ಆಂದೋಲನ ಪುರವಣಿ

ವನಿತೆ ಮಮತೆ : ವರ್ಷ ವಿಜಯ್‌ಗೆ ಮಿಸೆಸ್ ಸೌತ್ ಇಂಡಿಯಾ ಕಿರೀಟ

ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು ೭ ಮಂದಿ ಮಾತ್ರ. ಅದರಲ್ಲಿ ನಮ್ಮ ಕೊಡಗಿನ, ಸದ್ಯ ಮೈಸೂರಿನಲ್ಲಿ ಇರುವ ವರ್ಷ ವಿಜಯ್ ಬಲ್ಯಂಡ ಕೂಡ ಒಬ್ಬರು.

ಕೊಡಗಿನ ಅಮ್ಮತ್ತಿ ಎನ್ನುವ ಗ್ರಾಮದಲ್ಲಿ ಹುಟ್ಟಿದ ವರ್ಷ ಪಿಯುಸಿ ಮುಗಿದ ನಂತರ ಮದುವೆಯಾದವರು. ಗಂಡ ಸರ್ಕಾರಿ ಉದ್ಯೋಗಿ. ಇಬ್ಬರು ಮಕ್ಕಳ ಕುಟುಂಬ. ಹೀಗಿರುವಾಗ ತಮ್ಮ ಇಷ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ವರ್ಷ ಅವರ ಕನಸು. ಇದಕ್ಕೆ ಪತಿಯ ಸಹಕಾರ ಸಿಕ್ಕಿ ೨೦೨೨ರ ಮಿಸೆಸ್ ಸೌತ್ ಇಂಡಿಯಾ ಆಗಿದ್ದಾರೆ. ಕಳೆದ ಬಾರಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವರ್ಷ ‘ಕೂರ್ಗ್ ಸ್ಕಾಟ್‌ಲ್ಯಾಂಡ್ ಕ್ವೀನ್’, ‘ಇನ್ನರ್ ಬ್ಯೂಟಿ’ ಎನ್ನುವ ಟೈಟಲ್ ಪಡೆದುಕೊಂಡಿದ್ದರು. ಈ ಬಾರಿ ಕಿರೀಟ ಧಾರಣೆಯ ಜೊತೆಗೆ ‘ಬೆಸ್ಟ್ ಪರ್ಸನಾಲಿಟಿ’, ‘ಬೆಸ್ಟ್ ಫರ್ಮಾಮರ್’, ‘ಹೆಲ್ದಿ ಸ್ಕಿನ್’ ಎನ್ನುವ ಟೈಟಲ್‌ಗಳನ್ನು ಬಾಚಿಕೊಂಡಿದ್ದಾರೆ.

ನಟಿಯೂ ಆಗಿರುವ ವರ್ಷ ಕನ್ನಡ ಮತ್ತು ಕೊಡವ ಭಾಷೆಯ ಕೆಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗಿಯಾಗುವ, ಆ ಮೂಲಕ ಮದುವೆಯಾಗಿರುವ ಹೆಂಗಸರಲ್ಲಿ ಆತ್ಮವಿಶ್ವಾಸ ತುಂಬುವ ಅಭಿಲಾಷೆ ಇವರದ್ದು

ಮದುವೆಯಾದವರು ಭಾಗವಹಿಸುವ ಸೌಂದರ್ಯ ಸ್ಪರ್ಧೆಯಲ್ಲಿ ನನಗೆ ಈ ಬಾರಿ ಮಿಸೆಸ್ ಸೌತ್ ಇಂಡಿಯಾ ಅವಾರ್ಡ್ ಸಿಕ್ಕಿದೆ. ಇದು ನನ್ನನ್ನು ಮುಂದಿನ ಹಂತಗಳಿಗೆ ಹೋಗಲು ಸಹಕಾರಿ. ನಮ್ಮ ಮನೆಯವರಿಗೆ ನನ್ನ ಇಷ್ಟವೇ ಮುಖ್ಯ ಆಗಿರುವುದರಿಂದ ಅವರು ಸ್ಪರ್ಧೆಗೆ ನನ್ನನ್ನು ಕಳಿಸಲು ಒಪ್ಪಿದರು. ಮದುವೆಯಾದರೂ ಹೆಂಗಸರಲ್ಲಿ ಆತ್ಮವಿಶ್ವಾಸ ಇರಬೇಕು, ಅವರಲ್ಲಿ ಸೌಂದರ್ಯ ಪ್ರಜ್ಞೆ ಉಳಿಸಿ ಬೆಳೆಸಬೇಕು ಎನ್ನುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ.

andolana

Recent Posts

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

30 mins ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

38 mins ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

51 mins ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

4 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

7 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

7 hours ago