ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ…?
ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು ಪ್ರಮುಖ ಕಾರಣ ಡಿಹೈಡ್ರೇಶನ್. ಸರಿಯಾಗಿ ನೀರು ಕುಡಿಯದೇ ಇರುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಚೆನ್ನಾಗಿ ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳುವವರು ನೀರು ಕುಡಿಯದವರಿಗಿಂತ ಹೆಚ್ಚು ಕಾಲ ಬದುಕುತ್ತಾರೆನ್ನುತ್ತದೆ ಸಂಶೋಧನೆ.
ನಿರ್ಜಲೀಕರಣವು ಹೃದಯ ಮತ್ತು ಶ್ವಾಸಕೋಶದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಹೈಡ್ರೇಶನ್ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸತತ ಮೂರು ದಶಕಗಳ ಕಾಲ ಸುಮಾರು 10,000ಕ್ಕೂ ಹೆಚ್ಚು ಜನರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಂಶೋಧಕರು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರ ನೀರಿನ ಸೇವನೆ ಮತ್ತು ಡಿಹೈಡ್ರೇಶನ್ ಅನ್ನು ನಿರ್ಧರಿಸಲು ಸಂಶೋಧಕರು ಸೀರಮ್ ಸೋಡಿಯಂ ಪರೀಕ್ಷೆಯನ್ನು ಬಳಸಿದ್ದರು. ರಕ್ತದಲ್ಲಿ ಎಷ್ಟು ಸೋಡಿಯಂ ಇದೆ ಎಂಬುದನ್ನು ಇದು ಪರಿಶೀಲಿಸುತ್ತದೆ. ವ್ಯಕ್ತಿಯ ರಕ್ತದಲ್ಲಿ ಸೋಡಿಯಂನ ಸಾಮಾನ್ಯ ಮಟ್ಟವು ಪ್ರತಿ ಲೀಟರ್ಗೆ 135-145 ಎಂಎಂಒಎಲ್ ನಡುವೆ ಇರಬೇಕು.
ಸಂಶೋಧನೆಯ ಫಲಿತಾಂಶ: ಪ್ರತಿ ಲೀಟರ್ಗೆ 144 ಎಂಎಂಒಎಲ್ಗಿಂತ ಹೆಚ್ಚಿನ ಸೋಡಿಯಂ ಮಟ್ಟವು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಸಂಶೋಧನೆಯ ಪ್ರಕಾರ ದೀರ್ಘಕಾಲದ ಡಿಹೈಡ್ರೇಶನ್ ನಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.
ದಿನಕ್ಕೆ ಎಷ್ಟು ನೀರು ಕುಡಿಯಬೇಕು?
ತಜ್ಞರು ದಿನಕ್ಕೆ ಕನಿಷ್ಟ ಆರರಿಂದ ಎಂಟು ಗ್ಲಾಸ್ ನೀರನ್ನು ಕುಡಿಯಲು ಶಿಫಾರ ಮಾಡುತ್ತಾರೆ. ಪುರುಷರು 15 ಗ್ಲಾಸ್ ಮತ್ತು ಮಹಿಳೆಯರು 11.5 ಗ್ಲಾಸ್ ನೀರು ಕುಡಿಯಬೇಕೆಂದು ಶಿಫಾರಸು ಮಾಡುತ್ತಾರೆ. ಹೈಡ್ರೇಟೆಡ್ ಆಗಿರಲು ದಿನವಿಡೀ ಸಾಕಷ್ಟು ನೀರು ಮತ್ತು ಹಣ್ಣಿನ ರಸ ಕುಡಿಯಲು ಪ್ರಯತ್ನಿಸಿ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…