ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್ ಮೇಲೆ ಹೆಜ್ಜೆ ಹಾಕಿದರು. ಇವರಲ್ಲಿ ಗೆದ್ದವರು, ಮಿಸೆಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡರವರು ೭ ಮಂದಿ ಮಾತ್ರ. ಅದರಲ್ಲಿ ನಮ್ಮ ಕೊಡಗಿನ, ಸದ್ಯ ಮೈಸೂರಿನಲ್ಲಿ ಇರುವ ವರ್ಷ ವಿಜಯ್ ಬಲ್ಯಂಡ ಕೂಡ ಒಬ್ಬರು.
ಕೊಡಗಿನ ಅಮ್ಮತ್ತಿ ಎನ್ನುವ ಗ್ರಾಮದಲ್ಲಿ ಹುಟ್ಟಿದ ವರ್ಷ ಪಿಯುಸಿ ಮುಗಿದ ನಂತರ ಮದುವೆಯಾದವರು. ಗಂಡ ಸರ್ಕಾರಿ ಉದ್ಯೋಗಿ. ಇಬ್ಬರು ಮಕ್ಕಳ ಕುಟುಂಬ. ಹೀಗಿರುವಾಗ ತಮ್ಮ ಇಷ್ಟದ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ವರ್ಷ ಅವರ ಕನಸು. ಇದಕ್ಕೆ ಪತಿಯ ಸಹಕಾರ ಸಿಕ್ಕಿ ೨೦೨೨ರ ಮಿಸೆಸ್ ಸೌತ್ ಇಂಡಿಯಾ ಆಗಿದ್ದಾರೆ. ಕಳೆದ ಬಾರಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವರ್ಷ ‘ಕೂರ್ಗ್ ಸ್ಕಾಟ್ಲ್ಯಾಂಡ್ ಕ್ವೀನ್’, ‘ಇನ್ನರ್ ಬ್ಯೂಟಿ’ ಎನ್ನುವ ಟೈಟಲ್ ಪಡೆದುಕೊಂಡಿದ್ದರು. ಈ ಬಾರಿ ಕಿರೀಟ ಧಾರಣೆಯ ಜೊತೆಗೆ ‘ಬೆಸ್ಟ್ ಪರ್ಸನಾಲಿಟಿ’, ‘ಬೆಸ್ಟ್ ಫರ್ಮಾಮರ್’, ‘ಹೆಲ್ದಿ ಸ್ಕಿನ್’ ಎನ್ನುವ ಟೈಟಲ್ಗಳನ್ನು ಬಾಚಿಕೊಂಡಿದ್ದಾರೆ.
ನಟಿಯೂ ಆಗಿರುವ ವರ್ಷ ಕನ್ನಡ ಮತ್ತು ಕೊಡವ ಭಾಷೆಯ ಕೆಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗಿಯಾಗುವ, ಆ ಮೂಲಕ ಮದುವೆಯಾಗಿರುವ ಹೆಂಗಸರಲ್ಲಿ ಆತ್ಮವಿಶ್ವಾಸ ತುಂಬುವ ಅಭಿಲಾಷೆ ಇವರದ್ದು
ಮದುವೆಯಾದವರು ಭಾಗವಹಿಸುವ ಸೌಂದರ್ಯ ಸ್ಪರ್ಧೆಯಲ್ಲಿ ನನಗೆ ಈ ಬಾರಿ ಮಿಸೆಸ್ ಸೌತ್ ಇಂಡಿಯಾ ಅವಾರ್ಡ್ ಸಿಕ್ಕಿದೆ. ಇದು ನನ್ನನ್ನು ಮುಂದಿನ ಹಂತಗಳಿಗೆ ಹೋಗಲು ಸಹಕಾರಿ. ನಮ್ಮ ಮನೆಯವರಿಗೆ ನನ್ನ ಇಷ್ಟವೇ ಮುಖ್ಯ ಆಗಿರುವುದರಿಂದ ಅವರು ಸ್ಪರ್ಧೆಗೆ ನನ್ನನ್ನು ಕಳಿಸಲು ಒಪ್ಪಿದರು. ಮದುವೆಯಾದರೂ ಹೆಂಗಸರಲ್ಲಿ ಆತ್ಮವಿಶ್ವಾಸ ಇರಬೇಕು, ಅವರಲ್ಲಿ ಸೌಂದರ್ಯ ಪ್ರಜ್ಞೆ ಉಳಿಸಿ ಬೆಳೆಸಬೇಕು ಎನ್ನುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…