ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ವೃತ್ತಿಯಲ್ಲಿ ಡಾಕ್ಟರ್ ಪ್ರವೃತ್ತಿಯಲ್ಲಿ ಸಿಂಗರ್

ಸಕ್ಕರೆ ನಾಡಿನ ಡಾ. ಮಾದೇಶ್ ಹಾಡಿಗೆ ಎಲ್ಲರ ಮೆಚ್ಚುಗೆ; ಮಂಡ್ಯದ ಯೇಸುದಾಸ್ ಎಂದೇ ಖ್ಯಾತಿ

ಮಂಡ್ಯದ ಡಾ. ಮಾದೇಶ್ ಎಂದರೆ ಎಲ್ಲರಿಗೂ ಪರಿಚಿತ. ವೃತ್ತಿಯಲ್ಲಿ ಡಾಕ್ಟರ್ ಆಗಿರುವ ಇವರು ಪ್ರವೃತ್ತಿಯಲ್ಲಿ ಒಳ್ಳೆಯ ಹಾಡುಗಾರ. ಕೆ.ಜೆ. ಯೇಸುದಾಸ್ ಶೈಲಿಯಲ್ಲಿಯೇ ಹಾಡುವ ಇವರು ಜಿಲ್ಲೆಯಾದ್ಯಂತ ಅಭಿನವ ಯೇಸುದಾಸ್ ಎಂದೇ ಪ್ರಸಿದ್ಧಿ. ಮಲೆ ಮಹದೇಶ್ವರ-ಮಂಟೇಸ್ವಾಮಿ ಕಥನ ಕಾವ್ಯಗಳ ಜನಪದ ಗಾಯನದ ಮೂಲಕ ಗಾಯನ ಕ್ಷೇತ್ರ ಪ್ರವೇಶಿಸಿದ ಮಾದೇಶ್, ಯೇಸುದಾಸ್ ಹಾಡಿರುವ ಕನ್ನಡ, ತಮಿಳು, ತೆಲಗು, ಹಿಂದಿ ಭಾಷೆಗಳ ಚಲನಚಿತ್ರ ಗೀತೆಗಳನ್ನು ಹಾಡಿ ಮನೆ ಮಾತಾಗಿದ್ದಾರೆ. ‘ಮಂಡ್ಯದ ಯೇಸುದಾಸ್’ ಎಂದೇ ಮನೆಮಾತಾಗಿರುವ ಡಾ.ಮಾದೇಶ್, ಪ್ರತಿವರ್ಷ ತಮ್ಮ ನಾಯಕತ್ವದಲ್ಲಿ ಜಿಲ್ಲಾ ಗಾಯಕರ ಟ್ರಸ್ಟ್ ವತಿಯಿಂದ ಯೇಸುದಾಸ್ ಹುಟ್ಟುಹಬ್ಬದ ಅಂಗವಾಗಿ ‘ಗಾಯನ ಯಾನ’ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಜಿಲ್ಲೆಯ ಹಲವಾರು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿದ್ದಾರೆ.

ಯುವಕರಿಗೆ ಹೆಚ್ಚಿನ ಪ್ರೋತ್ಸಾಹಜಿಲ್ಲಾ ಗಾಯಕರ ಟ್ರಸ್ಟ್ ಅಧ್ಯಕ್ಷರಾಗಿ ಕಲಾವಿದರನ್ನು, ಅದರಲ್ಲೂ ಗ್ರಾಮೀಣ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದಾರೆ ಮಾದೇಶ್. ಭಾವಗೀತೆ, ಚಲನಚಿತ್ರ ಗೀತೆ, ಭಕ್ತಿಗೀತೆ ಕಾರ್ಯಕ್ರಮಗಳ ಆಯೋಜಕರು ಕೂಡ ಹೌದು. ಸಾಹಿತ್ಯ, ಕಲೆ, ಜಾನಪದ, ಸಿನಿಮಾ, ರಂಗಭೂಮಿ, ರಾಜಕೀಯ, ವೈಚಾರಿಕ, ಪ್ರಗತಿಪರ ಚಳವಳಿಗೆ ಹೆಸರಾದ ಮಂಡ್ಯದಲ್ಲಿ ಗಾಯನ ಕ್ಷೇತ್ರವನ್ನೂ ಗಟ್ಟಿಕೊಳಿಸುತ್ತಿದ್ದಾರೆ ಇವರು.ಯೇಸುದಾಸ್‌ರಿಂದ ಮೆಚ್ಚುಗೆ

ಸ್ವತಃ ಯೇಸುದಾಸ್ ಅವರೇ, ಮಾದೇಶ್ ಅವರ ಪ್ರತಿಭೆಯನ್ನು ಗುರುತಿಸಿ ಬೆನ್ನುತಟ್ಟಿದ್ದಾರೆ. ಯೇಸುದಾಸ್ ಅವರು ಪ್ರತಿವರ್ಷ ತಮ್ಮ ಹುಟ್ಟು ಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಆಚರಿಸಿಕೊಳ್ಳುತ್ತಾರೆ. ಅಲ್ಲಿಗೆ ಡಾ.ಮಾದೇಶ್ ಅವರು ಭೇಟಿ ನೀಡಿ ಅಭಿನಂದಿಸುತ್ತಾ ಬಂದಿದ್ದಾರೆ.ಒಂದೂವರೆ ದಶಕದಿಂದ ಜಿಲ್ಲೆಯಲ್ಲಿ ಸೇವೆ

