ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ʻಆಯಾಮ ಆಕಾಡೆಮಿʼ

ಜಿ. ತಂಗಂ ಗೋಪಿನಾಥಂ

ಒಂದೇ ಸೂರಿನಡಿ ಕರ್ನಾಟಕ ಶಾಸ್ತ್ರೀಯ ನೃತ್ಯ, ಸಂಗೀತ, ಸುಗಮ ಸಂಗೀತ, ಮಕ್ಕಳ ನಾಟಕ. . . ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಸಮನ್ವಯತೆ ಸಾಧಿಸಿಕೊಂಡು ಗ್ರಾಮೀಣ ಪ್ರತಿಭೆಗಳನ್ನು ಹೊರತರುವಲ್ಲಿ ಶ್ರಮಿಸುತ್ತಿರುವ ಮೈಸೂರಿನ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ಕಲಾ ಶಾಲೆಗೆ ಈಗ ಬೆಳ್ಳಿಹಬ್ಬದ ಸಂಭ್ರಮ.

೧೯೯೯ ನ. ೧೪ರ ಮಕ್ಕಳ ದಿನಾಚರಣೆಯಂದು ಶ್ರೀರಂಗಪಟ್ಟಣದಲ್ಲಿ ಪ್ರಾರಂಭವಾದ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ಕಲಾ ಸಂಸ್ಥೆ ಮಂಡ್ಯ, ಮೈಸೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿಯೂ ಕಾರ್ಯಾರಂಭಗೊಂಡು ಅವಕಾಶ ವಂಚಿತ ನೂರಾರು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ.

ಈ ಅಕಾಡೆಮಿ ಕಳೆದ ೨೫ ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದು, ಭರತನಾಟ್ಯ, ಸಂಗೀತ, ಯೋಗ, ಸಂಸ್ಕೃತ, ವಾದ್ಯಗಳು, ಮಕ್ಕಳ ರಂಗತರಬೇತಿ, ಜಾನಪದ ಕಲೆಗಳು. . . ಹೀಗೆ ಹಲವು ಆಯಾಮಗಳಲ್ಲಿ ವಿವಿಧ ಕಲಾ ಚಟುವಟಿಕೆಗಳ ಮೂಲಕ ಸಾವಿರಾರು ಮಕ್ಕಳನ್ನು ನೃತ್ಯಗಾರರನ್ನಾಗಿ, ಸಂಗೀತಗಾರರನ್ನಾಗಿ ಮಾಡಿದೆ. ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಪದವಿ ಹೊಂದಿದ ಅನೇಕ ಪ್ರತಿಭಾನ್ವಿತರನ್ನು ಗುರುತಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡುವ ಕೆಲಸವನ್ನೂ ಈ ಸಂಸ್ಥೆ ಮಾಡುತ್ತಿದೆ. ಜತೆಗೆ ಮಕ್ಕಳ ಹೆಚ್ಚಿನ ಕಲಿಕೆಗೆ ಒತ್ತು ನೀಡುವ ಸಲುವಾಗಿ ಹಲವಾರು ಕಲಾ ಶಿಬಿರಗಳು, ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಗಳು, ಸಂವಾದ ಕಾರ್ಯಕ್ರಮಗಳನ್ನೂ ಆಯೋಜಿಸುತ್ತಾ ಬಂದಿದೆ. ಹಲವು ನೃತ್ಯ, ಸಂಗೀತ, ನಾಟಕ, ಉತ್ಸವಗಳನ್ನು ಹಮ್ಮಿಕೊಂಡು ನಾಡಿನಾದ್ಯಂತ ನೂರಾರು ಕಲಾವಿದರಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಆ ಮೂಲಕ ಆಯಾಮ ಅಕಾಡೆಮಿಯು ಕಲೆಯ ಜೊತೆಗೆ ಮೌಲ್ಯಾ ಧಾರಿತ ಶಿಕ್ಷಣಕ್ಕೆ ಒತ್ತುಕೊಟ್ಟು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದೆ.

೩೫ ವರ್ಷಗಳಿಂದ ಭರತನಾಟ್ಯ ಸೇವೆ
ವಿದುಷಿ ಡಾ. ಎಸ್. ವಿ. ಶಾಂಭವಿ ಸ್ವಾಮಿ ಅವರು ೩೫ ವರ್ಷಗಳಿಂದ ಭರತನಾಟ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಯಾವುದೇ ಶೈಲಿಗೆ ಕಟ್ಟುಬೀಳದೆ ಭರತನ ನಾಟ್ಯಶಾಸ್ತ್ರ ಆಧಾರಿತ ರೀತಿಯಲ್ಲಿ ನೃತ್ಯ ಪಸರಿಸುತ್ತಿದ್ದಾರೆ. ೧೯೯೯ರಲ್ಲಿ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ಎಂಬ ಲಲಿತ ಕಲಾ ಶಾಲೆಯನ್ನು ಸ್ಥಾಪಿಸಿದ ಇವರು, ನಗರ ಸೇರಿದಂತೆ ಅವಕಾಶ ವಂಚಿತ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಂಗೀತ, ನೃತ್ಯ, ನಾಟಕ ಕಲೆಗಳ ತರಬೇತಿ ನೀಡುತ್ತಾ, ಅವರ ಪ್ರತಿಭೆಗೆ ಉತ್ತಮ ವೇದಿಕೆ ಕಲ್ಪಿಸಿದ್ದಾರೆ. ಜತೆಗೆ ಶ್ರೀರಂಗಪಟ್ಟಣ ಹಾಗೂ ಪಾಂಡವಪುರದಲ್ಲಿ ಸಂಗೀತ ಮತ್ತು ನೃತ್ಯ ಶಾಲೆಗಳನ್ನು ಆರಂಭಿಸಿದ್ದಾರೆ. ಈ ಎಲ್ಲ ಕಡೆ ಆರಂಭದಲ್ಲಿ ಬೆರಳೆಣಿಕೆಯಷ್ಟು ಇದ್ದ ವಿದ್ಯಾರ್ಥಿಗಳ ಸಂಖ್ಯೆ ಪ್ರಸ್ತುತ ಗಣನೀಯವಾಗಿ ಹೆಚ್ಚಾಗಿದೆ.

