ವಾರಾಂತ್ಯ ವಿಶೇಷ

ಬಂಜಾರರ ಬದುಕು- ಬವಣೆ; ಬಿಂಬಿಸಲಿರುವ ‘ಗೋ‌ರ್ ಮಾಟಿ’ ನಾಟಕ

 

ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾತರಿಸುತ್ತಿರುವ ಅಲಕ್ಷಿತ ಬಂಜಾರ ಸಮುದಾಯದ ಜೀವನ, ಸಂಸ್ಕೃತಿ, ಕಲೆಯನ್ನು ನಾಗರಿಕ ಲೋಕದ ಎದುರು ಬಿಚ್ಚಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಂಗಪ್ರಯೋಗವೊಂದು ಕನ್ನಡ ಭಾಷೆಯಲ್ಲಿ ಸಿದ್ಧವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ.

ತಮ್ಮನ್ನು ತಾವು ಗೋರ್ ಎಂದು ಕರೆದುಕೊಳ್ಳುವ, ಬೇರೆಯವರನ್ನು, ಕೋರ್ ಎಂದು ಕರೆಯುವ ಗೋ‌ ಬೋಲಿ ಭಾಷೆ ಮಾತನಾಡುವ ಬಂಜಾರ ಸಮುದಾಯದ ಮುಂದಿರುವ ಸವಾಲುಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಮೈಸೂರಿನ ರಂಗಾಯಣವು ‘ಗೋರ್ ಮಾಟಿ’ ಎಂಬ ನಾಟಕದ ಪ್ರಯೋಗಕ್ಕೆ ಸಜ್ಜಾಗಿದೆ. ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಅವರ ನಿರ್ದೇಶನ ಈ ನಾಟಕಕ್ಕಿದೆ.

ರಂಗಾಯಣದ ನಾಲ್ವರು ಹಿರಿಯ ಕಲಾವಿದರು, ಮೈಸೂರು ರಂಗಾಯಣ ಸೇರಿದಂತೆ ರಾಜ್ಯದ ವಿವಿಧೆಡೆಯ ರಂಗಾಯಣಗಳಲ್ಲಿ ತರಬೇತಿ ಪಡೆದ 20 ಮಂದಿ ಕಲಾವಿದರನ್ನು ಬಳಸಿಕೊಂಡು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಅವರು ಗೋ‌ ಮಾಟಿ ನಾಟಕವನ್ನು ನಿರ್ದೇಶನ ಮಾಡಿ ರಂಗರೂಪಕ್ಕೆ ಇಳಿಸಿದ್ದಾರೆ. ಬಂಜಾರ ಸಮುದಾಯದ ಮೂಲ ಪುರುಷ, ಆರಾಧ್ಯ ದೈವ ಸಂತ ಸೇವಾಲಾಲ್ ಸೇರಿದಂತೆ ಸಮುದಾಯದ ಪ್ರಮುಖ ನಾಯಕರ ಕೊಡುಗೆಯನ್ನು ಈ ನಾಟಕದ ಮೂಲಕ ಸಮಾಜದ ಮುಂದಿಡುವ ಪ್ರಯತ್ನ ಮಾಡಲಾಗಿದೆ.

ಕಲಾವಿದರು ಬಂಜಾರರಲ್ಲ..!

‘ಗೋ‌ ಮಾಟಿ’ ನಾಟಕದಲ್ಲಿ ಅಭಿನಯಿಸಿರುವ 24 ಮಂದಿ ಕಲಾವಿದರೂ ಬೇರೆ-ಬೇರೆ ಸಮುದಾಯಕ್ಕೆ ಸೇರಿದ್ದು, ಬಂಜಾರರು ಯಾರೂ ಇಲ್ಲ. ಕೆಲವು ಕಲಾವಿದರು ಗೋ‌ ಬೋಲಿ ಭಾಷೆಯನ್ನು ಕಲಿತಿದ್ದಾರೆ. ಬಂಜಾರರ ಸಂಸ್ಕೃತಿಯನ್ನು ವಿವಿಧ ಆಕರ ಗ್ರಂಥಗಳು ಮತ್ತು ಸಮುದಾಯದ ನಾಯಕರಿಂದ ತಿಳಿದುಕೊಳ್ಳಲಾಗಿದೆ. ಬಂಜಾರ ಮಹಿಳೆಯರೊಡನೆ ಮಾತುಕತೆ ನಡೆಸಿ ಅವರ ಉಡುಗೆ, ತೊಡುಗೆ, ಸಂಪ್ರದಾಯದ ಮಾಹಿತಿ ಕಲೆ ಹಾಕಿ ನಾಟಕವನ್ನು ರೂಪಿಸಿರುವುದು ವಿಶೇಷ.

ಬಂಜಾರರು ಯಾರು?

ಮೂಲತಃ ರಾಜಸ್ಥಾನ ಮತ್ತು ಗುಜರಾತ್ ಮೂಲದ ಬಂಜಾರರು ಗೋ‌ ಬೋಲಿ ಭಾಷೆ ಮಾತನಾಡುತ್ತಾರೆ. ಈ ಭಾಷೆಯಲ್ಲಿ ಹಿಂದಿ, ಉರ್ದು, ರಾಜಸ್ಥಾನಿ ಮತ್ತು ಸಂಸ್ಕೃತ ಭಾಷೆಗಳ ಸಮ್ಮಿಶ್ರಣವಿದೆ. ಈ ಸಮುದಾಯವು ತನ್ನದೇ ಆದ ವೇಷಭೂಷಣಗಳಿಂದ ಭಾರತೀಯ ಕಲಾ ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಇವರನ್ನು ಜಿಪ್ಪಿಗಳೆಂದು ಕರೆಯುತ್ತಿದ್ದರು. ಇವರ ಮೂಲ ಪುರುಷ ಸಂತ ಸೇವಾಲಾಲ್, ಇವರ ಕುಲಕಸುಬು ವ್ಯಾಪಾರ ಹಾಗೂ ಪಶುಸಂಗೋಪನೆ. ಇವರು ಶ್ರಮ ಜೀವಿಗಳು, ಸ್ವಾಭಿಮಾನಿ ಗಳು, ಅಷ್ಟೇ ಪ್ರಾಮಾಣಿಕರು. ಮೊದಲು ಅಲೆಮಾರಿಗಳಾಗಿದ್ದು, ಇತ್ತೀಚೆಗೆ ನಾಗರಿಕತೆ ಬೆಳೆದಂತೆ ಗ್ರಾಮಗಳಲ್ಲಿ, ಊರುಗಳಲ್ಲಿ ವಾಸವಾಗಿದ್ದಾರೆ. ಇವರು ತಮ್ಮ ಊರುಗಳನ್ನು ತಾಂಡ್ಯಗಳೆನ್ನುತ್ತಾರೆ.

ಜನವರಿಯಿಂದ ಆರಂಭವಾದ ಈ ನಾಟಕದ ಪ್ರಯತ್ನವು ಈಗ ರಂಗರೂಪಕ್ಕೆ ಬರುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಸಭೆಯೊಂದರಲ್ಲಿ ಲಂಬಾಣಿ ಜನಾಂಗದ ಕುರಿತು ನಾಟಕ ಮಾಡುವಂತೆ ಸೂಚಿಸಿದ್ದರು. ಅದರಂತೆ ಈ ನಾಟಕ ರಂಗರೂಪಕ್ಕೆ ಬರುತ್ತಿದೆ. ಈ ರಂಗಪ್ರಯೋಗಕ್ಕೆ ಇತಿಹಾಸ, ಪುರಾಣ, ಐತಿಹ್ಯ, ಜೊತೆಗೆ ವಾಸ್ತವ ಬದುಕಿನ ಕಥನ, ಕಾವ್ಯಗಳನ್ನು ಸಂಶೋಧನಾ ಆಕರಗಳನ್ನು ಚರಿತ್ರೆಯಲ್ಲಿನ ಪಾತ್ರಗಳ ಒಟ್ಟಿಗೆ ಸಮಕಾಲೀನ ಬದುಕಿನ ಸಮಾಜದ ಪಾತ್ರಗಳ ಮೂಲಕ ಅಭಿನೀತಗೊಂಡಿವೆ.
-ಸಿ.ಬಸವಲಿಂಗಯ್ಯ, ನಾಟಕದ ನಿರ್ದೆಶಕ,

‘ಗೋ‌ ಮಾಟಿ ನಾಟಕ ಹೊಸ ಪ್ರಯೋಗವಾಗಿದ್ದು, ಇದರಲ್ಲಿ ಹೊಸತನ ಇದೆ. ಕಲಾವಿದ ರಿಗೂ ಮತ್ತು ಪ್ರೇಕ್ಷಕರಿಗೂ ಇದು ಹೊಸದು. ಈ ಕೆಲಸ ಮಾಡುವುದು ಹೊಸ ಅನುಭವವನ್ನು ನೀಡಿದೆ.
-ಗೀತಾ ಮೋಂಟಡ್ಕ, ಹಿರಿಯ ಕಲಾವಿದರು.

ಇಂದು, ನಾಳೆ ನಾಟಕ ಪ್ರದರ್ಶನ

ಮಾ.16 ಮತ್ತು 17ರಂದು ಸಂಜೆ 6.30 ಕ್ಕೆ ರಂಗಾಯಣದ ಅಂಗಳದಲ್ಲಿರುವ ಭೂಮಿಗೀತದಲ್ಲಿ ಗೋರ್ ಮಾಟಿ ನಾಟಕವನ್ನು ಪ್ರದರ್ಶನಕ್ಕೆ ಅಣಿಗೊಳಿಸಲಾಗಿದೆ. ಉಳಿದಂತೆ ವಾರಾಂತ್ಯ ರಂಗಪ್ರದರ್ಶನವಾಗಿ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಅಂದರೆ . 22, 23, 24 TO 29, 30 DICI 31ರಂದು ನಾಟಕ ಪ್ರದರ್ಶನವಾಗಲಿದೆ.

ನಾಟಕ ಕನ್ನಡ, ಹಾಡುಗಳು ಗೋರ್ ಬೋಲಿ..!
2 ಗಂಟೆ 10 ನಿಮಿಷಗಳ ಅವಧಿಯ ಈ ನಾಟಕವು ಕನ್ನಡ ಭಾಷೆಯಲ್ಲಿ ಮೂಡಿಬಂದಿದೆ. ಇದರಲ್ಲಿ ಬಂಜಾರ ಜನಾಂಗದ ತೀಜ್ ಹಬ್ಬದ ಸುಖ ದುಃಖದ ಹಾಡುಗಳ ಜತೆಗೆ ಸಮುದಾಯದ ಗೀತೆಗಳು ಗೋರ್‌ ಬೋಲಿ ಭಾಷೆಯಲ್ಲಿವೆ. ಕೆಲವು ಹಾಡುಗಳು ಕನ್ನಡದಲ್ಲಿ ಮೂಡಿಬಂದಿವೆ. ನಾಟಕ ವೀಕ್ಷಣೆಗೆ 50 ರೂ. ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ.

ಗೋರ್ ಮಾಟಿ ಎಂದರೇನು?

ಗೋರ್ ಮಾಟಿ ಎಂದರೆ ಬಂಜಾರ ಭಾಷೆಯಲ್ಲಿ ‘ನನ್ನ ಜನ’ ಎಂದು ಅರ್ಥ. ಬಂಜಾರರು ಮೂಲತಃ ಉತ್ತರ ಹಿಂದೂ ಆರ್ಯ ಸಂಸ್ಕೃತಿಯವರಾಗಿದ್ದು, ತಮ್ಮನ್ನು ತಾವು ‘ಗೋ‌ ಮಾಟ’ ಅಥವಾ ‘ಗೋರ್ ಭಾಯ್’ ಎಂದು ಕರೆದುಕೊಳ್ಳುತ್ತಾರೆ. ಹೊರಗಿನವರನ್ನು ಅವರು ಕೋರ್ ಎಂದು ಕರೆಯುತ್ತಾರೆ.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

3 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

3 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

3 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

3 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

3 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

3 hours ago