ಸಧ್ಯ ಮೈಸೂರು ಅರಮನೆಯ ಹಿಂದಿನ ಆನೆ ಬಿಡಾರವೊಂದರ ವಾಸಿಯಾಗಿರುವ ದೋಬಿ ಎಂಬ ಈ ಜೇನುಕುರುಬರ ಹಿರಿಯ ಮೂಲತಃ ಕೊಡಗು ಜಿಲ್ಲೆ ಕುಶಾಲನಗರದ ಬಳಿಯ ದುಬಾರೆ ಆನೆಕ್ಯಾಂಪಿನ ಕಾವೇರಿ ಎಂಬ ಆನೆಯ ಮಾವುತರಾಗಿರುವವರು. ಕಾಡಾನೆಗಳ ಕುರಿತೂ, ಜೇನು ನೊಣಗಳ ಕುರಿತೂ, ನಾಶವಾಗುತ್ತಿರುವ ಆದಿವಾಸಿಗಳ ಬದುಕಿನ ಕುರಿತು ಹಾಡೂ ಹಾಡಬಲ್ಲ, ಕಥೆಯೂ ಹೇಳಬಲ್ಲ, ಭಾಷಣವನ್ನೂ ಮಾಡಬಲ್ಲ ದೋಬಿ ಹಠದ ಮನುಷ್ಯ. ತಮ್ಮ ಆನೆ ಕಾವೇರಿ ಎಂಬ ಕುಮ್ಕಿ ಆನೆ ಮತ್ತು ಹೆಂಡತಿ, ಮಕ್ಕಳು ಮೊಮ್ಮಕ್ಕಳ ಜೊತೆಗೆ ಕಳೆದ ಹಲವು ವರ್ಷಗಳಿಂದ ಮೈಸೂರು ಅರಮನೆಗೆ ದಸರಾದ ಹೊತ್ತಿಗೆ ಬಂದು ವಿಜಯದಶಮಿ ಮುಗಿಸಿ ದುಬಾರೆಗೆ ಹಿಂತಿರುಗುವ ದೋಬಿ ಬಾಯಿ ಬಿಟ್ಟರೆ ಜೇನುಕುರುಬ ಜನಾಂಗದ ತಲೆತಲಾಂತರಗಳ ಕಥೆಯನ್ನು ಹೇಳಬಲ್ಲವರು. ಜೊತೆಗೆ ಜೇನುಕುರುಬ ಮಕ್ಕಳ ಈಗಿನ ಅತಂತ್ರ ಸ್ಥಿತಿಯನ್ನು ಕಲ್ಲೂ ನೀರೂ ಕರಗುವ ಹಾಗೆ ವಿವರಿಸಬಲ್ಲವರು.
ಯಾವಾಗಲೂ ಜೊತೆಯಲ್ಲಿ ಮಡದಿಯನ್ನೂ, ಮೊಮ್ಮಕ್ಕಳನ್ನೂ ಕರೆದುಕೊಂಡು ಮೈಸೂರು ಅರಮನೆಗೆ ಬರುವ ದೋಬಿಯವರು ಈ ಸಲದ ದಸರೆಗೆ ಏಕಾಂಗಿಯಾಗಿ ಬಂದಿರುವರು. ಕಾರಣ ಇವರ ಮೊಮ್ಮಗಳು ಅವಳಿ ಮಕ್ಕಳನ್ನು ಹೆತ್ತಿರುವಳು. ಅವಧಿ ಪೂರ್ಣವಾಗುವ ಮೊದಲೇ ಅಕಾಲಿಕವಾಗಿ ಜನಿಸಿದ ಆ ಅವಳಿ ಹಸುಗೂಸುಗಳು ಮಡಿಕೇರಿಯ ಸರಕಾರೀ ಆಸ್ಪತ್ರೆಯ ಇನ್ಕ್ಯುಬೇಟರಿನಲ್ಲಿ ಹಲವು ದಿನಗಳಿಂದ ಮಲಗಿರುವವು. ಆ ಚಿಂತೆಯಲ್ಲಿ ದುಬಾರೆಯಲ್ಲೇ ಉಳಿದಿರುವ ಮಡದಿ ಮಕ್ಕಳನ್ನು ನೆನೆದುಕೊಂಡು ದೋಬಿಯವರು ಮೈಸೂರಿನಲ್ಲಿ ಕಾವೇರಿ ಆನೆಯ ಜೊತೆ ತಮ್ಮ ಕಷ್ಟಸುಖಗಳನ್ನು ಮಾತಾಡಿಕೊಂಡು ದಿನ ದೂಡುತ್ತಿರುವರು.
ಇದು ದೋಬಿ ಎಂಬ ಒಬ್ಬ ಮಾವುತನ ಕಥೆ. ಮೈಸೂರು ಸುತ್ತಲಿನ ಹಲವು ಆನೆ ಕ್ಯಾಂಪುಗಳಿಂದ ಆನೆಯ ಸಮೇತ ಮೈಸೂರಿಗೆ ಬಂದಿರುವ ಎಲ್ಲ ಮಾವುತ ಕಾವಾಡಿಯರದ್ದೂ ಹೀಗೆ ಒಂದೊಂದು ಚಿಂತೆಯ ಕಥೆಗಳು. ಮೈಸೂರಿನ ಅರಮನೆಯ ಹಿಂದಿನ ಆನೆ ಬಿಡಾರಗಳಲ್ಲಿ ಇರುವಷ್ಟು ದಿನ ಅಷ್ಟಿಷ್ಟು ಸಂತೋಷದಲ್ಲಿ ಇರುವ ಇವರೆಲ್ಲ ವಾಪಾಸು ಹೋದ ಮೇಲೆ ಅವರದ್ದೂ ಇದೇ ಬದುಕು, ಇದೇ ಕಥೆ ಮತ್ತು ನಮಗೆ ಯಾರಿಗೂ ಅರಿವೇ ಆಗದ ನೂರಾರು ಖಾಸಗೀ ವ್ಯಥೆಗಳು!
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…