ಈ ಹಿಂದೆ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯಲ್ಲಿ ಎಆರ್‌ಟಿ ಮೆಡಿಕಲ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದ ಡಾ.ಮಾದೇಶ್, ೧೫ ವರ್ಷದಿಂದ ತನ್ನ ತವರು ಜಿಲ್ಲೆ, ಮಂಡ್ಯದ ಎಸ್.ಡಿ. ಜಯರಾಂ ಆಸ್ಪತ್ರೆಯ ಆಡಳಿತ ವೈದ್ಯರಾಗಿದ್ದಾರೆ. ವೃತ್ತಿಯ ಜಂಜಾಟದ ನಡುವೆಯೂ ಅವರ ಗಾಯನ ಸುಧೆಗೆ ಧಣಿವಿಲ್ಲ.ಹಾಡುತ್ತಲೇ ಬೆಳೆದ ಪ್ರತಿಭೆ

ಡಾ. ಮಾದೇಶ್ ಯಾವುದೇ ಸಂಗೀತದಹಿನ್ನೆಲೆ ಉಳ್ಳವರಲ್ಲ. ಎಲ್ಲಿಯೂ ಹೋಗಿ ಸಂಗೀತ ಅಭ್ಯಾಸ ಮಾಡಿದವರಲ್ಲ. ಆದರೆ ಬಾಲ್ಯದಿಂದಲೇ ತಮ್ಮ ಸುತ್ತಲೂ ಕೇಳುತ್ತಿದ್ದ ಜನಪದ ಹಾಡುಗಳು, ತಂದೆ, ತಾಯಿ ಮತ್ತು ಬಂಧುಗಳು ಹಾಡುತ್ತಿದ್ದ ಹಾಡುಗಳನ್ನು ಗುನುಗುತ್ತಲೇ ಬೆಳೆದವರು,ಗಾಯನ ಕಲಿತವರು.ಜಿಲ್ಲಾ ಮಟ್ಟದಲ್ಲಿ ಹಲವು ಪ್ರಶಸ್ತಿಮಾದೇಶ್ ಅವರಿಗೆ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಸೇರಿದಂತೆ ಮಂಡ್ಯದ ಪ್ರತಿಷ್ಠಿತ ಸಂಘಸಂಸ್ಥೆಗಳು ಕೊಡಮಾಡುವ ಹತ್ತು ಹಲವು ಪ್ರಶಸ್ತಿಗಳು ದೊರಕಿವೆ. ಒಂದು ಕಡೆ ವೃತ್ತಿ ಜೀವನದಲ್ಲಿಯೂ ಏಳಿಗೆ ಸಾಧಿಸುತ್ತಾ, ಪ್ರವೃತ್ತಿಯನ್ನೂ ಮುಂದುವರಿಸಿರುವ ಇವರು ಉಚಿತ ರಕ್ತದಾನ, ಆರೋಗ್ಯ ತಪಾಸಣೆ ಶಿಬಿರ, ಹಲವಾರು ಪ್ರಗತಿಪರ, ಜನಪರ ಕಾರ್ಯಕ್ರಮಗಳು ಮತ್ತು ಜಿಲ್ಲೆಯ ಎಲ್ಲ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.


ವಿದ್ಯಾರ್ಥಿಯಾಗಿದ್ದಾಗಲೇ ಹಲವು ಕಾರ್ಯಕ್ರಮಗಳಲ್ಲಿ  ಹಾಡಿ ಪ್ರಶಸ್ತಿಗಳನ್ನು ಪಡೆಯುತ್ತಿದ್ದೆ. ವೈದ್ಯ ವಿದ್ಯಾರ್ಥಿಯಾಗಿದ್ದಾಗ ಚಾಮರಾಜನಗರದಲ್ಲಿ ಆಯೋಜಿಸಿದ್ದ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ಅಲ್ಲಿಗೆ ಖ್ಯಾತ ಸಂಗೀತ ನಿರ್ದೇಶಕ ವಿ.ಮನೋಹರ್ ತೀರ್ಪುಗಾರರಾಗಿ ಬಂದಿದ್ದರು. ಅಲ್ಲಿ ಅವರು ನನ್ನ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದರು. ಹಾಡುವುದು ನನಗೆ ಸಂತೋಷ ಕೊಡುತ್ತದೆ. ಹೀಗೆ ವೃತ್ತಿಯ ನಡುವೆ ಪ್ರವೃತ್ತಿಯನ್ನು ಮುಂದುವರಿಸಿಕೊಂಡು ಬರುತ್ತಿದ್ದೇನೆ.

-ಡಾ.ಮಾದೇಶ್.

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

6 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

7 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

7 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

7 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

7 hours ago