ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು.
ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು ಪಡೆದುಕೊಂಡವಳು. ತನ್ನ ತಂದೆ, ತಾಯಿ, ತಂಗಿಗಾಗಿ ಮಿಡಿಯುವ ಹೃದಯದವಳು, ಸಂಸ್ಕೃತಿಹೀನ ಸಿರಿವಂತರ ಮನೆಗಳಲ್ಲಿ ಕೆಲಸ ಮಾಡುತ್ತಲೇ, ಪಾತ್ರೆಗಳನ್ನು ತೊಳೆಯುತ್ತಲೇ ಮಗಳನ್ನು ಸುಸಂಸ್ಕೃತಳನ್ನಾಗಿ ಮಾಡಿದವಳು.
ಮನೆ ಮಂದಿಗಾಗಿ ದುಡಿಯುವ ತನ್ನ ತಂದೆ, ಯಾರದೋ ಆಮಿಷಕ್ಕೆ ಬಲಿಯಾಗಿ ಮುಂಬೈನ ಕಾಮಾಟಿಪುರದಲ್ಲಿ ನೇಣಿಗೆ ಶರಣಾಗುವ ತಂಗಿ, ಏಡ್ಸ್ ಮಹಾಮಾರಿಗೆ ಬಲಿಯಾಗುವ ಗಂಡ, ಈ ಎಲ್ಲ ಘಟನೆಗಳಿಗೆ ಎದುರುಗೊಳ್ಳುತ್ತ ಬದುಕು ಕಟ್ಟಿಕೊಳ್ಳಲು ಹೆಣಗುವವಳು. ಕೊನೆಯಲ್ಲಿ ಆಕೆಯ ಮಗಳೇ ಅವಳನ್ನು ಓದುವಂತೆ ಪ್ರೇರೇಪಿಸುತ್ತಾಳೆ. ಆ ಮೂಲಕ ಅಕ್ಷರಜ್ಞಾನದ ಕಡೆಗೆ ಮುಖ ಮಾಡುತ್ತಾಳೆ ಸಕುಬಾಯಿ.
• ಹಿಂದಿ ಮೂಲ: ನಾದಿರಾ ಒಬ್ಬರ್
• ಕನ್ನಡ ಅನುವಾದ ಡಿ.ಎಸ್.ಚೌಗಲೆ
• ನಿರ್ದೇಶನ- ಹುಲುಗಪ್ಪ ಕಟ್ಟಿಮನಿ
• ಮುದ್ರಿತ ಸಂಗೀತ ವಿನ್ಯಾಸ-
ಸಾಲಿಯಾನ ಉಮೇಶ್ ನಾರಾಯಣ
• ಪ್ರಸ್ತುತಿ- ನುಡಿರಂಗ ಬೆಂಗಳೂರು
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…