ಆಂದೋಲನ ಪುರವಣಿ

ದ್ರೌಪದಿ ಮುರ್ಮು ಬೆಳೆದ ರೀತಿ ಸ್ಫೂರ್ತಿದಾಯಕ

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ

ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಚಾಪನ್ನು ಮೂಡಿಸುತ್ತಿದ್ದಾರೆ.
ಹೌದು.. ಅಂತಹವರ ಸಾಲಿಗೆ ಈಗ ಬುಡುಕಟ್ಟು ಮಹಿಳೆಯಾದ ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯಾಗುತ್ತಿರುವುದು ಸಂತಸದ ವಿಷಯವಾಗಿದೆ. ಇದೇ ಜುಲೈ ತಿಂಗಳು ೧೮ರಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಡುಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಳ್ಳುವ ಮೂಲಕ ಸಂಚಲನ ಮೂಡಿಸಿದೆ.

ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರೂ ಸ್ಪರ್ಧಿಸಿದ್ದಾರೆ. ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು, ಈ ಮೂಲಕ ಒಡಿಶಾ ಮೂಲದ ಮಹಿಳೆಯೊಬ್ಬರು ದೇಶದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿಯೂ, ಭಾರತದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿಯೂ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

೧೯೯೭ರಲ್ಲಿ ಕೌನ್ಸಿಲರ್ ಆಗಿ ರಾಜಕೀಯ ವೃತ್ತಿಗೆ ಕಾಲಿರಿಸುವ ಮುನ್ನ ಅವರು ಶಿಕ್ಷಕಿಯಾಗಿದ್ದರು. ಬಿಜೆಪಿಯ ಬುಡಕಟ್ಟು ಮೋರ್ಚಾ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುವ ಅವರು, ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ ೨೦೦೦-೨೦೦೨ರವರೆಗೆ ವಾಣಿಜ್ಯ ಮತ್ತು ಸಾರಿಗೆ ಸ್ವತಂತ್ರ ಖಾತೆ ರಾಜ್ಯ ಸಚಿವೆಯಾಗಿದ್ದರು. ೨೦೦೨-೨೦೦೪ರವರೆಗೆ ಮೀನುಗಾರಿಗೆ ಮತ್ತು ಪ್ರಾಣಿ ಸಂಪನ್ಮೂಲ ಅಭಿವೃದ್ಧಿ ಸಚಿವೆಯಾಗಿಯೂ ಇದ್ದರು. ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲೆಯಾಗಿ ಕಾರ್ಯ ನಿರ್ವಹಿಸಿದ ಒಡಿಶಾದ ಮೊದಲ ಬುಡಕಟ್ಟು ನಾಯಕಿ ನಾಯಕಿ ಎಂಬ ಕೀರ್ತಿಗೂ ಹೆಸರಾದರು.

ನೋವುಗಳ ನಡುವೆ ದ್ರಾಪದಿ ಮುರ್ಮು 
ಮಯೂರ್‌ಭಂಜ್ ಜಿಲ್ಲೆಯ ಕುಸುಮಿ ಬ್ಲಾಕ್‌ನ ಉಪಾರ್ಬೇಡ ಎಂಬ ಕುಗ್ರಾಮದಲ್ಲಿ ಸಂಟಲ್ ಬುಡಕಟ್ಟು ಕುಟುಂಬದಲ್ಲಿ ೧೯೫೮ರ ಜೂನ್ ೨೦ರಂದು ಜನಿಸಿದ ದ್ರೌಪದಿ ಮುರ್ಮು ಅವರ ಜೀವನ ಕಡುಬಡತನ, ಶೋಚನೀಯ ಸಾಮಾಜಿಕ ಸ್ಥಿತಿಯಂತಹ ನೂರಾರು ಸಂಕಷ್ಟಗಳ ನಡುವೆೆುೀಂ ಅವರು ಬೆಳೆದುನಿಂತ ಪರಿ ಅಚ್ಚರಿ ಹಾಗೂ ಸ್ಛೂರ್ತಿದಾಯಕ. ಅವರ ಒಬ್ಬ ಮಗ ೨೦೦೯ರಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದರು. ಮತ್ತೊಬ್ಬ ಮಗ ೨೦೧೨ರಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದರು. ಪ್ರಸ್ತುತ ಅವರಿಗೆ ಒಬ್ಬ ಮಗಳು ಇತಿಶ್ರೀ ಮಾತ್ರ ಇದ್ದಾರೆ. ಅವರು ಮದುವೆಯಾಗಿ ಭುವನೇಶ್ವರದಲ್ಲಿ ನೆಲೆಸಿದ್ದಾರೆ. ಪತಿ ಗಣೇಶ್ ಹೆಂಬ್ರಮ್ ರಗ್ಬಿ ಆಟಗಾರರಾಗಿದ್ದಾರೆ.

andolanait

Recent Posts

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

16 mins ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

1 hour ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

2 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

2 hours ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

3 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago