ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ನಾಳೆ ರಂಗದ ಮೇಲೆ ʼರಂಗನಾಯಕಿʼ

ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ.

ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕ ರಚನೆ ಅನಘಾ ನರಸಿಂಹ ಅವರದು, ವೇದ ವೆಂಕಟೇಶ್ ಹಾಗೂ ರೂಪಕ್ ಕಲ್ಲೂಲ್ಕರ್ ಅವರು ಸಂಗೀತ ನೀಡಿದ್ದಾರೆ. ರಂಗನಾಯಕಿ ತನ್ನ ಯೌವನದ ದಿನಗಳಲ್ಲಿ ಯಶಸ್ಸಿನ ಉತ್ತುಂಗ ಹಾಗೂ ಬೇಡಿಕೆ ಹೊಂದಿದ್ದು, ಮುಪ್ಪು ಆವರಿಸಿದಾಗ ಆಕೆ ಅನುಭವಿಸುವ ಮಾನಸಿಕ ತಲ್ಲಣಗಳನ್ನು ಈ ನಾಟಕ ಅಭಿವ್ಯಕ್ತಪಡಿಸುತ್ತದೆ. ಕೊನೆಗೆ ‘ಇದ್ದದ್ದೇ ಮಾಯೆ, ಇಲ್ಲದ್ದೇ ಬದುಕು’ ಎಂಬ ಭಾವನೆ ಆಕೆಗೆ ಬರುತ್ತದೆ. ಇದನ್ನು ಅಪೂರ್ವ ನಾಗರಾಜ್ ಕಲಾಮಂದಿರದ ಕಿರುರಂಗಮಂದಿರದಲ್ಲಿ ಏಕಾಭಿನಯದ ಮೂಲಕ ಸಾದರಪಡಿಸಲಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ವೀಕ್ಷಿಸಬಹುದು.

andolanait

Recent Posts

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

7 mins ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

2 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

2 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

3 hours ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

13 hours ago