ವಾರಾಂತ್ಯ ವಿಶೇಷ

ನಾಳೆ ಭೂಮಿಗೀತದಲ್ಲಿ ‘ಉರಿಯ ಉಯ್ಯಾಲೆ’

ರಚನೆ ಡಾ.ಎಚ್‌.ಎಸ್.ವೆಂಕಟೇಶ್ ಮೂರ್ತಿ, ನಿದೇರ್ಶನ ಬಿ.ಎನ್.ಶಶಿಕಲಾ

ಸಾಲೊಮನ್
ರಂಗಭೂಮಿಗೆ ಹೊಸಬರನ್ನು ಪರಿಚಯಿಸುವ ಉದ್ದೇಶದಿಂದ ಆರಂಭಿಸಿದ ಶಶಿ ಥಿಯೇಟರ್ ಸಂಸ್ಥೆ ‘ಉರಿಯ ಉಯ್ಯಾಲೆ’ ಎಂಬ ನಾಟಕವನ್ನು ರಂಗಾಯಣದ ಭೂಮಿಗೀತದಲ್ಲಿ ಅ.27ರಂದು ಸಂಜೆ 6.30ಕ್ಕೆ ಪ್ರಸ್ತುತಪಡಿಸುತ್ತಿದೆ.

ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ರಚನೆಯ ಉರಿಯ ಉಯ್ಯಾಲೆ’ ನಾಟಕದ ವಿನ್ಯಾಸ ಹಾಗೂ ನಿರ್ದೇಶನವನ್ನು ಬಿ.ಎನ್. ಶಶಿಕಲಾ ಮಾಡಿದ್ದಾರೆ. ನಾಟಕದಲ್ಲಿ ಕಲಾವಿದರಾದ ಬಿ.ಎಲ್.ಸರಳ, ಜಯಶ್ರೀ ರವಿಕುಮಾರ್, ಆರ್.ಎಂ. ಶ್ರುತಿ, ಸುಮಾ ಪ್ರಶಾಂತ್, ಎಚ್.ಎಚ್.ಸುನೀತ, ಎಚ್.ಎಂ.ದೀಪ್ತಿ ಶೆಟ್ಟಿ, ಕವಿತ ಎ.ಎಂ.ಅಳಗಂಚಿ ಹಾಗೂ ಮೀನಾಕ್ಷಿ ವಗದಾಳೆ ಬೀದರ್‌ ಅಭಿನಯಿಸಿದ್ದಾರೆ. ನಾಟಕಕ್ಕೆ ಸುಬ್ರಹ್ಮಣ್ಯ ಮೈಸೂರು ಅವರು ಹಿನ್ನೆಲೆ ಸಂಗೀತ ನೀಡಿದ್ದು, ಬೆಳಕಿನ ವಿನ್ಯಾಸವನ್ನು ಜೀವನ್ ಹೆಗ್ಗೋಡು ಹಾಗೂ ಪರಿಕರ ಮತ್ತು ರಂಗ ಸಜ್ಜಿಕೆಯ ಕಾರ್ಯವನ್ನು ಎಸ್.ಶ್ರೀಕಾಂತ್ ನಿರ್ವಹಿಸುತ್ತಿದ್ದಾರೆ. ಮಹಾಭಾರತ ಯುದ್ಧಾನಂತರದ ಸಂದರ್ಭದಲ್ಲಿನ ದೌಪದಿಯು ತನ್ನ ವರ್ಣರಂಜಿತ ಪುಟಗಳನ್ನು ತೆರೆದು ನೋಡಿದಾಗ ಅವಳ ಬದುಕು ಜೀವನ ಜೋಕಾಲಿಯಾಗದೆ ‘ಉರಿವ ಉಯ್ಯಾಲೆ’ ಯಾಗಿರುವುದನ್ನು ನಾಟಕ ಶ್ರುತಪಡಿಸುತ್ತದೆ.

ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಡಿಪ್ಲೊಮೊ ಪಡೆದು ರಂಗಭೂಮಿಯಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಶಶಿಕಲಾ ಅವರು ಮೂಲತಃ ಮೈಸೂರಿನವರು. ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಅನೇಕ ಬೀದಿ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದಾರೆ. ಮಕ್ಕಳಿಗಾಗಿಯೂ ಹಲವು ನಾಟಕಗಳನ್ನು ರಚಿಸಿ, ನಿರ್ದೇಶಿಸಿರುವ ಇವರು ರಂಗಾಯಣದ ಕಲಾವಿದರಾಗಿ ಅನೇಕ ನಾಟಕಗಳ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಾ ಕಳೆದ 35 ವರ್ಷಗಳಿಂದಲೂ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಚಿತ್ರ ಸಾಹಿತಿ ಜಯಂತ್ ಕಾಯ್ಕಿಣಿಯವರ ‘ಗಾಳಿ ಮರದ ನೆರಳು’ ಸಣ್ಣಕತೆಯನ್ನು ಕಿರುಚಿತ್ರವಾಗಿ ಶಶಿ ಥಿಯೇಟರ್ಸ್ ನಿರ್ಮಿಸಿತ್ತು. ನಂತರ ಶಶಿಕಲಾ ಅವರು ಅಭಿನಯ ಕಾರ್ಯಾಗಾರ, ನೇಪಥ್ಯ ಕಾರ್ಯಾಗಾರ, ಚಲನಚಿತ್ರ ರಸಗ್ರಹಣ ಶಿಬಿರ ಹಾಗೂ ರಂಗ ಸಂಗೀತ ಕುರಿತು ಶಿಬಿರಗಳನ್ನು ನಡೆಸಿದ್ದಾರೆ. ಮೈಸೂರು ರಂಗಾಯಣದ ಭಾರತೀಯ ರಂಗ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳ ಪ್ರಯೋಗಾರ್ಥ ಪ್ರದರ್ಶನಕ್ಕಾಗಿ ಪ್ರೇಮಾ ಕಾರಂತರ ‘ಕುರುಡು ಕಾಂಚಾಣ’ ನಾಟಕವನ್ನು ನಿರ್ದೇಶಿಸಿದ್ದಾರೆ. ಆಕಾಶವಾಣಿಗಾಗಿ ಕೆಲವು ನಾಟಕಗಳನ್ನು ರಚಿಸಿರುವ ಇವರು ‘ಗೋಲಾ ರಾಕ್ಷಸ’, ‘ಕೊತ್ತಿಲ್ ಕೊತ್ತಲ್ ಢಣ್ ಢಣ್’, ‘ಜನ್ ನಮೂನಿ ನಾಟ್ಕ’ ಮುಂತಾದವುಗಳನ್ನು ನಾಲ್ಕ ನಿರ್ದೇಶಿಸಿದ್ದಾರೆ.

ಪಿ.ಶೇಷಾದ್ರಿ, ಕೆ.ಶಿವರುದ್ರಯ್ಯ, ನಾಗೇಂದ್ರ ಶಾ ಇವರುಗಳ ನಿರ್ದೇಶನದ ಹಲವಾರು ಸಾಕ್ಷ್ಯಚಿತ್ರಗಳಲ್ಲಿಯೂ ಶಶಿಕಲಾ ನಟಿಸಿದ್ದಾರೆ. ಕೆ.ಶಿವರುದ್ರಯ್ಯ ನಿರ್ದೇಶಿಸಿದ ದೇವನೂರ ಮಹಾದೇವ ಅವರ ಕಥೆ ಆಧಾರಿತ ‘ಮಾರಿಕೊಂಡವರು’ ಚಲನಚಿತ್ರದಲ್ಲಿ ಅಭಿನಯಿಸಿದ್ದಾರೆ.

ರಂಗ ದಿಗ್ಗಜರಾದ ಬಿ.ವಿ.ಕಾರಂತ, ಪ್ರಸನ್ನ, ಸಿ.ಬಸವಲಿಂಗಯ್ಯ, ಸುರೇಶ್ ಆನಗಳ್ಳಿ, ಬಿ. ಜಯಶ್ರೀ, ಚಿದಂಬರರಾವ್ ಜಂಬೆ, ರಘು ನಂದನ್, ಆರ್.ನಾಗೇಶ್, ಪ್ರಕಾಶ್ ಬೆಳವಾಡಿ ಮುಂತಾದವರ ನಿರ್ದೇಶನದ, ರಂಗಪ್ರಯೋಗಗಳಲ್ಲಿ ಅಭಿನಯಿಸಿರುವ ಇವರು ತಮ್ಮದೇ ಆದ ಶಶಿ ಥಿಯೇಟರ್ ಆರಂಭಿಸಿ ಹೊಸ ಪ್ರತಿಭೆಗಳನ್ನು ರಂಗಭೂಮಿಗೆ ಪರಿಚಯಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಶಶಿಕಲಾ ಅವರು 2019ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

8 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

9 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

9 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

10 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

10 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

10 hours ago