ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕ ರಚನೆ ಅನಘಾ ನರಸಿಂಹ ಅವರದು, ವೇದ ವೆಂಕಟೇಶ್ ಹಾಗೂ ರೂಪಕ್ ಕಲ್ಲೂಲ್ಕರ್ ಅವರು ಸಂಗೀತ ನೀಡಿದ್ದಾರೆ. ರಂಗನಾಯಕಿ ತನ್ನ ಯೌವನದ ದಿನಗಳಲ್ಲಿ ಯಶಸ್ಸಿನ ಉತ್ತುಂಗ ಹಾಗೂ ಬೇಡಿಕೆ ಹೊಂದಿದ್ದು, ಮುಪ್ಪು ಆವರಿಸಿದಾಗ ಆಕೆ ಅನುಭವಿಸುವ ಮಾನಸಿಕ ತಲ್ಲಣಗಳನ್ನು ಈ ನಾಟಕ ಅಭಿವ್ಯಕ್ತಪಡಿಸುತ್ತದೆ. ಕೊನೆಗೆ ‘ಇದ್ದದ್ದೇ ಮಾಯೆ, ಇಲ್ಲದ್ದೇ ಬದುಕು’ ಎಂಬ ಭಾವನೆ ಆಕೆಗೆ ಬರುತ್ತದೆ. ಇದನ್ನು ಅಪೂರ್ವ ನಾಗರಾಜ್ ಕಲಾಮಂದಿರದ ಕಿರುರಂಗಮಂದಿರದಲ್ಲಿ ಏಕಾಭಿನಯದ ಮೂಲಕ ಸಾದರಪಡಿಸಲಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ವೀಕ್ಷಿಸಬಹುದು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…