ಕು.ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ

ನಾದ ವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ ವತಿಯಿಂದ ವಿದುಷಿ ಮಿತ್ರಾನ ನವೀನ್ ಅವರ ಶಿಷ್ಯೆ ಕು.ಯಶಸ್ವಿನಿ ಬಿ.ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಭಾನುವಾರ ಸಂಜೆ 5.30 ಕ್ಕೆ ಮೈಸೂರಿನ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ನಾಟ್ಯಾಚಾರ್ಯ ಪ್ರೊ.ಕೆ.ರಾಮಮೂರ್ತಿರಾವ್, ಅಮೃತ ವಿಶ್ವವಿದ್ಯಾಪೀಠಂನ ಪ್ರಾಂಶುಪಾಲರಾದ ಡಾ.ಜಿ. ರವೀಂದ್ರನಾಥ್ ಹಾಗೂ ನಗರ ಪಾಲಿಕೆ ಸದಸ್ಯ ಎಂ.ಸಿ.ರಮೇಶ್ ಭಾಗವಹಿಸುವರು.

ಕಾರ್ಯಕ್ರಮವನ್ನು ವಿದುಷಿ ಮಿತ್ರನವೀನ್ ನಿರ್ದೇಶಿಸಿ, ನೃತ್ಯ ಸಂಯೋಜಿಸಿದ್ದಾರೆ.ವಿ. ನವೀನ್ ಎಂ.ಎಸ್.ಅಂದಗಾರ್ ಗಾಯನ, ವಿ. ವಿವೇಕ ಕೃಷ್ಣ ಕೊಳಲು, ವಿ.ಜಿ.ಎಸ್. ನಾಗರಾಜ್ ಮೃದಂಗ ಸಹಕಾರ ನೀಡಲಿದ್ದಾರೆ. ಡಾ.ಭುವನೇಶ್ವರಿ ನಿರೂಪಣೆ ನಡೆಸಿಕೊಡುವರು.

ಕು.ಯಶಸ್ವಿನಿ ಬಿ.ಎಂ.ಅವರು ಮಂಜುನಾಥ್ ಮತ್ತು ಭವಾನಿ ದಂಪತಿಯ ಪುತ್ರಿ, ವಿದುಷಿ ಮಿತ್ರಾ ನವೀನ್ ಅವರ ಬಳಿ 15 ವರ್ಷಗಳಿಂದ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ಅಮೃತ ವಿದ್ಯಾಪೀಠಂ ನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.


‘ಮೇರಿ ಆವಾಜ್ ಸುನೋ’ ಗಾನ ಸುಧೆ

ಮೈಸೂರಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಭಾನುವಾರ ಸಂಜೆ 5-30 ಕ್ಕೆ ‘ಮೇರಿ ಆವಾಜ್ ಸುನೋ’ ಹಳೆಯ ಹಿಂದಿ ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.ಗಾಯನ ಕ್ಷೇತ್ರದಲ್ಲಿ ಆಸಕ್ತಿ ಇರಿಸಿಕೊಂಡಿರುವ ವೃತ್ತಿಯಲ್ಲಿ ವಕೀಲರಾದ ಚಂದ್ರಶೇಖರ್ ಅವರು ತಮ್ಮ ಸ್ನೇಹಿತರೊಡಗೂಡಿ ಈ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೈಸೂರಿನ ಗಾಯಕರಾದ ಅಮೂಲ್ಯ, ದೇವಿಕಾ, ಡಾ.ರೇಖಾ, ಸುಭಾಷ್, ಪುಷ್ಪಲತಾ, ಜಾಯ್ಸ್, ಗುರುರಾಜ್, ವಕೀಲ ಚಂದ್ರಶೇಖರ್ ಅವರು ಖ್ಯಾತ ಗಾಯಕರಾದ ಕಿಶೋರ್ ಕುಮಾರ್, ಮಹಮದ್ ರಫಿ, ಆಶಾಬೋಸ್ಲೆ, ಲತಾಂಗೇಶ್ಕರ್ ಅವರ ಕಂಠಸಿರಿಯಿಂದ ಹೊರಹೊಮ್ಮಿರುವ ಜನಪ್ರಿಯ ಗೀತೆಗಳ ಗಾಯನ ಸುಧೆಯನ್ನು ಹರಿಸಲಿದ್ದಾರೆ.

ಕೀಬೋರ್ಡ್: ಪ್ರಸನ್ನಕುಮಾರ್ ಹಾಗೂ ದೀಪಕ್, ತಬಲಾ: ಕಿರಣ್, ರಘುನಾಥ್, ರಿದಂ: ವಿನ್ಸಂಟ್, ಗಿಟಾರ್: ವಿನಯ್ ಹಾಗೂ ನೀತೂ ನಿನಾದ್ ಕೊಳಲು ಸಹಕಾರ ನೀಡಲಿದ್ದಾರೆ. ಸಂಜೆ 5.30ಕ್ಕೆ ಆರಂಭವಾಗುವ ಕಾರ್ಯಕ್ರಮ ರಾತ್ರಿ 9.30 ರ ವರೆಗೂ ನಡೆಯಲಿದೆ.


ಪಂ.ವೆಂಕಟೇಶ್ ಕುಮಾರ್ ಗಾಯನ ನಾಳೆ

ಶ್ರೀ ಪಂಚಾಕ್ಷರ ಗವಾಯಿಗಳವರ 131 ನೇ ಜನ್ಮದಿನ ಹಾಗೂ ಪದ್ಮಭೂಷಣ ಡಾ.ಎಂ. ಪುಟ್ಟರಾಜಗವಾಯಿಗಳವರ 109 ನೇ ಜನ್ಮದಿನ ಆಚರಣೆ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಹುಣಸೂರಿನ ಶಿಕ್ಷಕರ ಭವನದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.

ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವಿದ್ದು, 6 ಗಂಟೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ವೆಂಕಟೇಶ್‌ಕುಮಾರ್ ಅವರಿಂದ ಗಾಯನ ಕಾರ್ಯಕ್ರಮವಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳ ಸಂಗೀತ ಪಾಠಶಾಲೆಯ ಮಕ್ಕಳಿಂದ ಗಾಯನ ಕಾರ್ಯಕ್ರಮವಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago