ಸಧ್ಯ ಮೈಸೂರು ಅರಮನೆಯ ಹಿಂದಿನ ಆನೆ ಬಿಡಾರವೊಂದರ ವಾಸಿಯಾಗಿರುವ ದೋಬಿ ಎಂಬ ಈ ಜೇನುಕುರುಬರ ಹಿರಿಯ ಮೂಲತಃ ಕೊಡಗು ಜಿಲ್ಲೆ ಕುಶಾಲನಗರದ ಬಳಿಯ ದುಬಾರೆ ಆನೆಕ್ಯಾಂಪಿನ ಕಾವೇರಿ ಎಂಬ ಆನೆಯ ಮಾವುತರಾಗಿರುವವರು. ಕಾಡಾನೆಗಳ ಕುರಿತೂ, ಜೇನು ನೊಣಗಳ ಕುರಿತೂ, ನಾಶವಾಗುತ್ತಿರುವ ಆದಿವಾಸಿಗಳ ಬದುಕಿನ ಕುರಿತು ಹಾಡೂ ಹಾಡಬಲ್ಲ, ಕಥೆಯೂ ಹೇಳಬಲ್ಲ, ಭಾಷಣವನ್ನೂ ಮಾಡಬಲ್ಲ ದೋಬಿ ಹಠದ ಮನುಷ್ಯ. ತಮ್ಮ ಆನೆ ಕಾವೇರಿ ಎಂಬ ಕುಮ್ಕಿ ಆನೆ ಮತ್ತು ಹೆಂಡತಿ, ಮಕ್ಕಳು ಮೊಮ್ಮಕ್ಕಳ ಜೊತೆಗೆ ಕಳೆದ ಹಲವು ವರ್ಷಗಳಿಂದ ಮೈಸೂರು ಅರಮನೆಗೆ ದಸರಾದ ಹೊತ್ತಿಗೆ ಬಂದು ವಿಜಯದಶಮಿ ಮುಗಿಸಿ ದುಬಾರೆಗೆ ಹಿಂತಿರುಗುವ ದೋಬಿ ಬಾಯಿ ಬಿಟ್ಟರೆ ಜೇನುಕುರುಬ ಜನಾಂಗದ ತಲೆತಲಾಂತರಗಳ ಕಥೆಯನ್ನು ಹೇಳಬಲ್ಲವರು. ಜೊತೆಗೆ ಜೇನುಕುರುಬ ಮಕ್ಕಳ ಈಗಿನ ಅತಂತ್ರ ಸ್ಥಿತಿಯನ್ನು ಕಲ್ಲೂ ನೀರೂ ಕರಗುವ ಹಾಗೆ ವಿವರಿಸಬಲ್ಲವರು.
ಯಾವಾಗಲೂ ಜೊತೆಯಲ್ಲಿ ಮಡದಿಯನ್ನೂ, ಮೊಮ್ಮಕ್ಕಳನ್ನೂ ಕರೆದುಕೊಂಡು ಮೈಸೂರು ಅರಮನೆಗೆ ಬರುವ ದೋಬಿಯವರು ಈ ಸಲದ ದಸರೆಗೆ ಏಕಾಂಗಿಯಾಗಿ ಬಂದಿರುವರು. ಕಾರಣ ಇವರ ಮೊಮ್ಮಗಳು ಅವಳಿ ಮಕ್ಕಳನ್ನು ಹೆತ್ತಿರುವಳು. ಅವಧಿ ಪೂರ್ಣವಾಗುವ ಮೊದಲೇ ಅಕಾಲಿಕವಾಗಿ ಜನಿಸಿದ ಆ ಅವಳಿ ಹಸುಗೂಸುಗಳು ಮಡಿಕೇರಿಯ ಸರಕಾರೀ ಆಸ್ಪತ್ರೆಯ ಇನ್ಕ್ಯುಬೇಟರಿನಲ್ಲಿ ಹಲವು ದಿನಗಳಿಂದ ಮಲಗಿರುವವು. ಆ ಚಿಂತೆಯಲ್ಲಿ ದುಬಾರೆಯಲ್ಲೇ ಉಳಿದಿರುವ ಮಡದಿ ಮಕ್ಕಳನ್ನು ನೆನೆದುಕೊಂಡು ದೋಬಿಯವರು ಮೈಸೂರಿನಲ್ಲಿ ಕಾವೇರಿ ಆನೆಯ ಜೊತೆ ತಮ್ಮ ಕಷ್ಟಸುಖಗಳನ್ನು ಮಾತಾಡಿಕೊಂಡು ದಿನ ದೂಡುತ್ತಿರುವರು.
ಇದು ದೋಬಿ ಎಂಬ ಒಬ್ಬ ಮಾವುತನ ಕಥೆ. ಮೈಸೂರು ಸುತ್ತಲಿನ ಹಲವು ಆನೆ ಕ್ಯಾಂಪುಗಳಿಂದ ಆನೆಯ ಸಮೇತ ಮೈಸೂರಿಗೆ ಬಂದಿರುವ ಎಲ್ಲ ಮಾವುತ ಕಾವಾಡಿಯರದ್ದೂ ಹೀಗೆ ಒಂದೊಂದು ಚಿಂತೆಯ ಕಥೆಗಳು. ಮೈಸೂರಿನ ಅರಮನೆಯ ಹಿಂದಿನ ಆನೆ ಬಿಡಾರಗಳಲ್ಲಿ ಇರುವಷ್ಟು ದಿನ ಅಷ್ಟಿಷ್ಟು ಸಂತೋಷದಲ್ಲಿ ಇರುವ ಇವರೆಲ್ಲ ವಾಪಾಸು ಹೋದ ಮೇಲೆ ಅವರದ್ದೂ ಇದೇ ಬದುಕು, ಇದೇ ಕಥೆ ಮತ್ತು ನಮಗೆ ಯಾರಿಗೂ ಅರಿವೇ ಆಗದ ನೂರಾರು ಖಾಸಗೀ ವ್ಯಥೆಗಳು!
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…