ಬನ್ನೂರು ಬಸ್ಸ್ಟಾಂಡಿನ ಪಕ್ಕ ಸೊಪ್ಪು ಮಾರುತ್ತ ಕೂತಿರುವ ಮಾರ್ಗೋಡನಹಳ್ಳಿಯ ಭಾಗ್ಯಮ್ಮ ಅಪ್ರತಿಮ ಹಾಡುಗಾತಿ ಅನ್ನುವುದು ಸೊಪ್ಪು ಕೊಳ್ಳಲು ಬರುವ ಬಹುತೇಕ ಮಂದಿಗೆ ಗೊತ್ತಿರಲಿಕ್ಕಿಲ್ಲ. ಅವರ ಪ್ರಕಾರ ಆಕೆ ಬಹಳ ಒಳ್ಳೆಯ ಮಾತುಗಾರ್ತಿ ಮತ್ತು ಆಗೀಗ ದನದ ದಲ್ಲಾಳಿ ಕೆಲಸ ಮಾಡುವ ಸಣ್ಣ ಮಟ್ಟಿಗಿನ ಏಜೆಂಟು ಮತ್ತು ಒಮ್ಮೊಮ್ಮೆ ಗಂಡಿಗೆ ಹೆಣ್ಣು ಹುಡುಕುವ, ಹೆಣ್ಣಿಗೆ ಗಂಡು ಹುಡುಕುವ ಮದುವೆ ದಲ್ಲಾಳಿ.
ಆದರೆ ಈ ಸೊಪ್ಪು ಮಾರಾಟ ಇತ್ಯಾದಿಗಳು ಆಕೆಗೆ ಹೊಟ್ಟೆಪಾಡಿನ ಚಿಂತೆ ನೀಗಿಸುವ ದಾರಿಗಳು ಮಾತ್ರ. ಆಕೆಯ ನಿಜವಾದ ಸಂತೋಷ ಇರುವುದು ಸೋಬಾನೆ ಹೇಳುವುದರಲ್ಲಿ ಮತ್ತು ಮೈಸೂರು ಸೀಮೆಯ ಜಾನಪದ ಕಾವ್ಯಗಳನ್ನು ಸಮಯದ ಪರಿವೆಯಿಲ್ಲದೆ ಹಾಡುವುದರಲ್ಲಿ.
ಹೀಗಿರುವ ಭಾಗ್ಯಮ್ಮ ಕೆಲಕಾಲದ ಹಿಂದೆ ಸೊಪ್ಪು ಮಾರಿದ ನಂತರ ಹಳ್ಳಿಗೆ ವಾಪಸು ನಡೆದುಕೊಂಡು ಹೋಗುತ್ತಿರುವಾಗ ವಾಹನವೊಂದು ಆಕೆಯ ಮೇಲೆ ನುಗ್ಗಿಬಂದು, ಒಂದು ಕಾಲು ಊನವಾಗಿ, ಆಗ ನಡೆದ ಆಪರೇಷನ್ನಿನಲ್ಲಿ ಹಾಕಿದ ರಾಡನ್ನು ಇನ್ನೂ ಕಾಲೊಳಗೆ ಇಟ್ಟುಕೊಂಡು ಆಕೆ ನಡೆಯುತ್ತಿರುವಳು. ಆಪರೇಷನ್ನು ನಡೆಸಲು ನೆರವಾದ ಮಹಾನುಭಾವರನ್ನು ನೆನೆದುಕೊಂಡು ಕೈಮುಗಿಯುವಳು. ಆಕೆಯ ಮಾತುಗಳಲ್ಲಿ ಯಾರ ಮೇಲೂ ಸಿಟ್ಟಿಲ್ಲ. ಕುಹಕವಿಲ್ಲ. ಯಾವುದರ ಮೇಲೂ ಬೇಸರವಿಲ್ಲ. ಯಾವ ಹೊತ್ತಿನಲ್ಲೂ ಮನಸ್ಸಿನೊಳಗೆ ಯಾವುದೋ ಒಂದು ಹಾಡನ್ನು ಗುನುಗಿಕೊಂಡು ಸಂತೋಷದಲ್ಲಿರುವಳು.
mysoorininda@gmail.com
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…