ಆಂದೋಲನ ಪುರವಣಿ

ದ್ರೌಪದಿ ಮುರ್ಮು ಬೆಳೆದ ರೀತಿ ಸ್ಫೂರ್ತಿದಾಯಕ

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ

ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಚಾಪನ್ನು ಮೂಡಿಸುತ್ತಿದ್ದಾರೆ.
ಹೌದು.. ಅಂತಹವರ ಸಾಲಿಗೆ ಈಗ ಬುಡುಕಟ್ಟು ಮಹಿಳೆಯಾದ ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯಾಗುತ್ತಿರುವುದು ಸಂತಸದ ವಿಷಯವಾಗಿದೆ. ಇದೇ ಜುಲೈ ತಿಂಗಳು ೧೮ರಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಡುಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಕೊಳ್ಳುವ ಮೂಲಕ ಸಂಚಲನ ಮೂಡಿಸಿದೆ.

ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರೂ ಸ್ಪರ್ಧಿಸಿದ್ದಾರೆ. ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು, ಈ ಮೂಲಕ ಒಡಿಶಾ ಮೂಲದ ಮಹಿಳೆಯೊಬ್ಬರು ದೇಶದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿಯೂ, ಭಾರತದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿಯೂ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

೧೯೯೭ರಲ್ಲಿ ಕೌನ್ಸಿಲರ್ ಆಗಿ ರಾಜಕೀಯ ವೃತ್ತಿಗೆ ಕಾಲಿರಿಸುವ ಮುನ್ನ ಅವರು ಶಿಕ್ಷಕಿಯಾಗಿದ್ದರು. ಬಿಜೆಪಿಯ ಬುಡಕಟ್ಟು ಮೋರ್ಚಾ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುವ ಅವರು, ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ ೨೦೦೦-೨೦೦೨ರವರೆಗೆ ವಾಣಿಜ್ಯ ಮತ್ತು ಸಾರಿಗೆ ಸ್ವತಂತ್ರ ಖಾತೆ ರಾಜ್ಯ ಸಚಿವೆಯಾಗಿದ್ದರು. ೨೦೦೨-೨೦೦೪ರವರೆಗೆ ಮೀನುಗಾರಿಗೆ ಮತ್ತು ಪ್ರಾಣಿ ಸಂಪನ್ಮೂಲ ಅಭಿವೃದ್ಧಿ ಸಚಿವೆಯಾಗಿಯೂ ಇದ್ದರು. ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲೆಯಾಗಿ ಕಾರ್ಯ ನಿರ್ವಹಿಸಿದ ಒಡಿಶಾದ ಮೊದಲ ಬುಡಕಟ್ಟು ನಾಯಕಿ ನಾಯಕಿ ಎಂಬ ಕೀರ್ತಿಗೂ ಹೆಸರಾದರು.

ನೋವುಗಳ ನಡುವೆ ದ್ರಾಪದಿ ಮುರ್ಮು 
ಮಯೂರ್‌ಭಂಜ್ ಜಿಲ್ಲೆಯ ಕುಸುಮಿ ಬ್ಲಾಕ್‌ನ ಉಪಾರ್ಬೇಡ ಎಂಬ ಕುಗ್ರಾಮದಲ್ಲಿ ಸಂಟಲ್ ಬುಡಕಟ್ಟು ಕುಟುಂಬದಲ್ಲಿ ೧೯೫೮ರ ಜೂನ್ ೨೦ರಂದು ಜನಿಸಿದ ದ್ರೌಪದಿ ಮುರ್ಮು ಅವರ ಜೀವನ ಕಡುಬಡತನ, ಶೋಚನೀಯ ಸಾಮಾಜಿಕ ಸ್ಥಿತಿಯಂತಹ ನೂರಾರು ಸಂಕಷ್ಟಗಳ ನಡುವೆೆುೀಂ ಅವರು ಬೆಳೆದುನಿಂತ ಪರಿ ಅಚ್ಚರಿ ಹಾಗೂ ಸ್ಛೂರ್ತಿದಾಯಕ. ಅವರ ಒಬ್ಬ ಮಗ ೨೦೦೯ರಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದರು. ಮತ್ತೊಬ್ಬ ಮಗ ೨೦೧೨ರಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದರು. ಪ್ರಸ್ತುತ ಅವರಿಗೆ ಒಬ್ಬ ಮಗಳು ಇತಿಶ್ರೀ ಮಾತ್ರ ಇದ್ದಾರೆ. ಅವರು ಮದುವೆಯಾಗಿ ಭುವನೇಶ್ವರದಲ್ಲಿ ನೆಲೆಸಿದ್ದಾರೆ. ಪತಿ ಗಣೇಶ್ ಹೆಂಬ್ರಮ್ ರಗ್ಬಿ ಆಟಗಾರರಾಗಿದ್ದಾರೆ.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

17 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

37 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

48 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

51 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

56 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

1 hour ago