ರುಮಟಾಯ್ಡ್ ಆರ್ಥೆರೈಟಿಸ್ ಅಥವಾ ರುಮಟಾಯ್ಡ್ ಸಂಧಿವಾತ ಜಾಗೃತಿ ದಿನವನ್ನು ಪ್ರತಿವರ್ಷ ಫೆಬ್ರವರಿ2 ರಂದು ಆಚರಿಸಲಾಗುತ್ತದೆ.2013ರಲ್ಲಿ ರುಮಟಾಯ್ಡ್ ಪೇಷಂಟ್ ಫೌಂಡೇಶನ್ ವತಿಯಿಂದ ಈ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಹಚ್ಚುವಿಕೆ, ರೋಗದ ಬಗ್ಗೆ ಇರುವ ತಪ್ಪು ತಿಳಿವಳಿಕೆಯನ್ನು ಸರಿಮಾಡಲು ಹಾಗೂ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಫೆ2 ರಂದು ದಿನಾಂಕ ನಿಗಧಿ ಮಾಡಲಾಯಿತು.
ರುಮಟಾಯ್ಡ್ ಆರ್ಥೆರೈಟಿಸ್ ಗೆ ಕಾರಣವೇನು?
ಇದು ಸ್ವಯಂ ರೋಗ ನಿರೋಧಕ ಮತ್ತು ಉರಿಯೂತದ ಖಾಯಿಲೆಯಾಗಿದೆ. ಅಂದರೆ ನಮ್ಮ ಪ್ರತಿ ರಕ್ಷಣಾ ವ್ಯವಸ್ಥೆಯು ದೇಹದಲ್ಲಿನ ಆರೋಗ್ಯಕರ ಕೋಶಗಳ ಮೇಲೆ ತಪ್ಪಾಗಿ ದಾಳಿ ಮಾಡುತ್ತವೆ. ಇದು ದೇಹದ ಪೀಡಿತ ಭಾಗಗಳಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ.
ಈ ರೋಗದ ಅಪಾಯಕಾರಿ ಅಂಶಗಳು ಯಾವುವು?
ರುಮಟಾಯ್ಡ್ ಆರ್ಥೆರೈಟಿಸ್ಗೆ ನಿಖರವಾದ ಕಾರಣ ತಿಳಿದಿಲ್ಲ. ಸಂಶೋಧಕರು ಹಲವಾರು ಅನುವಂಶಿಕ ಮತ್ತು ಪರಿಸರ ಅಂಶಗಳ ವ್ಯತ್ಯಾಸದಿಂದ ಬರಬಹುದು ಎಂದು ಪ್ರತಿಪಾದಿಸಿದ್ದಾರೆ.
ವಯಸ್ಸು: ಆರ್ಎ ಯಾವುದೇ ವಯಸ್ಸಿನಲ್ಲಿ ಪ್ರಾರಂಭವಾಗಬಹುದು. ಆದರೆ ಸಾಮಾನ್ಯವಾಗಿ ೩೦-೬೦ ರ ವಯಸ್ಕರಲ್ಲಿ ಅಧಿಕವಾಗಿ ಕಂಡುಬರುತ್ತದೆ.
ಲಿಂಗ: ಸಾಮಾನ್ಯವಾಗಿ ಪುರುಷರಿಗಿಂತ ಮಹಿಳೆಯರಲ್ಲಿ ಎರಡು- ಮೂರು ಪಟ್ಟು ಜಾಸ್ತಿ ಕಂಡುಬರುತ್ತದೆ.
ಇತರೇ: ಧೂಮಪಾನ ಅಭ್ಯಾಸ ಮತ್ತು ಬೊಜ್ಜು ಇರುವಾಗ ಆರ್ಎ ನ ಅಪಾಯವು ಅತ್ಯಧಿಕವಾಗಿರುತ್ತದೆ.
ರೋಗ ಲಕ್ಷಣಗಳು:
* ಆರ್ಎ ನಲ್ಲಿ ಸಾಮಾನ್ಯವಾಗಿ ಕೀಲು ಹಾಗೂ ಕೀಲು ಪದರು ಉರಿಯೂತದಿಂದ ಕೀಲು ಹಾಳಾಗುತ್ತದೆ. ದೀರ್ಘಕಾಲದ ನೋವು,ಅಸ್ಥಿರತೆ( ಸಮತೋಲನದ ಕೊರತೆ) ಮತ್ತು ಕೀಲು ವಿರೂಪತೆಗೆ ಕಾರಣ ಆಗಬಹುದು. ಸಾಮಾನ್ಯವಾಗಿ ಸಣ್ಣ ಕೀಲು, ಕೈ ಬೆರಳು, ಕಾಲ್ಬೆರಳು, ಮಣಿಕಟ್ಟು ಹಾಗೂ ದೊಡ್ಡ ಕೀಲು( ಮೊಣಕೈ), ಭುಜದ ಕೀಲುಗಳು, ಮೊಣಕಾಲು ನೋವು ಮತ್ತು ಊತ.
