ಕು.ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ

ನಾದ ವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ ವತಿಯಿಂದ ವಿದುಷಿ ಮಿತ್ರಾನ ನವೀನ್ ಅವರ ಶಿಷ್ಯೆ ಕು.ಯಶಸ್ವಿನಿ ಬಿ.ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಭಾನುವಾರ ಸಂಜೆ 5.30 ಕ್ಕೆ ಮೈಸೂರಿನ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ನಾಟ್ಯಾಚಾರ್ಯ ಪ್ರೊ.ಕೆ.ರಾಮಮೂರ್ತಿರಾವ್, ಅಮೃತ ವಿಶ್ವವಿದ್ಯಾಪೀಠಂನ ಪ್ರಾಂಶುಪಾಲರಾದ ಡಾ.ಜಿ. ರವೀಂದ್ರನಾಥ್ ಹಾಗೂ ನಗರ ಪಾಲಿಕೆ ಸದಸ್ಯ ಎಂ.ಸಿ.ರಮೇಶ್ ಭಾಗವಹಿಸುವರು.

ಕಾರ್ಯಕ್ರಮವನ್ನು ವಿದುಷಿ ಮಿತ್ರನವೀನ್ ನಿರ್ದೇಶಿಸಿ, ನೃತ್ಯ ಸಂಯೋಜಿಸಿದ್ದಾರೆ.ವಿ. ನವೀನ್ ಎಂ.ಎಸ್.ಅಂದಗಾರ್ ಗಾಯನ, ವಿ. ವಿವೇಕ ಕೃಷ್ಣ ಕೊಳಲು, ವಿ.ಜಿ.ಎಸ್. ನಾಗರಾಜ್ ಮೃದಂಗ ಸಹಕಾರ ನೀಡಲಿದ್ದಾರೆ. ಡಾ.ಭುವನೇಶ್ವರಿ ನಿರೂಪಣೆ ನಡೆಸಿಕೊಡುವರು.

ಕು.ಯಶಸ್ವಿನಿ ಬಿ.ಎಂ.ಅವರು ಮಂಜುನಾಥ್ ಮತ್ತು ಭವಾನಿ ದಂಪತಿಯ ಪುತ್ರಿ, ವಿದುಷಿ ಮಿತ್ರಾ ನವೀನ್ ಅವರ ಬಳಿ 15 ವರ್ಷಗಳಿಂದ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ಅಮೃತ ವಿದ್ಯಾಪೀಠಂ ನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.


‘ಮೇರಿ ಆವಾಜ್ ಸುನೋ’ ಗಾನ ಸುಧೆ

ಮೈಸೂರಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಭಾನುವಾರ ಸಂಜೆ 5-30 ಕ್ಕೆ ‘ಮೇರಿ ಆವಾಜ್ ಸುನೋ’ ಹಳೆಯ ಹಿಂದಿ ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.ಗಾಯನ ಕ್ಷೇತ್ರದಲ್ಲಿ ಆಸಕ್ತಿ ಇರಿಸಿಕೊಂಡಿರುವ ವೃತ್ತಿಯಲ್ಲಿ ವಕೀಲರಾದ ಚಂದ್ರಶೇಖರ್ ಅವರು ತಮ್ಮ ಸ್ನೇಹಿತರೊಡಗೂಡಿ ಈ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೈಸೂರಿನ ಗಾಯಕರಾದ ಅಮೂಲ್ಯ, ದೇವಿಕಾ, ಡಾ.ರೇಖಾ, ಸುಭಾಷ್, ಪುಷ್ಪಲತಾ, ಜಾಯ್ಸ್, ಗುರುರಾಜ್, ವಕೀಲ ಚಂದ್ರಶೇಖರ್ ಅವರು ಖ್ಯಾತ ಗಾಯಕರಾದ ಕಿಶೋರ್ ಕುಮಾರ್, ಮಹಮದ್ ರಫಿ, ಆಶಾಬೋಸ್ಲೆ, ಲತಾಂಗೇಶ್ಕರ್ ಅವರ ಕಂಠಸಿರಿಯಿಂದ ಹೊರಹೊಮ್ಮಿರುವ ಜನಪ್ರಿಯ ಗೀತೆಗಳ ಗಾಯನ ಸುಧೆಯನ್ನು ಹರಿಸಲಿದ್ದಾರೆ.

ಕೀಬೋರ್ಡ್: ಪ್ರಸನ್ನಕುಮಾರ್ ಹಾಗೂ ದೀಪಕ್, ತಬಲಾ: ಕಿರಣ್, ರಘುನಾಥ್, ರಿದಂ: ವಿನ್ಸಂಟ್, ಗಿಟಾರ್: ವಿನಯ್ ಹಾಗೂ ನೀತೂ ನಿನಾದ್ ಕೊಳಲು ಸಹಕಾರ ನೀಡಲಿದ್ದಾರೆ. ಸಂಜೆ 5.30ಕ್ಕೆ ಆರಂಭವಾಗುವ ಕಾರ್ಯಕ್ರಮ ರಾತ್ರಿ 9.30 ರ ವರೆಗೂ ನಡೆಯಲಿದೆ.


ಪಂ.ವೆಂಕಟೇಶ್ ಕುಮಾರ್ ಗಾಯನ ನಾಳೆ

ಶ್ರೀ ಪಂಚಾಕ್ಷರ ಗವಾಯಿಗಳವರ 131 ನೇ ಜನ್ಮದಿನ ಹಾಗೂ ಪದ್ಮಭೂಷಣ ಡಾ.ಎಂ. ಪುಟ್ಟರಾಜಗವಾಯಿಗಳವರ 109 ನೇ ಜನ್ಮದಿನ ಆಚರಣೆ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಹುಣಸೂರಿನ ಶಿಕ್ಷಕರ ಭವನದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.

ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವಿದ್ದು, 6 ಗಂಟೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ವೆಂಕಟೇಶ್‌ಕುಮಾರ್ ಅವರಿಂದ ಗಾಯನ ಕಾರ್ಯಕ್ರಮವಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳ ಸಂಗೀತ ಪಾಠಶಾಲೆಯ ಮಕ್ಕಳಿಂದ ಗಾಯನ ಕಾರ್ಯಕ್ರಮವಿದೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

3 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

7 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

7 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

7 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

7 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago