ಬನ್ನೂರು ಬಸ್ಸ್ಟಾಂಡಿನ ಪಕ್ಕ ಸೊಪ್ಪು ಮಾರುತ್ತ ಕೂತಿರುವ ಮಾರ್ಗೋಡನಹಳ್ಳಿಯ ಭಾಗ್ಯಮ್ಮ ಅಪ್ರತಿಮ ಹಾಡುಗಾತಿ ಅನ್ನುವುದು ಸೊಪ್ಪು ಕೊಳ್ಳಲು ಬರುವ ಬಹುತೇಕ ಮಂದಿಗೆ ಗೊತ್ತಿರಲಿಕ್ಕಿಲ್ಲ. ಅವರ ಪ್ರಕಾರ ಆಕೆ ಬಹಳ ಒಳ್ಳೆಯ ಮಾತುಗಾರ್ತಿ ಮತ್ತು ಆಗೀಗ ದನದ ದಲ್ಲಾಳಿ ಕೆಲಸ ಮಾಡುವ ಸಣ್ಣ ಮಟ್ಟಿಗಿನ ಏಜೆಂಟು ಮತ್ತು ಒಮ್ಮೊಮ್ಮೆ ಗಂಡಿಗೆ ಹೆಣ್ಣು ಹುಡುಕುವ, ಹೆಣ್ಣಿಗೆ ಗಂಡು ಹುಡುಕುವ ಮದುವೆ ದಲ್ಲಾಳಿ.
ಆದರೆ ಈ ಸೊಪ್ಪು ಮಾರಾಟ ಇತ್ಯಾದಿಗಳು ಆಕೆಗೆ ಹೊಟ್ಟೆಪಾಡಿನ ಚಿಂತೆ ನೀಗಿಸುವ ದಾರಿಗಳು ಮಾತ್ರ. ಆಕೆಯ ನಿಜವಾದ ಸಂತೋಷ ಇರುವುದು ಸೋಬಾನೆ ಹೇಳುವುದರಲ್ಲಿ ಮತ್ತು ಮೈಸೂರು ಸೀಮೆಯ ಜಾನಪದ ಕಾವ್ಯಗಳನ್ನು ಸಮಯದ ಪರಿವೆಯಿಲ್ಲದೆ ಹಾಡುವುದರಲ್ಲಿ.
ಹೀಗಿರುವ ಭಾಗ್ಯಮ್ಮ ಕೆಲಕಾಲದ ಹಿಂದೆ ಸೊಪ್ಪು ಮಾರಿದ ನಂತರ ಹಳ್ಳಿಗೆ ವಾಪಸು ನಡೆದುಕೊಂಡು ಹೋಗುತ್ತಿರುವಾಗ ವಾಹನವೊಂದು ಆಕೆಯ ಮೇಲೆ ನುಗ್ಗಿಬಂದು, ಒಂದು ಕಾಲು ಊನವಾಗಿ, ಆಗ ನಡೆದ ಆಪರೇಷನ್ನಿನಲ್ಲಿ ಹಾಕಿದ ರಾಡನ್ನು ಇನ್ನೂ ಕಾಲೊಳಗೆ ಇಟ್ಟುಕೊಂಡು ಆಕೆ ನಡೆಯುತ್ತಿರುವಳು. ಆಪರೇಷನ್ನು ನಡೆಸಲು ನೆರವಾದ ಮಹಾನುಭಾವರನ್ನು ನೆನೆದುಕೊಂಡು ಕೈಮುಗಿಯುವಳು. ಆಕೆಯ ಮಾತುಗಳಲ್ಲಿ ಯಾರ ಮೇಲೂ ಸಿಟ್ಟಿಲ್ಲ. ಕುಹಕವಿಲ್ಲ. ಯಾವುದರ ಮೇಲೂ ಬೇಸರವಿಲ್ಲ. ಯಾವ ಹೊತ್ತಿನಲ್ಲೂ ಮನಸ್ಸಿನೊಳಗೆ ಯಾವುದೋ ಒಂದು ಹಾಡನ್ನು ಗುನುಗಿಕೊಂಡು ಸಂತೋಷದಲ್ಲಿರುವಳು.
mysoorininda@gmail.com
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…