ಆಂದೋಲನ ಪುರವಣಿ

ಖುಷಿಯೊಂದನು ಕಾಯುತ್ತಾ ಬರೆಯದೇ ಉಳಿದೆ

ಹೀಗೆ ಏನಾದರೊಂದನ್ನು ಬರೆಯುವುದು ಸುಲಭ. ಅಂತೆಯೇ ಹೀಗೆ ಏನಾದರೊಂದನ್ನು ಬರೆಯುವುದು ಕಷ್ಟ. ತಟ್ಟೆಯಲ್ಲಿರುವ ತಿನಿಸುಗಳಲ್ಲಿ ಬಹಳ ಇಷ್ಟವಾದ ಆ ಒಂದು ತಿನಿಸನ್ನು ಕಡೆಯಲ್ಲಿ ತಿನ್ನಲು ಉಳಿಸುವಂತೆ ಕೆಲವೊಮ್ಮೆ ಬರಹಕ್ಕೆ ಕೈಹಾಕುವ ಮುನ್ನ ಇತರೆ ಕೆಲಸಗಳನ್ನು ಮುಗಿಸಿಬಿಡಬೇಕೆಂದು ಮನಸಾಗುತ್ತದೆ. ಆ ವೇಳೆಗಾಗಲೆ ಸಂಗೀತದಷ್ಟು, ಬರಹದಷ್ಟು ಸೊಗಸಲ್ಲದ ನೂರಾರು ಸಂಗತಿಗಳು ನಾ ಮುಂದು, ತಾ ಮುಂದೆಂದು ನುಗ್ಗಿ ಬರುತ್ತವೆ.

ಸಣ್ಣವರಿರುವಾಗ ನಾವು ತಣ್ಣೀರುಬಾವಿ ಕಡಲ ಕಿನಾರೆಗೆ ಹೋಗಿ ಆಡತೊಡಗಿ, ಪಾಯವಿಲ್ಲದ, ಗೋಡೆಯಿಲ್ಲದ, ಕಂಬವಿಲ್ಲದ ಮರಳ ಮನೆಯೊಂದನ್ನು ಕಟ್ಟಿ, ಕತ್ತಲಾಗುವವರೆಗೂ ಅದನ್ನು ಕಾದು, ಮನೆಗೆ ತೆರಳುವ ಹೊತ್ತಿಗೆ ಅದನ್ನು ಬಿಟ್ಟು ತೆರಳುವಾಗ ಆಗುತ್ತಿದ್ದ ಸಂಕಟದಂಥಾ ಭಾವವೊಂದು ಆಗಾಗ ಕಾಡಿ, ಅದೇನೋ ಹೆದರಿಕೆಯಾದಂತಾಗಿ, ಸೊಗಸಲ್ಲದ ಸಂಗತಿಗಳನ್ನು ಬದಿಗೊತ್ತಿ ಒಂದಷ್ಟು ಹೊತ್ತು ಬರೆಯಲೇಬೇಕೆಂದು ಕೂತಾಗ ಅರಿವಾಗುತ್ತದೆ.
ಹೀಗೆ ಹೇಗೋ, ಎಲ್ಲಂದರಲ್ಲಿ ಗುನುಗಿಬಿಡುವ ಯಾವುದೋ ರಾಗದ ಛಾಯೆಯೊಂದು ಮರೆಯಾಗದೆ ಹಾಗೇ ಉಳಿದು ಮುಂದೊಂದು ದಿನ ಒಂದು ಹಾಡಾಗಿಬಿಡುವಂತೆ, ಯಾವುದೋ ಲಹರಿಯಲ್ಲಿ ಹೊಳೆದ ಸಾಲೊಂದು ಕಾದಂಬರಿಯೇ ಆಗಿಬಿಡಬಹುದು. ಆಗದೆಯೂ ಇರಬಹುದು. ಅಂತಹದೊಂದು ಲಹರಿಯ ನೆನಕೆಗೆ ಮುಂದಾಗಿ ಆ ಸಾಲೇ ನೆನಪಾಗದೆ ಹೋದಾಗ, ಶಾಲೆಯ ಪರೀಕ್ಷೆ ನೆನಪಾಗುತ್ತದೆ. ಪ್ರಶ್ನೆ ಪತ್ರಿಕೆಯೆದುರು ಕೂತು, ಇದನ್ನು ಓದಬೇಕಿತ್ತೆಂಬ ಅರಿವಾಗುತ್ತದೆ.

ಇತರೆ ತಿಂಡಿಗಳನ್ನೆಲ್ಲ ಹೇಗೋ ಗಬಗಬನೆ ಮುಗಿಸಿ, ಸವಿದು ತಿನ್ನಲು ತಟ್ಟೆಯ ಮೂಲೆಯಲ್ಲಿರಿಸಿದ್ದ ಆ ಇಷ್ಟದ ತಿನಿಸನ್ನು ತಿನ್ನುವ ಹೊತ್ತಿಗೆ ಹೊಟ್ಟೆ ತುಂಬಿದಂತಾಗಿ, ಹಳೆಯ ಉತ್ಕಟತೆ ಉಳಿದಿರುವುದಿಲ್ಲ. ನಿರಾಶೆಯಾಗುತ್ತದೆ.

ಕೆಲವೊಂದು ಕ್ರಿಯೆಗಳೇ ಹೀಗೆ. ಸಂಗೀತದ ಹಾಗೆ. ಬರಹದ ಹಾಗೆ. ಪ್ರೀತಿಯ ಹಾಗೆ. ಅದರಲ್ಲಿ ಮುಳುಗದೆ ಅದು ದಕ್ಕುವುದಿಲ್ಲ.
ಕಡಲ ನೀರಲ್ಲಿ ಆಡುವ ತವಕ ಆಗಲೂ ಇರಲಿಲ್ಲ. ಸುಖಾಸುಮ್ಮನೆ ಮರಳಲ್ಲಿ ಕೂತು ಕಡಲ ನೋಡುವ ಹಪಹಪಿಕೆ ಈಗಲೂ ಇದೆ. ಅಂತಹದೊಂದು ಮರಳ ದಂಡೆಯ ಮೇಲೆ ಕೂತು ಮತ್ತೊಂದು ರಾಗವ ಗುನುಗಿದಾಗಲೋ, ಸಾಲೊಂದು ಹೊಳೆದಾಗಲೋ ಮಿಂಚುವ ಖುಷಿಯನ್ನು ನಾನು ಎದುರು ನೋಡುತ್ತೇನೆ ಮತ್ತು ಅಂತಹ ತಹತಹದ ಹಾಡಾಗಲಿ, ಬರಹವಾಗಲಿ ದಕ್ಕುವವರೆಗು ನಾನು ಅವೆರಡನ್ನೂ ಮಾಡದೆ ಸುಮ್ಮನಿರಲು ಬುಂಸುತ್ತೇನೆ.

andolana

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

28 mins ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

4 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

4 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

5 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

5 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

5 hours ago