ಆಂದೋಲನ ಪುರವಣಿ

ಯೋಗ ಕ್ಷೇಮ : ನೀರು ಕುಡಿದು ನಿರ್ಜಲೀಕರಣ ತಡೆಯಿರಿ

ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ…?
ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು ಪ್ರಮುಖ ಕಾರಣ ಡಿಹೈಡ್ರೇಶನ್. ಸರಿಯಾಗಿ ನೀರು ಕುಡಿಯದೇ ಇರುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಚೆನ್ನಾಗಿ ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳುವವರು ನೀರು ಕುಡಿಯದವರಿಗಿಂತ ಹೆಚ್ಚು ಕಾಲ ಬದುಕುತ್ತಾರೆನ್ನುತ್ತದೆ ಸಂಶೋಧನೆ.

ನಿರ್ಜಲೀಕರಣವು ಹೃದಯ ಮತ್ತು ಶ್ವಾಸಕೋಶದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಹೈಡ್ರೇಶನ್ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸತತ ಮೂರು ದಶಕಗಳ ಕಾಲ ಸುಮಾರು 10,000ಕ್ಕೂ ಹೆಚ್ಚು ಜನರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಂಶೋಧಕರು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರ ನೀರಿನ ಸೇವನೆ ಮತ್ತು ಡಿಹೈಡ್ರೇಶನ್ ಅನ್ನು ನಿರ್ಧರಿಸಲು ಸಂಶೋಧಕರು ಸೀರಮ್ ಸೋಡಿಯಂ ಪರೀಕ್ಷೆಯನ್ನು ಬಳಸಿದ್ದರು. ರಕ್ತದಲ್ಲಿ ಎಷ್ಟು ಸೋಡಿಯಂ ಇದೆ ಎಂಬುದನ್ನು ಇದು ಪರಿಶೀಲಿಸುತ್ತದೆ. ವ್ಯಕ್ತಿಯ ರಕ್ತದಲ್ಲಿ ಸೋಡಿಯಂನ ಸಾಮಾನ್ಯ ಮಟ್ಟವು ಪ್ರತಿ ಲೀಟರ್‌ಗೆ 135-145 ಎಂಎಂಒಎಲ್ ನಡುವೆ ಇರಬೇಕು.

ಸಂಶೋಧನೆಯ ಫಲಿತಾಂಶ: ಪ್ರತಿ ಲೀಟರ್‌ಗೆ 144 ಎಂಎಂಒಎಲ್‌ಗಿಂತ ಹೆಚ್ಚಿನ ಸೋಡಿಯಂ ಮಟ್ಟವು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಸಂಶೋಧನೆಯ ಪ್ರಕಾರ ದೀರ್ಘಕಾಲದ ಡಿಹೈಡ್ರೇಶನ್ ನಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ದಿನಕ್ಕೆ ಎಷ್ಟು ನೀರು ಕುಡಿಯಬೇಕು?
ತಜ್ಞರು ದಿನಕ್ಕೆ ಕನಿಷ್ಟ ಆರರಿಂದ ಎಂಟು ಗ್ಲಾಸ್ ನೀರನ್ನು ಕುಡಿಯಲು ಶಿಫಾರ ಮಾಡುತ್ತಾರೆ. ಪುರುಷರು 15 ಗ್ಲಾಸ್ ಮತ್ತು ಮಹಿಳೆಯರು 11.5 ಗ್ಲಾಸ್ ನೀರು ಕುಡಿಯಬೇಕೆಂದು ಶಿಫಾರಸು ಮಾಡುತ್ತಾರೆ. ಹೈಡ್ರೇಟೆಡ್ ಆಗಿರಲು ದಿನವಿಡೀ ಸಾಕಷ್ಟು ನೀರು ಮತ್ತು ಹಣ್ಣಿನ ರಸ ಕುಡಿಯಲು ಪ್ರಯತ್ನಿಸಿ.

andolanait

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

28 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

46 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

56 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

1 hour ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago