ವಾರಾಂತ್ಯ ವಿಶೇಷ

ಸೇನಾ ವಿಶೇಷತೆಗಳ ಆಗರ ಜನರಲ್ ತಿಮ್ಮಯ್ಯ ಮ್ಯೂಸಿಯಂ

ಚಂದನ್ ನಂದರಬೆಟ್ಟು

ಕರ್ನಾಟಕದ ಕಾಶ್ಮೀರ ಎಂದು ಕರೆಯಲ್ಪಡುವ ಕೊಡಗು, ಭಾರತದ ಪುಟ್ಟ ಜಿಲ್ಲೆಯಾದರೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಆ ಕೊಡುಗೆಗಳಲ್ಲಿ ಅತ್ಯಂತ ಅನನ್ಯವಾದ ಹೆಸರೆಂದರೆ ಭಾರತೀಯ ಸೇನೆಯ ದಂಡ ನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರು. ತಿಮ್ಮಯ್ಯನವರು ಹುಟ್ಟಿ ಬೆಳೆದಿದ್ದ ಮನೆ ‘ಸನ್ನಿಸೈಡ್’ ಈಗ ಯುದ್ಧ ಸ್ಮಾರಕವಾಗಿ ಪರಿವರ್ತನೆಯಾಗಿದೆ.

೨೦೨೧ರ ಫೆ.೬ರಂದು ಭಾರತದ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಯುದ್ಧ ಸ್ಮಾರಕವನ್ನು ಲೋಕಾರ್ಪಣೆ ಮಾಡಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ರಸ್ತೆಯ ಪಕ್ಕದಲೇ ಇರುವ ‘ಸನ್ನಿಸೈಡ್’ ಮ್ಯೂಸಿಯಂನ ಅವರಣಕ್ಕೆ ಪ್ರವೇಶಿಸುತ್ತಿದ್ದಂತೆ ಯುದ್ಧ ಟ್ಯಾಂಕರ್, ಯುದ್ಧ ವಿಮಾನ ಹಾಗೂ ಸ್ಮಾರಕ ನೋಡುಗರನ್ನು ಸೆಳೆಯುತ್ತವೆ.

ಈಗಾಗಲೇ ಸೇನೆಯ ಅನೇಕ ವಿಶೇಷತೆಗಳಿಂದ ದೇಶದ ಜನರನ್ನು ಬಹಳಷ್ಟು ಆಕರ್ಷಿಸಿರುವ ಈ ಮ್ಯೂಸಿಯಂನಲ್ಲಿ ಮಹಾರಾಷ್ಟ್ರದ ಪುಣೆಯ ಕೀರ್ಕಿ ಸೇನಾ ಕೇಂದ್ರದ ಯುದ್ಧ ಟ್ಯಾಂಕರ್ ಗಮನಸೆಳೆಯುತ್ತದೆ. ಈ ಟ್ಯಾಂಕರ್ ೧೯೭೧ರಲ್ಲಿ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಹಿಮ್ಮತ್ ಹೆಸರಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಇಲ್ಲಿನ ಮತ್ತೊಂದು ಆಕರ್ಷಣೆ ಎಂದರೆ ಮಿಗ್ ೨೧ ಯುದ್ಧ ವಿಮಾನ. ಈ ಯುದ್ಧ ವಿಮಾನವು ೧೯೭೧ರ ಭಾರತ-ಪಾಕಿಸ್ತಾನದ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಅದಲ್ಲದೆ ಭಾರತೀಯ ಯುದ್ಧ ನೌಕೆಯಾದ ಶಿವಾಲಿಕ್‌ನ ಮಾದರಿ ನೌಕೆ ಕೂಡ ಮ್ಯೂಸಿಯಂಗೆ ಸೇರ್ಪಡೆಗೊಂಡಿದೆ. ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೊಸದಾಗಿ ಸೇರ್ಪಡೆ ಆಗಿರುವ ‘ಐಎನ್‌ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆಯನ್ನು ಭಾರತೀಯ ನೌಕಾಪಡೆಯ ಪೂರ್ವ ವಿಭಾಗದ ವೈಸ್ ಅಡ್ಮಿರಲ್ ಭಿಸ್ವಜಿತ್ ದಾಸ್ ಗುಪ್ತ ಅವರು ಲೋಕಾರ್ಪಣೆ ಮಾಡಿದ್ದಾರೆ. ಜೊತೆಗೆ ರಿಯರ್ ಅಡ್ಮಿರಲ್ ಉತ್ತಯ್ಯ ಅವರಿಂದ ಉದ್ಘಾಟನೆಗೊಂಡ ನೌಕಾಪಡೆಯ ಜಲಾಂರ್ತಗಾಮಿ ಯುದ್ಧ ನೌಕೆಯ ಮಾದರಿ ಕೂಡ ಸೇರ್ಪಡೆಯಾಗಿದೆ.

ಮನದಣಿಯುವಷ್ಟು ಗೌರವದಿಂದ ಇವೆಲ್ಲವುಗಳನ್ನು ವೀಕ್ಷಿಸಿ ಮುಂದೆ ಹೆಜ್ಜೆ ಹಾಕಿ ತಿಮ್ಮಯ್ಯ ಅವರ ಮನೆ ಸನ್ನಿಸೈಡ್‌ನ ಒಳಹೊಕ್ಕರೆ, ತಿಮ್ಮಯ್ಯ ಅವರು ಬಳಸಿದ್ದ ಸಮವಸ್ತ್ರ, ಪಡೆದಿದ್ದ ವಿವಿಧ ಮೆಡಲ್‌ಗಳು, ತಿಮ್ಮಯ್ಯ ಅವರು ತಮ್ಮ ಕುಟುಂಬದೊಂದಿಗೆ ಕಳೆದ ಕ್ಷಣಗಳು, ಸೇನೆಯಲ್ಲಿದ್ದಾಗ ಮೊದಲ ರಾಷ್ಟ್ರಪತಿ ಬಾಬು ರಾಜೆಂದ್ರ ಪ್ರಸಾದ್ ಅವರೊಂದಿಗಿನ ಅಪರೂಪದ ಛಾಯಾಚಿತ್ರಗಳು, ಜೊತೆಗೆ ಸೇನೆಯಲ್ಲಿದ್ದಾಗ ತಿಮ್ಮಯ್ಯ ಅವರು ವಿವಿಧ ಸಂದರ್ಭಗಳಲ್ಲಿ ತೆಗೆಸಿಕೊಂಡಿದ್ದ ಭಾವಚಿತ್ರಗಳು ಸನ್ನಿಸೈಡ್ ಮನೆಯ ಗೋಡೆಗಳನ್ನು ಅಲಂಕರಿಸಿವೆ.

ಜೊತೆಗೆ ಭಾರತೀಯ ಸೇನೆಯ ಯೋಧರು ಬಳಸಿದ ೨೭ ಶಸ್ತ್ರಾಸ್ತ್ರಗಳು ಇಲ್ಲಿದ್ದು, ೫೦ ರಿಂದ ೬೦ ವರ್ಷಗಳ ಹಿಂದಿನ ಲೈಟ್ ಮಷಿನ್ ಗನ್, ಮೀಡಿಯಂ ಮಷಿನ್ ಗನ್, ಸೆಲ್ಛ್ ಲೋಡಿಂಗ್ ರೈಫಲ್‌ಗಳು, ರಾಕೆಟ್ ಲಾಂಚರ್, ೩೨ ಎಂ.ಎಂ. ರೈಫಲ್, ಪಾಯಿಂಟ್ ೩೮ ರೈಫಲ್‌ಗಳು ಆಕರ್ಷಿಸುತ್ತವೆ. ತಿಮ್ಮಯ್ಯ ಅವರ ಬಾಲ್ಯದ ಚಿತ್ರಗಳು, ಕಲಾಕೃತಿಗಳು ಗಮನ ಸೆಳೆಯುತ್ತವೆ. ತಿಮ್ಮಯ್ಯ ಅವರು ಸೇನಾಧಿಕಾರಿಯಾಗಿ ಮಾಡಿದ ಸಾಧನೆಯನ್ನು, ಎರಡು ಪ್ರತ್ಯೇಕ ಕೋಣೆಗಳಲ್ಲಿ ಪರಿಚಯಿಸಲಾಗಿದೆ. ೧೫ ನಿಮಿಷಗಳ ಅವಧಿಯ ಸಾಕ್ಷ್ಯಚಿತ್ರವು ತಿಮ್ಮಯ್ಯ ಅವರ ಬದುಕಿನ ಚಿತ್ರಣವನ್ನು ಕಟ್ಟಿಕೊಡಲಿದೆ.

ತಿಮ್ಮಯ್ಯ ಅವರು ಹುಟ್ಟಿ ಬೆಳೆದ ಮನೆ ಸನ್ನಿಸೈಡ್ ಹಳೆಯದಾಗಿದ್ದರೂ ಹಿಂದಿನ ಕಾಲದಲ್ಲಿ ಮನೆಯನ್ನು ಬೆಚ್ಚಗಿಡಲು ಉಪಯೋಗಿಸುತ್ತಿದ್ದ ಉರುವಲು ಒಲೆಗಳ ಸಹಿತ ಎಲ್ಲವನ್ನೂ ನವೀಕರಿಸಿಡಲಾಗಿದೆ. ಮನೆಯ ಬಳಿಯಲ್ಲಿ ಅತ್ಯಂತ ಪ್ರಶಾಂತ ವಾತಾವರಣ ಇದ್ದು, ನೋಡುಗರು ತನ್ಮಯರಾಗುತ್ತಾರೆ. ಕೊಡಗು ಜಿಲ್ಲೆಯ ಮುಖ್ಯ ಪ್ರವಾಸಿ ಕೇಂದ್ರಗಳಲ್ಲಿ ಒಂದಾಗಿರುವ ಸನ್ನಿಸೈಡ್ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿರುವಂತಹ ಹಾಗೂ ಮಾಹಿತಿಯನ್ನು ಹೊತ್ತು ನಿಂತಿರುವ ದೇಶದ ಹೆಮ್ಮೆಯ ಪ್ರತೀಕವಾಗಿದೆ.

” ಕೊಡಗಿನ ಪ್ರವಾಸವೆಂದರೆ ಕಣ್ಣು ಹಾಯಿಸಿದಲ್ಲೆಲ್ಲ ಕಾಣಸಿಗುವ ಹಸಿರು ಹೊದ್ದ ಕಾಫಿ ತೋಟಗಳು, ಕಾಡು-ಮೇಡು, ಬೆಟ್ಟ-ಗುಡ್ಡ-ಕಣಿವೆ, ಮಳೆಗಾಲದಲ್ಲಿ ಭೋರ್ಗರೆಯುವ ಜಲಪಾತಗಳು, ನದಿ, ತೊರೆಗಳ ಜುಳು ಜುಳು… ಹಕ್ಕಿ, ಪಕ್ಷಿಗಳ ನಿನಾದದ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಜತೆಗೆ ದೇಶವನ್ನು ಕಾಯುವ ಭಾರತೀಯ ಸೇನೆಗೆ ಜಿಲ್ಲೆಯ ಕೊಡುಗೆಯ ಜೊತೆಗೆ ಸ್ವಾತಂತ್ರ್ಯಾನಂತರ ಭಾರತೀಯ ಸೇನೆಯ ದಂಡ ನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಬಾಲ್ಯ, ಜೀವನ, ಸಾಧನೆಗಳ ಸಾಹಸಗಾಥೆಯನ್ನು ಪರಿಚಯಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಜನರಲ್  ತಿಮ್ಮಯ್ಯ ಮ್ಯೂಸಿಯಂನಲ್ಲಿ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದು.”

ಆಂದೋಲನ ಡೆಸ್ಕ್

Recent Posts

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

16 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

49 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago