ಆಂದೋಲನ ಪುರವಣಿ

ಖುಷಿಯೊಂದನು ಕಾಯುತ್ತಾ ಬರೆಯದೇ ಉಳಿದೆ

ಹೀಗೆ ಏನಾದರೊಂದನ್ನು ಬರೆಯುವುದು ಸುಲಭ. ಅಂತೆಯೇ ಹೀಗೆ ಏನಾದರೊಂದನ್ನು ಬರೆಯುವುದು ಕಷ್ಟ. ತಟ್ಟೆಯಲ್ಲಿರುವ ತಿನಿಸುಗಳಲ್ಲಿ ಬಹಳ ಇಷ್ಟವಾದ ಆ ಒಂದು ತಿನಿಸನ್ನು ಕಡೆಯಲ್ಲಿ ತಿನ್ನಲು ಉಳಿಸುವಂತೆ ಕೆಲವೊಮ್ಮೆ ಬರಹಕ್ಕೆ ಕೈಹಾಕುವ ಮುನ್ನ ಇತರೆ ಕೆಲಸಗಳನ್ನು ಮುಗಿಸಿಬಿಡಬೇಕೆಂದು ಮನಸಾಗುತ್ತದೆ. ಆ ವೇಳೆಗಾಗಲೆ ಸಂಗೀತದಷ್ಟು, ಬರಹದಷ್ಟು ಸೊಗಸಲ್ಲದ ನೂರಾರು ಸಂಗತಿಗಳು ನಾ ಮುಂದು, ತಾ ಮುಂದೆಂದು ನುಗ್ಗಿ ಬರುತ್ತವೆ.

ಸಣ್ಣವರಿರುವಾಗ ನಾವು ತಣ್ಣೀರುಬಾವಿ ಕಡಲ ಕಿನಾರೆಗೆ ಹೋಗಿ ಆಡತೊಡಗಿ, ಪಾಯವಿಲ್ಲದ, ಗೋಡೆಯಿಲ್ಲದ, ಕಂಬವಿಲ್ಲದ ಮರಳ ಮನೆಯೊಂದನ್ನು ಕಟ್ಟಿ, ಕತ್ತಲಾಗುವವರೆಗೂ ಅದನ್ನು ಕಾದು, ಮನೆಗೆ ತೆರಳುವ ಹೊತ್ತಿಗೆ ಅದನ್ನು ಬಿಟ್ಟು ತೆರಳುವಾಗ ಆಗುತ್ತಿದ್ದ ಸಂಕಟದಂಥಾ ಭಾವವೊಂದು ಆಗಾಗ ಕಾಡಿ, ಅದೇನೋ ಹೆದರಿಕೆಯಾದಂತಾಗಿ, ಸೊಗಸಲ್ಲದ ಸಂಗತಿಗಳನ್ನು ಬದಿಗೊತ್ತಿ ಒಂದಷ್ಟು ಹೊತ್ತು ಬರೆಯಲೇಬೇಕೆಂದು ಕೂತಾಗ ಅರಿವಾಗುತ್ತದೆ.
ಹೀಗೆ ಹೇಗೋ, ಎಲ್ಲಂದರಲ್ಲಿ ಗುನುಗಿಬಿಡುವ ಯಾವುದೋ ರಾಗದ ಛಾಯೆಯೊಂದು ಮರೆಯಾಗದೆ ಹಾಗೇ ಉಳಿದು ಮುಂದೊಂದು ದಿನ ಒಂದು ಹಾಡಾಗಿಬಿಡುವಂತೆ, ಯಾವುದೋ ಲಹರಿಯಲ್ಲಿ ಹೊಳೆದ ಸಾಲೊಂದು ಕಾದಂಬರಿಯೇ ಆಗಿಬಿಡಬಹುದು. ಆಗದೆಯೂ ಇರಬಹುದು. ಅಂತಹದೊಂದು ಲಹರಿಯ ನೆನಕೆಗೆ ಮುಂದಾಗಿ ಆ ಸಾಲೇ ನೆನಪಾಗದೆ ಹೋದಾಗ, ಶಾಲೆಯ ಪರೀಕ್ಷೆ ನೆನಪಾಗುತ್ತದೆ. ಪ್ರಶ್ನೆ ಪತ್ರಿಕೆಯೆದುರು ಕೂತು, ಇದನ್ನು ಓದಬೇಕಿತ್ತೆಂಬ ಅರಿವಾಗುತ್ತದೆ.

ಇತರೆ ತಿಂಡಿಗಳನ್ನೆಲ್ಲ ಹೇಗೋ ಗಬಗಬನೆ ಮುಗಿಸಿ, ಸವಿದು ತಿನ್ನಲು ತಟ್ಟೆಯ ಮೂಲೆಯಲ್ಲಿರಿಸಿದ್ದ ಆ ಇಷ್ಟದ ತಿನಿಸನ್ನು ತಿನ್ನುವ ಹೊತ್ತಿಗೆ ಹೊಟ್ಟೆ ತುಂಬಿದಂತಾಗಿ, ಹಳೆಯ ಉತ್ಕಟತೆ ಉಳಿದಿರುವುದಿಲ್ಲ. ನಿರಾಶೆಯಾಗುತ್ತದೆ.

ಕೆಲವೊಂದು ಕ್ರಿಯೆಗಳೇ ಹೀಗೆ. ಸಂಗೀತದ ಹಾಗೆ. ಬರಹದ ಹಾಗೆ. ಪ್ರೀತಿಯ ಹಾಗೆ. ಅದರಲ್ಲಿ ಮುಳುಗದೆ ಅದು ದಕ್ಕುವುದಿಲ್ಲ.
ಕಡಲ ನೀರಲ್ಲಿ ಆಡುವ ತವಕ ಆಗಲೂ ಇರಲಿಲ್ಲ. ಸುಖಾಸುಮ್ಮನೆ ಮರಳಲ್ಲಿ ಕೂತು ಕಡಲ ನೋಡುವ ಹಪಹಪಿಕೆ ಈಗಲೂ ಇದೆ. ಅಂತಹದೊಂದು ಮರಳ ದಂಡೆಯ ಮೇಲೆ ಕೂತು ಮತ್ತೊಂದು ರಾಗವ ಗುನುಗಿದಾಗಲೋ, ಸಾಲೊಂದು ಹೊಳೆದಾಗಲೋ ಮಿಂಚುವ ಖುಷಿಯನ್ನು ನಾನು ಎದುರು ನೋಡುತ್ತೇನೆ ಮತ್ತು ಅಂತಹ ತಹತಹದ ಹಾಡಾಗಲಿ, ಬರಹವಾಗಲಿ ದಕ್ಕುವವರೆಗು ನಾನು ಅವೆರಡನ್ನೂ ಮಾಡದೆ ಸುಮ್ಮನಿರಲು ಬುಂಸುತ್ತೇನೆ.

andolana

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

8 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

48 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

49 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

53 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

56 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago