ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕ ರಚನೆ ಅನಘಾ ನರಸಿಂಹ ಅವರದು, ವೇದ ವೆಂಕಟೇಶ್ ಹಾಗೂ ರೂಪಕ್ ಕಲ್ಲೂಲ್ಕರ್ ಅವರು ಸಂಗೀತ ನೀಡಿದ್ದಾರೆ. ರಂಗನಾಯಕಿ ತನ್ನ ಯೌವನದ ದಿನಗಳಲ್ಲಿ ಯಶಸ್ಸಿನ ಉತ್ತುಂಗ ಹಾಗೂ ಬೇಡಿಕೆ ಹೊಂದಿದ್ದು, ಮುಪ್ಪು ಆವರಿಸಿದಾಗ ಆಕೆ ಅನುಭವಿಸುವ ಮಾನಸಿಕ ತಲ್ಲಣಗಳನ್ನು ಈ ನಾಟಕ ಅಭಿವ್ಯಕ್ತಪಡಿಸುತ್ತದೆ. ಕೊನೆಗೆ ‘ಇದ್ದದ್ದೇ ಮಾಯೆ, ಇಲ್ಲದ್ದೇ ಬದುಕು’ ಎಂಬ ಭಾವನೆ ಆಕೆಗೆ ಬರುತ್ತದೆ. ಇದನ್ನು ಅಪೂರ್ವ ನಾಗರಾಜ್ ಕಲಾಮಂದಿರದ ಕಿರುರಂಗಮಂದಿರದಲ್ಲಿ ಏಕಾಭಿನಯದ ಮೂಲಕ ಸಾದರಪಡಿಸಲಿದ್ದಾರೆ. ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ವೀಕ್ಷಿಸಬಹುದು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…