ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕ ರಚನೆ ಅನಘಾ ನರಸಿಂಹ ಅವರದು, ವೇದ ವೆಂಕಟೇಶ್ ಹಾಗೂ ರೂಪಕ್ ಕಲ್ಲೂಲ್ಕರ್ ಅವರು ಸಂಗೀತ ನೀಡಿದ್ದಾರೆ. ರಂಗನಾಯಕಿ ತನ್ನ ಯೌವನದ ದಿನಗಳಲ್ಲಿ ಯಶಸ್ಸಿನ ಉತ್ತುಂಗ ಹಾಗೂ ಬೇಡಿಕೆ ಹೊಂದಿದ್ದು, ಮುಪ್ಪು ಆವರಿಸಿದಾಗ ಆಕೆ ಅನುಭವಿಸುವ ಮಾನಸಿಕ ತಲ್ಲಣಗಳನ್ನು ಈ ನಾಟಕ ಅಭಿವ್ಯಕ್ತಪಡಿಸುತ್ತದೆ. ಕೊನೆಗೆ ‘ಇದ್ದದ್ದೇ ಮಾಯೆ, ಇಲ್ಲದ್ದೇ ಬದುಕು’ ಎಂಬ ಭಾವನೆ ಆಕೆಗೆ ಬರುತ್ತದೆ. ಇದನ್ನು ಅಪೂರ್ವ ನಾಗರಾಜ್ ಕಲಾಮಂದಿರದ ಕಿರುರಂಗಮಂದಿರದಲ್ಲಿ ಏಕಾಭಿನಯದ ಮೂಲಕ ಸಾದರಪಡಿಸಲಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ವೀಕ್ಷಿಸಬಹುದು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…