ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು.
ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು ಪಡೆದುಕೊಂಡವಳು. ತನ್ನ ತಂದೆ, ತಾಯಿ, ತಂಗಿಗಾಗಿ ಮಿಡಿಯುವ ಹೃದಯದವಳು, ಸಂಸ್ಕೃತಿಹೀನ ಸಿರಿವಂತರ ಮನೆಗಳಲ್ಲಿ ಕೆಲಸ ಮಾಡುತ್ತಲೇ, ಪಾತ್ರೆಗಳನ್ನು ತೊಳೆಯುತ್ತಲೇ ಮಗಳನ್ನು ಸುಸಂಸ್ಕೃತಳನ್ನಾಗಿ ಮಾಡಿದವಳು.
ಮನೆ ಮಂದಿಗಾಗಿ ದುಡಿಯುವ ತನ್ನ ತಂದೆ, ಯಾರದೋ ಆಮಿಷಕ್ಕೆ ಬಲಿಯಾಗಿ ಮುಂಬೈನ ಕಾಮಾಟಿಪುರದಲ್ಲಿ ನೇಣಿಗೆ ಶರಣಾಗುವ ತಂಗಿ, ಏಡ್ಸ್ ಮಹಾಮಾರಿಗೆ ಬಲಿಯಾಗುವ ಗಂಡ, ಈ ಎಲ್ಲ ಘಟನೆಗಳಿಗೆ ಎದುರುಗೊಳ್ಳುತ್ತ ಬದುಕು ಕಟ್ಟಿಕೊಳ್ಳಲು ಹೆಣಗುವವಳು. ಕೊನೆಯಲ್ಲಿ ಆಕೆಯ ಮಗಳೇ ಅವಳನ್ನು ಓದುವಂತೆ ಪ್ರೇರೇಪಿಸುತ್ತಾಳೆ. ಆ ಮೂಲಕ ಅಕ್ಷರಜ್ಞಾನದ ಕಡೆಗೆ ಮುಖ ಮಾಡುತ್ತಾಳೆ ಸಕುಬಾಯಿ.
• ಹಿಂದಿ ಮೂಲ: ನಾದಿರಾ ಒಬ್ಬರ್
• ಕನ್ನಡ ಅನುವಾದ ಡಿ.ಎಸ್.ಚೌಗಲೆ
• ನಿರ್ದೇಶನ- ಹುಲುಗಪ್ಪ ಕಟ್ಟಿಮನಿ
• ಮುದ್ರಿತ ಸಂಗೀತ ವಿನ್ಯಾಸ-
ಸಾಲಿಯಾನ ಉಮೇಶ್ ನಾರಾಯಣ
• ಪ್ರಸ್ತುತಿ- ನುಡಿರಂಗ ಬೆಂಗಳೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…