ಸಧ್ಯ ಮೈಸೂರು ಅರಮನೆಯ ಹಿಂದಿನ ಆನೆ ಬಿಡಾರವೊಂದರ ವಾಸಿಯಾಗಿರುವ ದೋಬಿ ಎಂಬ ಈ ಜೇನುಕುರುಬರ ಹಿರಿಯ ಮೂಲತಃ ಕೊಡಗು ಜಿಲ್ಲೆ ಕುಶಾಲನಗರದ ಬಳಿಯ ದುಬಾರೆ ಆನೆಕ್ಯಾಂಪಿನ ಕಾವೇರಿ ಎಂಬ ಆನೆಯ ಮಾವುತರಾಗಿರುವವರು. ಕಾಡಾನೆಗಳ ಕುರಿತೂ, ಜೇನು ನೊಣಗಳ ಕುರಿತೂ, ನಾಶವಾಗುತ್ತಿರುವ ಆದಿವಾಸಿಗಳ ಬದುಕಿನ ಕುರಿತು ಹಾಡೂ ಹಾಡಬಲ್ಲ, ಕಥೆಯೂ ಹೇಳಬಲ್ಲ, ಭಾಷಣವನ್ನೂ ಮಾಡಬಲ್ಲ ದೋಬಿ ಹಠದ ಮನುಷ್ಯ. ತಮ್ಮ ಆನೆ ಕಾವೇರಿ ಎಂಬ ಕುಮ್ಕಿ ಆನೆ ಮತ್ತು ಹೆಂಡತಿ, ಮಕ್ಕಳು ಮೊಮ್ಮಕ್ಕಳ ಜೊತೆಗೆ ಕಳೆದ ಹಲವು ವರ್ಷಗಳಿಂದ ಮೈಸೂರು ಅರಮನೆಗೆ ದಸರಾದ ಹೊತ್ತಿಗೆ ಬಂದು ವಿಜಯದಶಮಿ ಮುಗಿಸಿ ದುಬಾರೆಗೆ ಹಿಂತಿರುಗುವ ದೋಬಿ ಬಾಯಿ ಬಿಟ್ಟರೆ ಜೇನುಕುರುಬ ಜನಾಂಗದ ತಲೆತಲಾಂತರಗಳ ಕಥೆಯನ್ನು ಹೇಳಬಲ್ಲವರು. ಜೊತೆಗೆ ಜೇನುಕುರುಬ ಮಕ್ಕಳ ಈಗಿನ ಅತಂತ್ರ ಸ್ಥಿತಿಯನ್ನು ಕಲ್ಲೂ ನೀರೂ ಕರಗುವ ಹಾಗೆ ವಿವರಿಸಬಲ್ಲವರು.

ಯಾವಾಗಲೂ ಜೊತೆಯಲ್ಲಿ ಮಡದಿಯನ್ನೂ, ಮೊಮ್ಮಕ್ಕಳನ್ನೂ ಕರೆದುಕೊಂಡು ಮೈಸೂರು ಅರಮನೆಗೆ ಬರುವ ದೋಬಿಯವರು ಈ ಸಲದ ದಸರೆಗೆ ಏಕಾಂಗಿಯಾಗಿ ಬಂದಿರುವರು. ಕಾರಣ ಇವರ ಮೊಮ್ಮಗಳು ಅವಳಿ ಮಕ್ಕಳನ್ನು ಹೆತ್ತಿರುವಳು. ಅವಧಿ ಪೂರ್ಣವಾಗುವ ಮೊದಲೇ ಅಕಾಲಿಕವಾಗಿ ಜನಿಸಿದ ಆ ಅವಳಿ ಹಸುಗೂಸುಗಳು ಮಡಿಕೇರಿಯ ಸರಕಾರೀ ಆಸ್ಪತ್ರೆಯ ಇನ್‌ಕ್ಯುಬೇಟರಿನಲ್ಲಿ ಹಲವು ದಿನಗಳಿಂದ ಮಲಗಿರುವವು. ಆ ಚಿಂತೆಯಲ್ಲಿ ದುಬಾರೆಯಲ್ಲೇ ಉಳಿದಿರುವ ಮಡದಿ ಮಕ್ಕಳನ್ನು ನೆನೆದುಕೊಂಡು ದೋಬಿಯವರು ಮೈಸೂರಿನಲ್ಲಿ ಕಾವೇರಿ ಆನೆಯ ಜೊತೆ ತಮ್ಮ ಕಷ್ಟಸುಖಗಳನ್ನು ಮಾತಾಡಿಕೊಂಡು ದಿನ ದೂಡುತ್ತಿರುವರು.

ಇದು ದೋಬಿ ಎಂಬ ಒಬ್ಬ ಮಾವುತನ ಕಥೆ. ಮೈಸೂರು ಸುತ್ತಲಿನ ಹಲವು ಆನೆ ಕ್ಯಾಂಪುಗಳಿಂದ ಆನೆಯ ಸಮೇತ ಮೈಸೂರಿಗೆ ಬಂದಿರುವ ಎಲ್ಲ ಮಾವುತ ಕಾವಾಡಿಯರದ್ದೂ ಹೀಗೆ ಒಂದೊಂದು ಚಿಂತೆಯ ಕಥೆಗಳು. ಮೈಸೂರಿನ ಅರಮನೆಯ ಹಿಂದಿನ ಆನೆ ಬಿಡಾರಗಳಲ್ಲಿ ಇರುವಷ್ಟು ದಿನ ಅಷ್ಟಿಷ್ಟು ಸಂತೋಷದಲ್ಲಿ ಇರುವ ಇವರೆಲ್ಲ ವಾಪಾಸು ಹೋದ ಮೇಲೆ ಅವರದ್ದೂ ಇದೇ ಬದುಕು, ಇದೇ ಕಥೆ ಮತ್ತು ನಮಗೆ ಯಾರಿಗೂ ಅರಿವೇ ಆಗದ ನೂರಾರು ಖಾಸಗೀ ವ್ಯಥೆಗಳು!

andolana

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

13 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

14 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

15 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

20 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

20 hours ago