನೀರಿನಲ್ಲಿ ತೊಳೆದು ಗಾಳಿಯಾಡುವ ಜಾಗದಲ್ಲಿ ಇಟ್ಟು ಒಣಗಿಸಿ, ಜೋಪಾನವಾಗಿ ಎತ್ತಿಟ್ಟುಕೊಳ್ಳಬೇಕು. ಸೋಪು, ಶ್ಯಾಂಪೂ ಕೆಮಿಕಲ್ ತಗುಲದಂತೆ ನೋಡಿಕೊಂಡರೆ ದೀರ್ಘಕಾಲ ಬಾಳಿಕೆ ಬರುತ್ತವೆ.

ರೀಸೇಲ್ ವ್ಯಾಲ್ಯೂ ಕಡಿಮೆ
ಈ ಆಭರಣಗಳನ್ನು ವಾರಾಟ ವಾಡಲು ಬಯಸಿದರೇ ಇದರ ಬೆಲೆ ಸಹಜವಾಗಿಯೇ ಕಡಿಮೆಯಾಗುತ್ತದೆ.

ಈ ದೀಪಾವಳಿಗೆ ಚಿನ್ನದಷ್ಟೇ ಮೆರುಗು ನೀಡುವ ಚಿನ್ನ ಲೇಪಿತ ಬೆಳ್ಳಿ ಆಭರಣಗಳನ್ನು ಧರಿಸಿ ಚಿನ್ನದ ಖುಷಿಯನ್ನು ಅನುಭವಿಸಬಹುದು. ನವ ವಧುವರರಿಗೆ ಅಮ್ಮನ ಮನೆಯ ದೀಪಾವಳಿ ಉಡುಗೊರೆಯೂ ಆಗಬಹುದು.

andolanait

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

5 mins ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

6 mins ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

8 mins ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

10 mins ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

14 mins ago

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…

17 mins ago