ಆಂದೋಲನ ಪುರವಣಿ

ವನಿತೆ ಮಮತೆ : ವರ್ಷ ವಿಜಯ್‌ಗೆ ಮಿಸೆಸ್ ಸೌತ್ ಇಂಡಿಯಾ ಕಿರೀಟ

ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು ೭ ಮಂದಿ ಮಾತ್ರ. ಅದರಲ್ಲಿ ನಮ್ಮ ಕೊಡಗಿನ, ಸದ್ಯ ಮೈಸೂರಿನಲ್ಲಿ ಇರುವ ವರ್ಷ ವಿಜಯ್ ಬಲ್ಯಂಡ ಕೂಡ ಒಬ್ಬರು.

ಕೊಡಗಿನ ಅಮ್ಮತ್ತಿ ಎನ್ನುವ ಗ್ರಾಮದಲ್ಲಿ ಹುಟ್ಟಿದ ವರ್ಷ ಪಿಯುಸಿ ಮುಗಿದ ನಂತರ ಮದುವೆಯಾದವರು. ಗಂಡ ಸರ್ಕಾರಿ ಉದ್ಯೋಗಿ. ಇಬ್ಬರು ಮಕ್ಕಳ ಕುಟುಂಬ. ಹೀಗಿರುವಾಗ ತಮ್ಮ ಇಷ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ವರ್ಷ ಅವರ ಕನಸು. ಇದಕ್ಕೆ ಪತಿಯ ಸಹಕಾರ ಸಿಕ್ಕಿ ೨೦೨೨ರ ಮಿಸೆಸ್ ಸೌತ್ ಇಂಡಿಯಾ ಆಗಿದ್ದಾರೆ. ಕಳೆದ ಬಾರಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವರ್ಷ ‘ಕೂರ್ಗ್ ಸ್ಕಾಟ್‌ಲ್ಯಾಂಡ್ ಕ್ವೀನ್’, ‘ಇನ್ನರ್ ಬ್ಯೂಟಿ’ ಎನ್ನುವ ಟೈಟಲ್ ಪಡೆದುಕೊಂಡಿದ್ದರು. ಈ ಬಾರಿ ಕಿರೀಟ ಧಾರಣೆಯ ಜೊತೆಗೆ ‘ಬೆಸ್ಟ್ ಪರ್ಸನಾಲಿಟಿ’, ‘ಬೆಸ್ಟ್ ಫರ್ಮಾಮರ್’, ‘ಹೆಲ್ದಿ ಸ್ಕಿನ್’ ಎನ್ನುವ ಟೈಟಲ್‌ಗಳನ್ನು ಬಾಚಿಕೊಂಡಿದ್ದಾರೆ.

ನಟಿಯೂ ಆಗಿರುವ ವರ್ಷ ಕನ್ನಡ ಮತ್ತು ಕೊಡವ ಭಾಷೆಯ ಕೆಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗಿಯಾಗುವ, ಆ ಮೂಲಕ ಮದುವೆಯಾಗಿರುವ ಹೆಂಗಸರಲ್ಲಿ ಆತ್ಮವಿಶ್ವಾಸ ತುಂಬುವ ಅಭಿಲಾಷೆ ಇವರದ್ದು

ಮದುವೆಯಾದವರು ಭಾಗವಹಿಸುವ ಸೌಂದರ್ಯ ಸ್ಪರ್ಧೆಯಲ್ಲಿ ನನಗೆ ಈ ಬಾರಿ ಮಿಸೆಸ್ ಸೌತ್ ಇಂಡಿಯಾ ಅವಾರ್ಡ್ ಸಿಕ್ಕಿದೆ. ಇದು ನನ್ನನ್ನು ಮುಂದಿನ ಹಂತಗಳಿಗೆ ಹೋಗಲು ಸಹಕಾರಿ. ನಮ್ಮ ಮನೆಯವರಿಗೆ ನನ್ನ ಇಷ್ಟವೇ ಮುಖ್ಯ ಆಗಿರುವುದರಿಂದ ಅವರು ಸ್ಪರ್ಧೆಗೆ ನನ್ನನ್ನು ಕಳಿಸಲು ಒಪ್ಪಿದರು. ಮದುವೆಯಾದರೂ ಹೆಂಗಸರಲ್ಲಿ ಆತ್ಮವಿಶ್ವಾಸ ಇರಬೇಕು, ಅವರಲ್ಲಿ ಸೌಂದರ್ಯ ಪ್ರಜ್ಞೆ ಉಳಿಸಿ ಬೆಳೆಸಬೇಕು ಎನ್ನುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ.

andolana

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

5 hours ago