ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.
ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…