ವಾರಾಂತ್ಯ ವಿಶೇಷ

ಬಂಜಾರರ ಬದುಕು- ಬವಣೆ; ಬಿಂಬಿಸಲಿರುವ ‘ಗೋ‌ರ್ ಮಾಟಿ’ ನಾಟಕ

 

ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾತರಿಸುತ್ತಿರುವ ಅಲಕ್ಷಿತ ಬಂಜಾರ ಸಮುದಾಯದ ಜೀವನ, ಸಂಸ್ಕೃತಿ, ಕಲೆಯನ್ನು ನಾಗರಿಕ ಲೋಕದ ಎದುರು ಬಿಚ್ಚಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಂಗಪ್ರಯೋಗವೊಂದು ಕನ್ನಡ ಭಾಷೆಯಲ್ಲಿ ಸಿದ್ಧವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ.

ತಮ್ಮನ್ನು ತಾವು ಗೋರ್ ಎಂದು ಕರೆದುಕೊಳ್ಳುವ, ಬೇರೆಯವರನ್ನು, ಕೋರ್ ಎಂದು ಕರೆಯುವ ಗೋ‌ ಬೋಲಿ ಭಾಷೆ ಮಾತನಾಡುವ ಬಂಜಾರ ಸಮುದಾಯದ ಮುಂದಿರುವ ಸವಾಲುಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಮೈಸೂರಿನ ರಂಗಾಯಣವು ‘ಗೋರ್ ಮಾಟಿ’ ಎಂಬ ನಾಟಕದ ಪ್ರಯೋಗಕ್ಕೆ ಸಜ್ಜಾಗಿದೆ. ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಅವರ ನಿರ್ದೇಶನ ಈ ನಾಟಕಕ್ಕಿದೆ.

ರಂಗಾಯಣದ ನಾಲ್ವರು ಹಿರಿಯ ಕಲಾವಿದರು, ಮೈಸೂರು ರಂಗಾಯಣ ಸೇರಿದಂತೆ ರಾಜ್ಯದ ವಿವಿಧೆಡೆಯ ರಂಗಾಯಣಗಳಲ್ಲಿ ತರಬೇತಿ ಪಡೆದ 20 ಮಂದಿ ಕಲಾವಿದರನ್ನು ಬಳಸಿಕೊಂಡು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಅವರು ಗೋ‌ ಮಾಟಿ ನಾಟಕವನ್ನು ನಿರ್ದೇಶನ ಮಾಡಿ ರಂಗರೂಪಕ್ಕೆ ಇಳಿಸಿದ್ದಾರೆ. ಬಂಜಾರ ಸಮುದಾಯದ ಮೂಲ ಪುರುಷ, ಆರಾಧ್ಯ ದೈವ ಸಂತ ಸೇವಾಲಾಲ್ ಸೇರಿದಂತೆ ಸಮುದಾಯದ ಪ್ರಮುಖ ನಾಯಕರ ಕೊಡುಗೆಯನ್ನು ಈ ನಾಟಕದ ಮೂಲಕ ಸಮಾಜದ ಮುಂದಿಡುವ ಪ್ರಯತ್ನ ಮಾಡಲಾಗಿದೆ.

ಕಲಾವಿದರು ಬಂಜಾರರಲ್ಲ..!

‘ಗೋ‌ ಮಾಟಿ’ ನಾಟಕದಲ್ಲಿ ಅಭಿನಯಿಸಿರುವ 24 ಮಂದಿ ಕಲಾವಿದರೂ ಬೇರೆ-ಬೇರೆ ಸಮುದಾಯಕ್ಕೆ ಸೇರಿದ್ದು, ಬಂಜಾರರು ಯಾರೂ ಇಲ್ಲ. ಕೆಲವು ಕಲಾವಿದರು ಗೋ‌ ಬೋಲಿ ಭಾಷೆಯನ್ನು ಕಲಿತಿದ್ದಾರೆ. ಬಂಜಾರರ ಸಂಸ್ಕೃತಿಯನ್ನು ವಿವಿಧ ಆಕರ ಗ್ರಂಥಗಳು ಮತ್ತು ಸಮುದಾಯದ ನಾಯಕರಿಂದ ತಿಳಿದುಕೊಳ್ಳಲಾಗಿದೆ. ಬಂಜಾರ ಮಹಿಳೆಯರೊಡನೆ ಮಾತುಕತೆ ನಡೆಸಿ ಅವರ ಉಡುಗೆ, ತೊಡುಗೆ, ಸಂಪ್ರದಾಯದ ಮಾಹಿತಿ ಕಲೆ ಹಾಕಿ ನಾಟಕವನ್ನು ರೂಪಿಸಿರುವುದು ವಿಶೇಷ.

ಬಂಜಾರರು ಯಾರು?

ಮೂಲತಃ ರಾಜಸ್ಥಾನ ಮತ್ತು ಗುಜರಾತ್ ಮೂಲದ ಬಂಜಾರರು ಗೋ‌ ಬೋಲಿ ಭಾಷೆ ಮಾತನಾಡುತ್ತಾರೆ. ಈ ಭಾಷೆಯಲ್ಲಿ ಹಿಂದಿ, ಉರ್ದು, ರಾಜಸ್ಥಾನಿ ಮತ್ತು ಸಂಸ್ಕೃತ ಭಾಷೆಗಳ ಸಮ್ಮಿಶ್ರಣವಿದೆ. ಈ ಸಮುದಾಯವು ತನ್ನದೇ ಆದ ವೇಷಭೂಷಣಗಳಿಂದ ಭಾರತೀಯ ಕಲಾ ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಇವರನ್ನು ಜಿಪ್ಪಿಗಳೆಂದು ಕರೆಯುತ್ತಿದ್ದರು. ಇವರ ಮೂಲ ಪುರುಷ ಸಂತ ಸೇವಾಲಾಲ್, ಇವರ ಕುಲಕಸುಬು ವ್ಯಾಪಾರ ಹಾಗೂ ಪಶುಸಂಗೋಪನೆ. ಇವರು ಶ್ರಮ ಜೀವಿಗಳು, ಸ್ವಾಭಿಮಾನಿ ಗಳು, ಅಷ್ಟೇ ಪ್ರಾಮಾಣಿಕರು. ಮೊದಲು ಅಲೆಮಾರಿಗಳಾಗಿದ್ದು, ಇತ್ತೀಚೆಗೆ ನಾಗರಿಕತೆ ಬೆಳೆದಂತೆ ಗ್ರಾಮಗಳಲ್ಲಿ, ಊರುಗಳಲ್ಲಿ ವಾಸವಾಗಿದ್ದಾರೆ. ಇವರು ತಮ್ಮ ಊರುಗಳನ್ನು ತಾಂಡ್ಯಗಳೆನ್ನುತ್ತಾರೆ.

ಜನವರಿಯಿಂದ ಆರಂಭವಾದ ಈ ನಾಟಕದ ಪ್ರಯತ್ನವು ಈಗ ರಂಗರೂಪಕ್ಕೆ ಬರುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಸಭೆಯೊಂದರಲ್ಲಿ ಲಂಬಾಣಿ ಜನಾಂಗದ ಕುರಿತು ನಾಟಕ ಮಾಡುವಂತೆ ಸೂಚಿಸಿದ್ದರು. ಅದರಂತೆ ಈ ನಾಟಕ ರಂಗರೂಪಕ್ಕೆ ಬರುತ್ತಿದೆ. ಈ ರಂಗಪ್ರಯೋಗಕ್ಕೆ ಇತಿಹಾಸ, ಪುರಾಣ, ಐತಿಹ್ಯ, ಜೊತೆಗೆ ವಾಸ್ತವ ಬದುಕಿನ ಕಥನ, ಕಾವ್ಯಗಳನ್ನು ಸಂಶೋಧನಾ ಆಕರಗಳನ್ನು ಚರಿತ್ರೆಯಲ್ಲಿನ ಪಾತ್ರಗಳ ಒಟ್ಟಿಗೆ ಸಮಕಾಲೀನ ಬದುಕಿನ ಸಮಾಜದ ಪಾತ್ರಗಳ ಮೂಲಕ ಅಭಿನೀತಗೊಂಡಿವೆ.
-ಸಿ.ಬಸವಲಿಂಗಯ್ಯ, ನಾಟಕದ ನಿರ್ದೆಶಕ,

