ರಮ್ಯ ಅರವಿಂದ್

ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ ಮಹತ್ವ ಹೊಂದಿದೆ. ಅಂತಹ ಆಯುರ್ವೇದ ಅಂಶಗಳಲ್ಲಿರುವ ಗಿಡಮೂಲಿಕೆಗಳ ಪೈಕಿ ‘ ಲೆಮನ್ ಗ್ರಾಸ್ ಅಥವಾ ನಿಂಬೆ ಹುಲ್ಲು’ ಕೂಡ ಅತ್ಯಂತ ಪರಿಣಾಮಕಾರಿಯಾಗಿದೆ. ಈ ಸಸ್ಯವು ನಿಂಬೆಹಣ್ಣಿನ ಸುವಾಸನೆ ಬೀರುವುದರಿಂದ ಇದನ್ನು ನಿಂಬೆ ಹುಲ್ಲು’ ಎಂದು ಕರೆಯುತ್ತಾರೆ.

ಈ ನಿಂಬೆಹುಲ್ಲು ಸಸ್ಯದಿಂದ ಕಾಂತಿವರ್ಧಕಗಳು ಹಾಗೂ ಸೋಂಕು ನಿವಾರಕ ಔಷಧಿಗಳನ್ನು ತಯಾರಿಸಬಹುದಾಗಿದೆ. ಜೊತೆಗೆ ಇದೊಂದು ಆಹಾರ ಪದಾರ್ಥವೂ ಆಗಿದ್ದು, ವಿವಿಧ ಆಹಾರ ತಯಾರಿಕೆಯಲ್ಲಿ ಬಳಕೆ ಮಾಡಿಕೊಳ್ಳಬಹುದು. ಈ ಸಸ್ಯದಲ್ಲಿ ಔಷಧಿಯ ಗುಣವಿರುವುದು ವಿಶೇಷವಾಗಿದ್ದು, ಇದನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಮನುಷ್ಯನಿಗೆ ಹೆಚ್ಚು ಪರಿಣಾಮಕಾರಿಯಾಗಿರುವ ಈ ಸಸ್ಯವನ್ನು ನಾವು ನಮ್ಮ ಮನೆಯ ಹಿತ್ತಲಿನಲ್ಲಿ ಅಥವಾ ದೊಡ್ಡ ಪಾಟ್‌ಗಳಲ್ಲಿ ಬೆಳೆಸಿಕೊಂಡು ಆಗಾಗ್ಗೆ ಬಳಸುವುದು ನಮ್ಮ ಆರೋಗ್ಯಕ್ಕೆ ಹೆಚ್ಚು ಪರಿಣಾಮಕಾರಿ.

ಇತ್ತೀಚಿನ ಯುವಸಮೂಹ ಸಂಜೆಯಾಗುತ್ತಲೇ ಜಂಕ್‌ ಫುಡ್, ಸ್ಟಾಕ್ಸ್‌ಗಳ ಸೇವನೆಗೆ ಜೋತುಬಿದ್ದು, ದೇಹದಲ್ಲಿ ಅನಗತ್ಯ ಕೊಬ್ಬು ಶೇಖರಣೆ ಮಾಡಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಇಂತಹ ಅನವಶ್ಯಕ ಕೊಬ್ಬಿನಂಶವನ್ನು ಕರಗಿಸಲು ಈ ನಿಂಬೆಹುಲ್ಲು ಹೆಚ್ಚು ಉಪಯೋಗವಾಗಿದೆ. ಚಹ ಅಥವಾ ಕಷಾಯದ ರೂಪದಲ್ಲಿ ಮಾಡಿಕೊಂಡು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಅಲ್ಲದೆ ಅಜೀರ್ಣ ಹಾಗೂ ಚರ್ಮ ಸಂಬಂಧಿತ ಸಮಸ್ಯೆಗಳನ್ನೂ ನಿವಾರಿಸಿ ಕೊಳ್ಳಲು ಇದು ಹೇಳಿ ಮಾಡಿಸಿದ ಮನೆ ಮದ್ದು.

ನಿಂಬೆಹುಲ್ಲಿನ ಚಹಾ: ಒಂದು ಪಾತ್ರೆಯಲ್ಲಿ ನೀರನ್ನು ಚೆನ್ನಾಗಿ ಕುದಿಸಿಕೊಂಡು ಕುದಿಸಿದ ನೀರಿಗೆ ಸಣ್ಣಗೆ ಕತ್ತರಿಸಿಕೊಂಡ ನಿಂಬೆ ಹುಲ್ಲನ್ನು ಹಾಕಿಕೊಳ್ಳಬೇಕು. ಐದು ನಿಮಿಷಗಳ ಕಾಲ ಹಾಗೆಯೇ ಅದನ್ನು ಮುಚ್ಚಿಟ್ಟು ನಂತರ ಸೋಸಿ ಕೊಂಡು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

ಲೆಮನ್ ಗ್ರಾಸ್ ತಂಬುಳಿ: ಲೆಮನ್ ಗ್ರಾಸನ್ನು ಸಣ್ಣದಾಗಿ ಕತ್ತರಿಸಿ ಅದರ ಜೊತೆ ತಾಜಾ ತೆಂಗಿನ ತುರಿ, ಸ್ವಲ್ಪ ಜೀರಿಗೆ, ಒಂದೆರಡು ಹಸಿಮೆಣಸಿನಕಾಯಿ, ಸ್ವಲ್ಪ ನೀರನ್ನು ಸೇರಿಸಿಚೆನ್ನಾಗಿ ರುಬ್ಬಿಕೊಳ್ಳುವುದು ನಂತರ ಅದನ್ನು ಒಂದು ಪಾತ್ರೆಗೆ ಸೋಸಿಕೊಂಡು ಆ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಮಜ್ಜಿಗೆ ಅಥವಾ ಮೊಸರನ್ನು ಸೇರಿಸಿ ಬಳಸುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತದೆ. ಜೊತೆಗೆ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಸಮತೋಲನವಾಗಿಡಲು ಸಹಾಯಕವಾಗಿದೆ.
ಇನ್ನು ಈ ನಿಂಬೆಹುಲ್ಲು ದಂತದ ಆರೋಗ್ಯಕ್ಕೂ ಹೆಚ್ಚು ಪರಿಣಾಮಕಾರಿ. ನಿಂಬೆಹುಲ್ಲನ್ನು ಬಾಯಿಗೆ ಹಾಕಿ ಜಗಿದರೆ ಬ್ಯಾಕ್ಟಿರಿಯಾ ಹಾಗೂ ಕ್ಯಾವಿಟಿಸ್ ಸಮಸ್ಯೆಯಿಂದ ದೂರವಿರಬಹುದು ಈ ಕುರಿತು ಫುಡ್ ಕೆಮಿಸ್ಟಿ ಜರ್ನಲ್‌ನಲ್ಲಿಯೂ ವರದಿ ಮಾಡಲಾಗಿದೆ. ಇಂತಹ ಬಹುಪಯೋಗಿ ನಿಂಬೆಹುಲ್ಲನ್ನು ಎಲ್ಲಿ ಸಿಕ್ಕಿದರು ಬಿಡದೆ ತಂದು ನಿಮ್ಮ ಮನೆಯ ತೋಟದಲ್ಲಿ ಬೆಳೆಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

abhigna.ramya@gmail.com

andolanait

Share
Published by
andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

14 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

16 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

18 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

18 hours ago