ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು.
ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು ಪಡೆದುಕೊಂಡವಳು. ತನ್ನ ತಂದೆ, ತಾಯಿ, ತಂಗಿಗಾಗಿ ಮಿಡಿಯುವ ಹೃದಯದವಳು, ಸಂಸ್ಕೃತಿಹೀನ ಸಿರಿವಂತರ ಮನೆಗಳಲ್ಲಿ ಕೆಲಸ ಮಾಡುತ್ತಲೇ, ಪಾತ್ರೆಗಳನ್ನು ತೊಳೆಯುತ್ತಲೇ ಮಗಳನ್ನು ಸುಸಂಸ್ಕೃತಳನ್ನಾಗಿ ಮಾಡಿದವಳು.
ಮನೆ ಮಂದಿಗಾಗಿ ದುಡಿಯುವ ತನ್ನ ತಂದೆ, ಯಾರದೋ ಆಮಿಷಕ್ಕೆ ಬಲಿಯಾಗಿ ಮುಂಬೈನ ಕಾಮಾಟಿಪುರದಲ್ಲಿ ನೇಣಿಗೆ ಶರಣಾಗುವ ತಂಗಿ, ಏಡ್ಸ್ ಮಹಾಮಾರಿಗೆ ಬಲಿಯಾಗುವ ಗಂಡ, ಈ ಎಲ್ಲ ಘಟನೆಗಳಿಗೆ ಎದುರುಗೊಳ್ಳುತ್ತ ಬದುಕು ಕಟ್ಟಿಕೊಳ್ಳಲು ಹೆಣಗುವವಳು. ಕೊನೆಯಲ್ಲಿ ಆಕೆಯ ಮಗಳೇ ಅವಳನ್ನು ಓದುವಂತೆ ಪ್ರೇರೇಪಿಸುತ್ತಾಳೆ. ಆ ಮೂಲಕ ಅಕ್ಷರಜ್ಞಾನದ ಕಡೆಗೆ ಮುಖ ಮಾಡುತ್ತಾಳೆ ಸಕುಬಾಯಿ.
• ಹಿಂದಿ ಮೂಲ: ನಾದಿರಾ ಒಬ್ಬರ್
• ಕನ್ನಡ ಅನುವಾದ ಡಿ.ಎಸ್.ಚೌಗಲೆ
• ನಿರ್ದೇಶನ- ಹುಲುಗಪ್ಪ ಕಟ್ಟಿಮನಿ
• ಮುದ್ರಿತ ಸಂಗೀತ ವಿನ್ಯಾಸ-
ಸಾಲಿಯಾನ ಉಮೇಶ್ ನಾರಾಯಣ
• ಪ್ರಸ್ತುತಿ- ನುಡಿರಂಗ ಬೆಂಗಳೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…