ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.
ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್ವೆಲ್ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…