ಕು.ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ

ನಾದ ವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ ವತಿಯಿಂದ ವಿದುಷಿ ಮಿತ್ರಾನ ನವೀನ್ ಅವರ ಶಿಷ್ಯೆ ಕು.ಯಶಸ್ವಿನಿ ಬಿ.ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಭಾನುವಾರ ಸಂಜೆ 5.30 ಕ್ಕೆ ಮೈಸೂರಿನ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ನಾಟ್ಯಾಚಾರ್ಯ ಪ್ರೊ.ಕೆ.ರಾಮಮೂರ್ತಿರಾವ್, ಅಮೃತ ವಿಶ್ವವಿದ್ಯಾಪೀಠಂನ ಪ್ರಾಂಶುಪಾಲರಾದ ಡಾ.ಜಿ. ರವೀಂದ್ರನಾಥ್ ಹಾಗೂ ನಗರ ಪಾಲಿಕೆ ಸದಸ್ಯ ಎಂ.ಸಿ.ರಮೇಶ್ ಭಾಗವಹಿಸುವರು.

ಕಾರ್ಯಕ್ರಮವನ್ನು ವಿದುಷಿ ಮಿತ್ರನವೀನ್ ನಿರ್ದೇಶಿಸಿ, ನೃತ್ಯ ಸಂಯೋಜಿಸಿದ್ದಾರೆ.ವಿ. ನವೀನ್ ಎಂ.ಎಸ್.ಅಂದಗಾರ್ ಗಾಯನ, ವಿ. ವಿವೇಕ ಕೃಷ್ಣ ಕೊಳಲು, ವಿ.ಜಿ.ಎಸ್. ನಾಗರಾಜ್ ಮೃದಂಗ ಸಹಕಾರ ನೀಡಲಿದ್ದಾರೆ. ಡಾ.ಭುವನೇಶ್ವರಿ ನಿರೂಪಣೆ ನಡೆಸಿಕೊಡುವರು.

ಕು.ಯಶಸ್ವಿನಿ ಬಿ.ಎಂ.ಅವರು ಮಂಜುನಾಥ್ ಮತ್ತು ಭವಾನಿ ದಂಪತಿಯ ಪುತ್ರಿ, ವಿದುಷಿ ಮಿತ್ರಾ ನವೀನ್ ಅವರ ಬಳಿ 15 ವರ್ಷಗಳಿಂದ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ಅಮೃತ ವಿದ್ಯಾಪೀಠಂ ನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.


‘ಮೇರಿ ಆವಾಜ್ ಸುನೋ’ ಗಾನ ಸುಧೆ

ಮೈಸೂರಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಭಾನುವಾರ ಸಂಜೆ 5-30 ಕ್ಕೆ ‘ಮೇರಿ ಆವಾಜ್ ಸುನೋ’ ಹಳೆಯ ಹಿಂದಿ ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.ಗಾಯನ ಕ್ಷೇತ್ರದಲ್ಲಿ ಆಸಕ್ತಿ ಇರಿಸಿಕೊಂಡಿರುವ ವೃತ್ತಿಯಲ್ಲಿ ವಕೀಲರಾದ ಚಂದ್ರಶೇಖರ್ ಅವರು ತಮ್ಮ ಸ್ನೇಹಿತರೊಡಗೂಡಿ ಈ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೈಸೂರಿನ ಗಾಯಕರಾದ ಅಮೂಲ್ಯ, ದೇವಿಕಾ, ಡಾ.ರೇಖಾ, ಸುಭಾಷ್, ಪುಷ್ಪಲತಾ, ಜಾಯ್ಸ್, ಗುರುರಾಜ್, ವಕೀಲ ಚಂದ್ರಶೇಖರ್ ಅವರು ಖ್ಯಾತ ಗಾಯಕರಾದ ಕಿಶೋರ್ ಕುಮಾರ್, ಮಹಮದ್ ರಫಿ, ಆಶಾಬೋಸ್ಲೆ, ಲತಾಂಗೇಶ್ಕರ್ ಅವರ ಕಂಠಸಿರಿಯಿಂದ ಹೊರಹೊಮ್ಮಿರುವ ಜನಪ್ರಿಯ ಗೀತೆಗಳ ಗಾಯನ ಸುಧೆಯನ್ನು ಹರಿಸಲಿದ್ದಾರೆ.

ಕೀಬೋರ್ಡ್: ಪ್ರಸನ್ನಕುಮಾರ್ ಹಾಗೂ ದೀಪಕ್, ತಬಲಾ: ಕಿರಣ್, ರಘುನಾಥ್, ರಿದಂ: ವಿನ್ಸಂಟ್, ಗಿಟಾರ್: ವಿನಯ್ ಹಾಗೂ ನೀತೂ ನಿನಾದ್ ಕೊಳಲು ಸಹಕಾರ ನೀಡಲಿದ್ದಾರೆ. ಸಂಜೆ 5.30ಕ್ಕೆ ಆರಂಭವಾಗುವ ಕಾರ್ಯಕ್ರಮ ರಾತ್ರಿ 9.30 ರ ವರೆಗೂ ನಡೆಯಲಿದೆ.


ಪಂ.ವೆಂಕಟೇಶ್ ಕುಮಾರ್ ಗಾಯನ ನಾಳೆ

ಶ್ರೀ ಪಂಚಾಕ್ಷರ ಗವಾಯಿಗಳವರ 131 ನೇ ಜನ್ಮದಿನ ಹಾಗೂ ಪದ್ಮಭೂಷಣ ಡಾ.ಎಂ. ಪುಟ್ಟರಾಜಗವಾಯಿಗಳವರ 109 ನೇ ಜನ್ಮದಿನ ಆಚರಣೆ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಹುಣಸೂರಿನ ಶಿಕ್ಷಕರ ಭವನದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.

ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವಿದ್ದು, 6 ಗಂಟೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ವೆಂಕಟೇಶ್‌ಕುಮಾರ್ ಅವರಿಂದ ಗಾಯನ ಕಾರ್ಯಕ್ರಮವಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳ ಸಂಗೀತ ಪಾಠಶಾಲೆಯ ಮಕ್ಕಳಿಂದ ಗಾಯನ ಕಾರ್ಯಕ್ರಮವಿದೆ.

andolanait

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

4 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

34 mins ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

2 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

2 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

2 hours ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

3 hours ago