ಆಂದೋಲನ ಪುರವಣಿ

ವನಿತೆ ಮಮತೆ : ವರ್ಷ ವಿಜಯ್‌ಗೆ ಮಿಸೆಸ್ ಸೌತ್ ಇಂಡಿಯಾ ಕಿರೀಟ

ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು ೭ ಮಂದಿ ಮಾತ್ರ. ಅದರಲ್ಲಿ ನಮ್ಮ ಕೊಡಗಿನ, ಸದ್ಯ ಮೈಸೂರಿನಲ್ಲಿ ಇರುವ ವರ್ಷ ವಿಜಯ್ ಬಲ್ಯಂಡ ಕೂಡ ಒಬ್ಬರು.

ಕೊಡಗಿನ ಅಮ್ಮತ್ತಿ ಎನ್ನುವ ಗ್ರಾಮದಲ್ಲಿ ಹುಟ್ಟಿದ ವರ್ಷ ಪಿಯುಸಿ ಮುಗಿದ ನಂತರ ಮದುವೆಯಾದವರು. ಗಂಡ ಸರ್ಕಾರಿ ಉದ್ಯೋಗಿ. ಇಬ್ಬರು ಮಕ್ಕಳ ಕುಟುಂಬ. ಹೀಗಿರುವಾಗ ತಮ್ಮ ಇಷ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ವರ್ಷ ಅವರ ಕನಸು. ಇದಕ್ಕೆ ಪತಿಯ ಸಹಕಾರ ಸಿಕ್ಕಿ ೨೦೨೨ರ ಮಿಸೆಸ್ ಸೌತ್ ಇಂಡಿಯಾ ಆಗಿದ್ದಾರೆ. ಕಳೆದ ಬಾರಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವರ್ಷ ‘ಕೂರ್ಗ್ ಸ್ಕಾಟ್‌ಲ್ಯಾಂಡ್ ಕ್ವೀನ್’, ‘ಇನ್ನರ್ ಬ್ಯೂಟಿ’ ಎನ್ನುವ ಟೈಟಲ್ ಪಡೆದುಕೊಂಡಿದ್ದರು. ಈ ಬಾರಿ ಕಿರೀಟ ಧಾರಣೆಯ ಜೊತೆಗೆ ‘ಬೆಸ್ಟ್ ಪರ್ಸನಾಲಿಟಿ’, ‘ಬೆಸ್ಟ್ ಫರ್ಮಾಮರ್’, ‘ಹೆಲ್ದಿ ಸ್ಕಿನ್’ ಎನ್ನುವ ಟೈಟಲ್‌ಗಳನ್ನು ಬಾಚಿಕೊಂಡಿದ್ದಾರೆ.

ನಟಿಯೂ ಆಗಿರುವ ವರ್ಷ ಕನ್ನಡ ಮತ್ತು ಕೊಡವ ಭಾಷೆಯ ಕೆಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗಿಯಾಗುವ, ಆ ಮೂಲಕ ಮದುವೆಯಾಗಿರುವ ಹೆಂಗಸರಲ್ಲಿ ಆತ್ಮವಿಶ್ವಾಸ ತುಂಬುವ ಅಭಿಲಾಷೆ ಇವರದ್ದು

ಮದುವೆಯಾದವರು ಭಾಗವಹಿಸುವ ಸೌಂದರ್ಯ ಸ್ಪರ್ಧೆಯಲ್ಲಿ ನನಗೆ ಈ ಬಾರಿ ಮಿಸೆಸ್ ಸೌತ್ ಇಂಡಿಯಾ ಅವಾರ್ಡ್ ಸಿಕ್ಕಿದೆ. ಇದು ನನ್ನನ್ನು ಮುಂದಿನ ಹಂತಗಳಿಗೆ ಹೋಗಲು ಸಹಕಾರಿ. ನಮ್ಮ ಮನೆಯವರಿಗೆ ನನ್ನ ಇಷ್ಟವೇ ಮುಖ್ಯ ಆಗಿರುವುದರಿಂದ ಅವರು ಸ್ಪರ್ಧೆಗೆ ನನ್ನನ್ನು ಕಳಿಸಲು ಒಪ್ಪಿದರು. ಮದುವೆಯಾದರೂ ಹೆಂಗಸರಲ್ಲಿ ಆತ್ಮವಿಶ್ವಾಸ ಇರಬೇಕು, ಅವರಲ್ಲಿ ಸೌಂದರ್ಯ ಪ್ರಜ್ಞೆ ಉಳಿಸಿ ಬೆಳೆಸಬೇಕು ಎನ್ನುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ.

andolana

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago