ಆಂದೋಲನ ಪುರವಣಿ

ವನಿತೆ ಮಮತೆ : ವರ್ಷ ವಿಜಯ್‌ಗೆ ಮಿಸೆಸ್ ಸೌತ್ ಇಂಡಿಯಾ ಕಿರೀಟ

ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು ೭ ಮಂದಿ ಮಾತ್ರ. ಅದರಲ್ಲಿ ನಮ್ಮ ಕೊಡಗಿನ, ಸದ್ಯ ಮೈಸೂರಿನಲ್ಲಿ ಇರುವ ವರ್ಷ ವಿಜಯ್ ಬಲ್ಯಂಡ ಕೂಡ ಒಬ್ಬರು.

ಕೊಡಗಿನ ಅಮ್ಮತ್ತಿ ಎನ್ನುವ ಗ್ರಾಮದಲ್ಲಿ ಹುಟ್ಟಿದ ವರ್ಷ ಪಿಯುಸಿ ಮುಗಿದ ನಂತರ ಮದುವೆಯಾದವರು. ಗಂಡ ಸರ್ಕಾರಿ ಉದ್ಯೋಗಿ. ಇಬ್ಬರು ಮಕ್ಕಳ ಕುಟುಂಬ. ಹೀಗಿರುವಾಗ ತಮ್ಮ ಇಷ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ವರ್ಷ ಅವರ ಕನಸು. ಇದಕ್ಕೆ ಪತಿಯ ಸಹಕಾರ ಸಿಕ್ಕಿ ೨೦೨೨ರ ಮಿಸೆಸ್ ಸೌತ್ ಇಂಡಿಯಾ ಆಗಿದ್ದಾರೆ. ಕಳೆದ ಬಾರಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವರ್ಷ ‘ಕೂರ್ಗ್ ಸ್ಕಾಟ್‌ಲ್ಯಾಂಡ್ ಕ್ವೀನ್’, ‘ಇನ್ನರ್ ಬ್ಯೂಟಿ’ ಎನ್ನುವ ಟೈಟಲ್ ಪಡೆದುಕೊಂಡಿದ್ದರು. ಈ ಬಾರಿ ಕಿರೀಟ ಧಾರಣೆಯ ಜೊತೆಗೆ ‘ಬೆಸ್ಟ್ ಪರ್ಸನಾಲಿಟಿ’, ‘ಬೆಸ್ಟ್ ಫರ್ಮಾಮರ್’, ‘ಹೆಲ್ದಿ ಸ್ಕಿನ್’ ಎನ್ನುವ ಟೈಟಲ್‌ಗಳನ್ನು ಬಾಚಿಕೊಂಡಿದ್ದಾರೆ.

ನಟಿಯೂ ಆಗಿರುವ ವರ್ಷ ಕನ್ನಡ ಮತ್ತು ಕೊಡವ ಭಾಷೆಯ ಕೆಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗಿಯಾಗುವ, ಆ ಮೂಲಕ ಮದುವೆಯಾಗಿರುವ ಹೆಂಗಸರಲ್ಲಿ ಆತ್ಮವಿಶ್ವಾಸ ತುಂಬುವ ಅಭಿಲಾಷೆ ಇವರದ್ದು

ಮದುವೆಯಾದವರು ಭಾಗವಹಿಸುವ ಸೌಂದರ್ಯ ಸ್ಪರ್ಧೆಯಲ್ಲಿ ನನಗೆ ಈ ಬಾರಿ ಮಿಸೆಸ್ ಸೌತ್ ಇಂಡಿಯಾ ಅವಾರ್ಡ್ ಸಿಕ್ಕಿದೆ. ಇದು ನನ್ನನ್ನು ಮುಂದಿನ ಹಂತಗಳಿಗೆ ಹೋಗಲು ಸಹಕಾರಿ. ನಮ್ಮ ಮನೆಯವರಿಗೆ ನನ್ನ ಇಷ್ಟವೇ ಮುಖ್ಯ ಆಗಿರುವುದರಿಂದ ಅವರು ಸ್ಪರ್ಧೆಗೆ ನನ್ನನ್ನು ಕಳಿಸಲು ಒಪ್ಪಿದರು. ಮದುವೆಯಾದರೂ ಹೆಂಗಸರಲ್ಲಿ ಆತ್ಮವಿಶ್ವಾಸ ಇರಬೇಕು, ಅವರಲ್ಲಿ ಸೌಂದರ್ಯ ಪ್ರಜ್ಞೆ ಉಳಿಸಿ ಬೆಳೆಸಬೇಕು ಎನ್ನುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ.

andolana

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

3 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

3 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

3 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

13 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

13 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

14 hours ago