ಆಂದೋಲನ ಪುರವಣಿ

ಯೋಗ ಕ್ಷೇಮ : ನೀರು ಕುಡಿದು ನಿರ್ಜಲೀಕರಣ ತಡೆಯಿರಿ

ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ…?
ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು ಪ್ರಮುಖ ಕಾರಣ ಡಿಹೈಡ್ರೇಶನ್. ಸರಿಯಾಗಿ ನೀರು ಕುಡಿಯದೇ ಇರುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಚೆನ್ನಾಗಿ ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳುವವರು ನೀರು ಕುಡಿಯದವರಿಗಿಂತ ಹೆಚ್ಚು ಕಾಲ ಬದುಕುತ್ತಾರೆನ್ನುತ್ತದೆ ಸಂಶೋಧನೆ.

ನಿರ್ಜಲೀಕರಣವು ಹೃದಯ ಮತ್ತು ಶ್ವಾಸಕೋಶದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಹೈಡ್ರೇಶನ್ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸತತ ಮೂರು ದಶಕಗಳ ಕಾಲ ಸುಮಾರು 10,000ಕ್ಕೂ ಹೆಚ್ಚು ಜನರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಂಶೋಧಕರು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರ ನೀರಿನ ಸೇವನೆ ಮತ್ತು ಡಿಹೈಡ್ರೇಶನ್ ಅನ್ನು ನಿರ್ಧರಿಸಲು ಸಂಶೋಧಕರು ಸೀರಮ್ ಸೋಡಿಯಂ ಪರೀಕ್ಷೆಯನ್ನು ಬಳಸಿದ್ದರು. ರಕ್ತದಲ್ಲಿ ಎಷ್ಟು ಸೋಡಿಯಂ ಇದೆ ಎಂಬುದನ್ನು ಇದು ಪರಿಶೀಲಿಸುತ್ತದೆ. ವ್ಯಕ್ತಿಯ ರಕ್ತದಲ್ಲಿ ಸೋಡಿಯಂನ ಸಾಮಾನ್ಯ ಮಟ್ಟವು ಪ್ರತಿ ಲೀಟರ್‌ಗೆ 135-145 ಎಂಎಂಒಎಲ್ ನಡುವೆ ಇರಬೇಕು.

ಸಂಶೋಧನೆಯ ಫಲಿತಾಂಶ: ಪ್ರತಿ ಲೀಟರ್‌ಗೆ 144 ಎಂಎಂಒಎಲ್‌ಗಿಂತ ಹೆಚ್ಚಿನ ಸೋಡಿಯಂ ಮಟ್ಟವು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಸಂಶೋಧನೆಯ ಪ್ರಕಾರ ದೀರ್ಘಕಾಲದ ಡಿಹೈಡ್ರೇಶನ್ ನಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ದಿನಕ್ಕೆ ಎಷ್ಟು ನೀರು ಕುಡಿಯಬೇಕು?
ತಜ್ಞರು ದಿನಕ್ಕೆ ಕನಿಷ್ಟ ಆರರಿಂದ ಎಂಟು ಗ್ಲಾಸ್ ನೀರನ್ನು ಕುಡಿಯಲು ಶಿಫಾರ ಮಾಡುತ್ತಾರೆ. ಪುರುಷರು 15 ಗ್ಲಾಸ್ ಮತ್ತು ಮಹಿಳೆಯರು 11.5 ಗ್ಲಾಸ್ ನೀರು ಕುಡಿಯಬೇಕೆಂದು ಶಿಫಾರಸು ಮಾಡುತ್ತಾರೆ. ಹೈಡ್ರೇಟೆಡ್ ಆಗಿರಲು ದಿನವಿಡೀ ಸಾಕಷ್ಟು ನೀರು ಮತ್ತು ಹಣ್ಣಿನ ರಸ ಕುಡಿಯಲು ಪ್ರಯತ್ನಿಸಿ.

andolanait

Recent Posts

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

6 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

6 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

11 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

11 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

11 hours ago