ರಮ್ಯ ಅರವಿಂದ್

ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ ಮಹತ್ವ ಹೊಂದಿದೆ. ಅಂತಹ ಆಯುರ್ವೇದ ಅಂಶಗಳಲ್ಲಿರುವ ಗಿಡಮೂಲಿಕೆಗಳ ಪೈಕಿ ‘ ಲೆಮನ್ ಗ್ರಾಸ್ ಅಥವಾ ನಿಂಬೆ ಹುಲ್ಲು’ ಕೂಡ ಅತ್ಯಂತ ಪರಿಣಾಮಕಾರಿಯಾಗಿದೆ. ಈ ಸಸ್ಯವು ನಿಂಬೆಹಣ್ಣಿನ ಸುವಾಸನೆ ಬೀರುವುದರಿಂದ ಇದನ್ನು ನಿಂಬೆ ಹುಲ್ಲು’ ಎಂದು ಕರೆಯುತ್ತಾರೆ.

ಈ ನಿಂಬೆಹುಲ್ಲು ಸಸ್ಯದಿಂದ ಕಾಂತಿವರ್ಧಕಗಳು ಹಾಗೂ ಸೋಂಕು ನಿವಾರಕ ಔಷಧಿಗಳನ್ನು ತಯಾರಿಸಬಹುದಾಗಿದೆ. ಜೊತೆಗೆ ಇದೊಂದು ಆಹಾರ ಪದಾರ್ಥವೂ ಆಗಿದ್ದು, ವಿವಿಧ ಆಹಾರ ತಯಾರಿಕೆಯಲ್ಲಿ ಬಳಕೆ ಮಾಡಿಕೊಳ್ಳಬಹುದು. ಈ ಸಸ್ಯದಲ್ಲಿ ಔಷಧಿಯ ಗುಣವಿರುವುದು ವಿಶೇಷವಾಗಿದ್ದು, ಇದನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಮನುಷ್ಯನಿಗೆ ಹೆಚ್ಚು ಪರಿಣಾಮಕಾರಿಯಾಗಿರುವ ಈ ಸಸ್ಯವನ್ನು ನಾವು ನಮ್ಮ ಮನೆಯ ಹಿತ್ತಲಿನಲ್ಲಿ ಅಥವಾ ದೊಡ್ಡ ಪಾಟ್‌ಗಳಲ್ಲಿ ಬೆಳೆಸಿಕೊಂಡು ಆಗಾಗ್ಗೆ ಬಳಸುವುದು ನಮ್ಮ ಆರೋಗ್ಯಕ್ಕೆ ಹೆಚ್ಚು ಪರಿಣಾಮಕಾರಿ.

ಇತ್ತೀಚಿನ ಯುವಸಮೂಹ ಸಂಜೆಯಾಗುತ್ತಲೇ ಜಂಕ್‌ ಫುಡ್, ಸ್ಟಾಕ್ಸ್‌ಗಳ ಸೇವನೆಗೆ ಜೋತುಬಿದ್ದು, ದೇಹದಲ್ಲಿ ಅನಗತ್ಯ ಕೊಬ್ಬು ಶೇಖರಣೆ ಮಾಡಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಇಂತಹ ಅನವಶ್ಯಕ ಕೊಬ್ಬಿನಂಶವನ್ನು ಕರಗಿಸಲು ಈ ನಿಂಬೆಹುಲ್ಲು ಹೆಚ್ಚು ಉಪಯೋಗವಾಗಿದೆ. ಚಹ ಅಥವಾ ಕಷಾಯದ ರೂಪದಲ್ಲಿ ಮಾಡಿಕೊಂಡು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಅಲ್ಲದೆ ಅಜೀರ್ಣ ಹಾಗೂ ಚರ್ಮ ಸಂಬಂಧಿತ ಸಮಸ್ಯೆಗಳನ್ನೂ ನಿವಾರಿಸಿ ಕೊಳ್ಳಲು ಇದು ಹೇಳಿ ಮಾಡಿಸಿದ ಮನೆ ಮದ್ದು.

ನಿಂಬೆಹುಲ್ಲಿನ ಚಹಾ: ಒಂದು ಪಾತ್ರೆಯಲ್ಲಿ ನೀರನ್ನು ಚೆನ್ನಾಗಿ ಕುದಿಸಿಕೊಂಡು ಕುದಿಸಿದ ನೀರಿಗೆ ಸಣ್ಣಗೆ ಕತ್ತರಿಸಿಕೊಂಡ ನಿಂಬೆ ಹುಲ್ಲನ್ನು ಹಾಕಿಕೊಳ್ಳಬೇಕು. ಐದು ನಿಮಿಷಗಳ ಕಾಲ ಹಾಗೆಯೇ ಅದನ್ನು ಮುಚ್ಚಿಟ್ಟು ನಂತರ ಸೋಸಿ ಕೊಂಡು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

ಲೆಮನ್ ಗ್ರಾಸ್ ತಂಬುಳಿ: ಲೆಮನ್ ಗ್ರಾಸನ್ನು ಸಣ್ಣದಾಗಿ ಕತ್ತರಿಸಿ ಅದರ ಜೊತೆ ತಾಜಾ ತೆಂಗಿನ ತುರಿ, ಸ್ವಲ್ಪ ಜೀರಿಗೆ, ಒಂದೆರಡು ಹಸಿಮೆಣಸಿನಕಾಯಿ, ಸ್ವಲ್ಪ ನೀರನ್ನು ಸೇರಿಸಿಚೆನ್ನಾಗಿ ರುಬ್ಬಿಕೊಳ್ಳುವುದು ನಂತರ ಅದನ್ನು ಒಂದು ಪಾತ್ರೆಗೆ ಸೋಸಿಕೊಂಡು ಆ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಮಜ್ಜಿಗೆ ಅಥವಾ ಮೊಸರನ್ನು ಸೇರಿಸಿ ಬಳಸುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತದೆ. ಜೊತೆಗೆ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಸಮತೋಲನವಾಗಿಡಲು ಸಹಾಯಕವಾಗಿದೆ.
ಇನ್ನು ಈ ನಿಂಬೆಹುಲ್ಲು ದಂತದ ಆರೋಗ್ಯಕ್ಕೂ ಹೆಚ್ಚು ಪರಿಣಾಮಕಾರಿ. ನಿಂಬೆಹುಲ್ಲನ್ನು ಬಾಯಿಗೆ ಹಾಕಿ ಜಗಿದರೆ ಬ್ಯಾಕ್ಟಿರಿಯಾ ಹಾಗೂ ಕ್ಯಾವಿಟಿಸ್ ಸಮಸ್ಯೆಯಿಂದ ದೂರವಿರಬಹುದು ಈ ಕುರಿತು ಫುಡ್ ಕೆಮಿಸ್ಟಿ ಜರ್ನಲ್‌ನಲ್ಲಿಯೂ ವರದಿ ಮಾಡಲಾಗಿದೆ. ಇಂತಹ ಬಹುಪಯೋಗಿ ನಿಂಬೆಹುಲ್ಲನ್ನು ಎಲ್ಲಿ ಸಿಕ್ಕಿದರು ಬಿಡದೆ ತಂದು ನಿಮ್ಮ ಮನೆಯ ತೋಟದಲ್ಲಿ ಬೆಳೆಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

abhigna.ramya@gmail.com

andolanait

Share
Published by
andolanait

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

2 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

5 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

6 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

6 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

6 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

7 hours ago