* ಮುಂಜಾನೆಯಲ್ಲಿ ಸರಾಸರಿ ೨೦ ನಿಮಿಷದ ಮೇಲೆ ಕಾಲು ಬಿಗಿತ ಆಗುವುದು.
* ಸುಸ್ತಾಗುವುದು, ಖಿನ್ನತೆ.
*ರಕ್ತ ಹೀನತೆ
ಅಪರೂಪವಾಗಿ ತೂಕ ಇಳಿಕೆ, ಕಣ್ಣು ಉರಿ, ಕೆಂಪಾಗುವುದು, ಮೊಣಕೈ, ಕೈ,ಕಾಲುಗಳಲ್ಲಿ ಗಂಟುಗಳು, ಶ್ವಾಸಕೋಶ, ಸಲದಯ, ರಕ್ತನಾಳ, ನರ ಸಂಬಂಧಿತ ಉರಿಯೂತ ಕಂಡುಬರುತ್ತವೆ.
ರೋಗ ನಿರ್ಣಯ ಹೇಗೆ:
ಹಿಂದೆ ಸೂಚಿಸಲಾದ ಯಾವುದೇ ಸಮಸ್ಯೆಗಳು ಗಮನಕ್ಕೆ ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.
ಚಿಕಿತ್ಸೆ: ಚಿಕಿತ್ಸೆಯು ಸಾಮಾನ್ಯವಾಗಿ ರೋಗವನ್ನು ನಿಧಾನಗೊಳಿಸುವ ಹಾಗೂ ಕೀಲು ವಿರೂಪತೆಯನ್ನು ತಡೆಗಟ್ಟುವ ಔಷಧಗಳ ಬಳಕೆಯನ್ನು ಒಳಗೊಂಡಿರುತ್ತದೆ.
ನೋವು ನಿವಾರಕ ಮಾತ್ರೆ, ಸ್ಟಿರಾಯ್ಡ್ ಇಲ್ಲದ ಉರಿಯೂತದ ಔಷಧಗಳು, ರೋಗ ಮಾರ್ಪಡಿಸುವ ಔಷಧಗಳು, ಜೈವಿಕಗಳು ಹೀಗೆ ನಾಲು ವಿಧಾನಗಳನ್ನು ಒಳಗೊಂಡಿರುತ್ತದೆ.
ರೋಗದ ದೀರ್ಘಾವಧಿ ಪರಿಣಾಮಗಳು: ರಕ್ತ ಹೀನತೆಯ ಸಾಧ್ಯತೆಯ ಹೆಚ್ಚಳ, ಖಿನ್ನತೆ, ಸಲದಯ ರೋಗದ ಅಪಾಯ ಹೆಚ್ಚಾಗುವುದು, ಬೆನ್ನು ಹುರಿಯ ಕೀಲುಗಳು ಒತ್ತುವಿಕೆ, ಒಣಗಿದ, ಕೆಂಪಾದ ಮತ್ತು ಕೆರೆತವುಳ್ಳ ಕಣ್ಣುಗಳು, ಶ್ವಾಸಕೋಶ, ನರ ಸಂಬಂಧಿತ ಉರಿಯೂತ.
ಆಹಾರ ಮತ್ತು ವ್ಯಾಯಾಮ: ದೈಹಿಕವಾಗಿ ಕ್ರಿಯಾಶೀಲರಾಗಿ ವಾರದಲ್ಲಿ ಐದು ದಿನಗಳವರೆಗೆ ದಿನಕ್ಕೆ ೩೦ ನಿಮಿಷ ವಾಕಿಂಗ್, ಈಜು ಅಭ್ಯಾಸ ಮಾಡಿಕೊಳ್ಳಬೇಕು.
ಮೆಡಿಟರೇನಿಯನ್ ಡಯಟ್ ಅಂದರೆ ಆಹಾರದಲ್ಲಿ ಸೊಪ್ಪು, ತಾಜಾ ತರಕಾರಿ, ಹಣ್ಣುಗಳನ್ನು ಉಪಯೋಗಿಸುವುದರಿಂದ ಉರಿಯೂತ ಕಡಿಮೆಯಾಗುತ್ತದೆ. ಮಿತವಾದ ಸಕ್ಕರೆ, ಉಪ್ಪು ಉಪಯೋಗಿಸಿ, ಧೂಮಪಾನ ತ್ಯಜಿಸಿ, ಸಂಸ್ಕರಿಸಿದ ಆಹಾರ,ಬೇಕರಿ ಪದಾರ್ಥಗಳನ್ನು ವಿವೇಚನೆಯಿಂದ ಉಪಯೋಗಿಸಿ,ಕಡಿಮೆ ಕೊಬ್ಬಿನ ಆಹಾರ ಸೇವಿಸಿ.
–ಡಾ.ಮಹಾಬಲೇಶ್ವರ ಮಮದಾಪೂರ
ಸಂಧಿವಾತ ಹಾಗೂ ಕೀಲು ರೋಗ ತಜ್ಞರು.
ಜೆಎಸ್ಎಸ್ ಆಸ್ಪತ್ರೆ, ಮೈಸೂರು
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…