‘ಗೋ‌ ಮಾಟಿ ನಾಟಕ ಹೊಸ ಪ್ರಯೋಗವಾಗಿದ್ದು, ಇದರಲ್ಲಿ ಹೊಸತನ ಇದೆ. ಕಲಾವಿದ ರಿಗೂ ಮತ್ತು ಪ್ರೇಕ್ಷಕರಿಗೂ ಇದು ಹೊಸದು. ಈ ಕೆಲಸ ಮಾಡುವುದು ಹೊಸ ಅನುಭವವನ್ನು ನೀಡಿದೆ.
-ಗೀತಾ ಮೋಂಟಡ್ಕ, ಹಿರಿಯ ಕಲಾವಿದರು.

ಇಂದು, ನಾಳೆ ನಾಟಕ ಪ್ರದರ್ಶನ

ಮಾ.16 ಮತ್ತು 17ರಂದು ಸಂಜೆ 6.30 ಕ್ಕೆ ರಂಗಾಯಣದ ಅಂಗಳದಲ್ಲಿರುವ ಭೂಮಿಗೀತದಲ್ಲಿ ಗೋರ್ ಮಾಟಿ ನಾಟಕವನ್ನು ಪ್ರದರ್ಶನಕ್ಕೆ ಅಣಿಗೊಳಿಸಲಾಗಿದೆ. ಉಳಿದಂತೆ ವಾರಾಂತ್ಯ ರಂಗಪ್ರದರ್ಶನವಾಗಿ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಅಂದರೆ . 22, 23, 24 TO 29, 30 DICI 31ರಂದು ನಾಟಕ ಪ್ರದರ್ಶನವಾಗಲಿದೆ.

ನಾಟಕ ಕನ್ನಡ, ಹಾಡುಗಳು ಗೋರ್ ಬೋಲಿ..!
2 ಗಂಟೆ 10 ನಿಮಿಷಗಳ ಅವಧಿಯ ಈ ನಾಟಕವು ಕನ್ನಡ ಭಾಷೆಯಲ್ಲಿ ಮೂಡಿಬಂದಿದೆ. ಇದರಲ್ಲಿ ಬಂಜಾರ ಜನಾಂಗದ ತೀಜ್ ಹಬ್ಬದ ಸುಖ ದುಃಖದ ಹಾಡುಗಳ ಜತೆಗೆ ಸಮುದಾಯದ ಗೀತೆಗಳು ಗೋರ್‌ ಬೋಲಿ ಭಾಷೆಯಲ್ಲಿವೆ. ಕೆಲವು ಹಾಡುಗಳು ಕನ್ನಡದಲ್ಲಿ ಮೂಡಿಬಂದಿವೆ. ನಾಟಕ ವೀಕ್ಷಣೆಗೆ 50 ರೂ. ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ.

ಗೋರ್ ಮಾಟಿ ಎಂದರೇನು?

ಗೋರ್ ಮಾಟಿ ಎಂದರೆ ಬಂಜಾರ ಭಾಷೆಯಲ್ಲಿ ‘ನನ್ನ ಜನ’ ಎಂದು ಅರ್ಥ. ಬಂಜಾರರು ಮೂಲತಃ ಉತ್ತರ ಹಿಂದೂ ಆರ್ಯ ಸಂಸ್ಕೃತಿಯವರಾಗಿದ್ದು, ತಮ್ಮನ್ನು ತಾವು ‘ಗೋ‌ ಮಾಟ’ ಅಥವಾ ‘ಗೋರ್ ಭಾಯ್’ ಎಂದು ಕರೆದುಕೊಳ್ಳುತ್ತಾರೆ. ಹೊರಗಿನವರನ್ನು ಅವರು ಕೋರ್ ಎಂದು ಕರೆಯುತ್ತಾರೆ.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

13 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

13 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

14 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

15 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

16 hours ago