ವಾರಪೂರ್ತಿ ತರಬೇತಿ
ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ಮೈಸೂರಿನ ಬೋಗಾದಿಯ ೨ನೇ ಹಂತದಲ್ಲಿದ್ದು, ಅಲ್ಲಿ ವಾರಪೂರ್ತಿ ತರಬೇತಿ ತರಗತಿಗಳು ನಡೆಯುತ್ತವೆ. ಡಾ. ಎಸ್. ವಿ. ಶಾಂಭವಿ ಸ್ವಾಮಿ ಅವರು ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಸುಗಮ ಸಂಗೀತ, ರಂಗಗೀತೆ ಹಾಗೂ ಮಕ್ಕಳ ನಾಟಕಗಳನ್ನು ಹೇಳಿಕೊಡುತ್ತಿದ್ದಾರೆ. ಪ್ರತಿದಿನ ಮಕ್ಕಳ ನಾಟಕ ತರಗತಿ, ಶಾಸ್ತ್ರೀಯ ಹಾಗೂ ಸುಗಮ ಸಂಗೀತ, ಭರತನಾಟ್ಯ, ರಂಗ ಗೀತೆಯ ತರಗತಿಗಳು ನಡೆಯುತ್ತವೆ. ಸಂಗೀತ, ನೃತ್ಯ ತರಗತಿಗಳಿಗೆ ತಲಾ ೬೦ ವಿದ್ಯಾರ್ಥಿಗಳು ಹಾಗೂ ನಾಟಕ ಕಲಿಯಲು ೨೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ.

ಶಾಂಭವಿ ಸ್ವಾಮಿ ನಡೆದು ಬಂದ ಹಾದಿ

ಕಳೆದ ೧೫ ವರ್ಷಗಳಿಂದಲೂ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲಾ ಕಾಲೇಜಿನ ನೃತ್ಯ ವಿಭಾಗದಲ್ಲಿ ವಿದುಷಿ ಡಾ. ಎಸ್. ವಿ. ಶಾಂಭವಿ ಸ್ವಾಮಿ ಅವರು ಸಹಾಯಕ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದಲ್ಲಿ ಶ್ರೀರಂಗಪಟ್ಟಣದ ಪರಿಮಳಾ ಐಯ್ಯರ್ ಬಳಿ ನೃತ್ಯ ಕಲಿತ ಇವರು, ಬಳಿಕ ಮಣಿ ಐಯ್ಯರ್, ಪ್ರಕಾಶ್ ಐಯ್ಯರ್ ಬಳಿಯೂ ತರಬೇತಿ ಪಡೆದಿದ್ದಾರೆ. ಪಿಯುಸಿ ವೇಳೆ ಡಾ. ಶೀಲಾ ಶ್ರೀಧರ್ ಬಳಿ ತರಬೇತಿ ಪಡೆದ ಇವರು, ನಂತರ ಡಾ. ಕುಮಾರ್ ಬಳಿ ತರಬೇತಿ ಪಡೆದು ರಂಗಪ್ರವೇಶ ಮಾಡಿದರು. ಬೆಂಗಳೂರು ವಿವಿಯ ನೃತ್ಯ ವಿಭಾಗದಲ್ಲಿ ಎಂಎ ಪದವಿ ಪಡೆದಿದ್ದಾರೆ. ಡಾ. ಶೀಲಾ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ‘ಸಂಸ್ಕೃತ ನಾಟಕಗಳಲ್ಲಿ ನೃತ್ಯಾಂಶಗಳು’ ವಿಷಯದಲ್ಲಿ ಪಿಎಚ್. ಡಿ. ಮಾಡಿ, ಮೈಸೂರು ವಿವಿಯ ಲಲಿತ ಕಲಾ ಕಾಲೇಜಿನ ನೃತ್ಯ ವಿಭಾಗದಲ್ಲಿ ಡಾಕ್ಟರೇಟ್ ಪಡೆದ ಮೊದಲಿಗರೆನಿಸಿಕೊಂಡಿದ್ದಾರೆ.

 

AddThis Website Tools
ಆಂದೋಲನ ಡೆಸ್ಕ್

Recent Posts

ಪಹಲ್ಗಾಮ್‌ ದಾಳಿಗೆ ಪ್ರತೀಕಾರ: ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟ ಭಾರತ ಸರ್ಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ…

6 hours ago

ನಾಳೆ ಅರ್ಧ ದಿನ ಶಿವಮೊಗ್ಗ ಬಂದ್

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್‌ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ…

7 hours ago

ಹುಣಸೂರಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು: ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ…

7 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ…

7 hours ago

ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…

8 hours ago

ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…

8 hours ago