ಆಂದೋಲನ ಪುರವಣಿ

ಯೋಗ ಕ್ಷೇಮ : ನೀರು ಕುಡಿದು ನಿರ್ಜಲೀಕರಣ ತಡೆಯಿರಿ

ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ…?
ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು ಪ್ರಮುಖ ಕಾರಣ ಡಿಹೈಡ್ರೇಶನ್. ಸರಿಯಾಗಿ ನೀರು ಕುಡಿಯದೇ ಇರುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಚೆನ್ನಾಗಿ ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳುವವರು ನೀರು ಕುಡಿಯದವರಿಗಿಂತ ಹೆಚ್ಚು ಕಾಲ ಬದುಕುತ್ತಾರೆನ್ನುತ್ತದೆ ಸಂಶೋಧನೆ.

ನಿರ್ಜಲೀಕರಣವು ಹೃದಯ ಮತ್ತು ಶ್ವಾಸಕೋಶದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಹೈಡ್ರೇಶನ್ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸತತ ಮೂರು ದಶಕಗಳ ಕಾಲ ಸುಮಾರು 10,000ಕ್ಕೂ ಹೆಚ್ಚು ಜನರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಂಶೋಧಕರು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರ ನೀರಿನ ಸೇವನೆ ಮತ್ತು ಡಿಹೈಡ್ರೇಶನ್ ಅನ್ನು ನಿರ್ಧರಿಸಲು ಸಂಶೋಧಕರು ಸೀರಮ್ ಸೋಡಿಯಂ ಪರೀಕ್ಷೆಯನ್ನು ಬಳಸಿದ್ದರು. ರಕ್ತದಲ್ಲಿ ಎಷ್ಟು ಸೋಡಿಯಂ ಇದೆ ಎಂಬುದನ್ನು ಇದು ಪರಿಶೀಲಿಸುತ್ತದೆ. ವ್ಯಕ್ತಿಯ ರಕ್ತದಲ್ಲಿ ಸೋಡಿಯಂನ ಸಾಮಾನ್ಯ ಮಟ್ಟವು ಪ್ರತಿ ಲೀಟರ್‌ಗೆ 135-145 ಎಂಎಂಒಎಲ್ ನಡುವೆ ಇರಬೇಕು.

ಸಂಶೋಧನೆಯ ಫಲಿತಾಂಶ: ಪ್ರತಿ ಲೀಟರ್‌ಗೆ 144 ಎಂಎಂಒಎಲ್‌ಗಿಂತ ಹೆಚ್ಚಿನ ಸೋಡಿಯಂ ಮಟ್ಟವು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಸಂಶೋಧನೆಯ ಪ್ರಕಾರ ದೀರ್ಘಕಾಲದ ಡಿಹೈಡ್ರೇಶನ್ ನಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ದಿನಕ್ಕೆ ಎಷ್ಟು ನೀರು ಕುಡಿಯಬೇಕು?
ತಜ್ಞರು ದಿನಕ್ಕೆ ಕನಿಷ್ಟ ಆರರಿಂದ ಎಂಟು ಗ್ಲಾಸ್ ನೀರನ್ನು ಕುಡಿಯಲು ಶಿಫಾರ ಮಾಡುತ್ತಾರೆ. ಪುರುಷರು 15 ಗ್ಲಾಸ್ ಮತ್ತು ಮಹಿಳೆಯರು 11.5 ಗ್ಲಾಸ್ ನೀರು ಕುಡಿಯಬೇಕೆಂದು ಶಿಫಾರಸು ಮಾಡುತ್ತಾರೆ. ಹೈಡ್ರೇಟೆಡ್ ಆಗಿರಲು ದಿನವಿಡೀ ಸಾಕಷ್ಟು ನೀರು ಮತ್ತು ಹಣ್ಣಿನ ರಸ ಕುಡಿಯಲು ಪ್ರಯತ್ನಿಸಿ.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

7 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago