ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.
ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…