ಆಂದೋಲನ ಪುರವಣಿ

ಯೋಗ ಕ್ಷೇಮ : ಥೈರಾಯ್ಡ್ ನಿಯಂತ್ರಣಕ್ಕೆ ಪರಿಹಾರ ನುಗ್ಗೆ ಸೊಪ್ಪು…!

ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ.

ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನಲು ರುಚಿಕರ ಅಲ್ಲವೆಂದು ಕೆಲವರು ಮೂಗು ಮುರಿಯುವುದುಂಟು.
ಆದರೆ ಇದರ ಪ್ರಯೋಜನಗಳು ಹಲವು. ಒಂದು ಬಟ್ಟಲು ನುಗ್ಗೆ ಸೊಪ್ಪಿಗೆ ಒಂದೂವರೆ ಬಟ್ಟಲು ನೀರು ಹಾಕಿ ಚೆನ್ನಾಗಿ ಕುದಿಸಿ ಬಣ್ಣ ಬದಲಾದಾಗ ಸೋಸಿಕೊಳ್ಳಿ. ಅದಕ್ಕೆ ಸೈಂಧವ ಲವಣ ಸೇರಿಸಿ ನಂತರ ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಕಷಾಯವನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರವಿರಬಹುದು.
ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂಗಿಂತ ನುಗ್ಗೆಸೊಪ್ಪಿನ ಕಷಾಯದಲ್ಲಿ 10 ಪಟ್ಟು ಹೆಚ್ಚು ಕ್ಯಾಲ್ಸಿಯಂ ಸಿಗುತ್ತದೆ. ಮೊಸರಿನಿಂದ ಸಿಗುವ ಪ್ರೊಟೀನ್‌ಗಿಂತ 8 ಪಟ್ಟು ಹೆಚ್ಚು ಪ್ರೋಟಿನ್ಸ್ ನುಗ್ಗೆಸೊಪ್ಪಿನ ರಸ ಕುಡಿಯುವುದರಿಂದ ಸಿಗುತ್ತದೆ.
ಬಾಳೆ ಹಣ್ಣು ತಿಂದಾಗ ಸಿಗುವ ಪೊಟ್ಯಾಷಿಯಂ ಗಿಂತ 15 ಪಟ್ಟು ಹೆಚ್ಚು ಪೊಟ್ಯಾಷಿಯಂ ಇದನ್ನು ಸೇವಿಸುವುದರಿಂದ ಪಡೆಯಬಹುದು.
ಅಧ್ಯಯನದ ಪ್ರಕಾರ ಈ ನುಗ್ಗೆಸೊಪ್ಪಿನ ರಸವನ್ನು ನಿರಂತರವಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಶ್ವಾಸಕೋಶ ಮತ್ತು ಯಕೃತ್‌ಗೂ ಇದು ತುಂಬಾ ಒಳ್ಳೆಯದು.ಥೈರಾಯ್ಡ್ ನಿಯಂತ್ರಣದಲ್ಲಿ ಇಡುವ ಗುಣ ಈ ನುಗ್ಗೆಸೊಪ್ಪಿನ ರಸಕ್ಕಿದೆಯಂತೆ.

andolanait

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

2 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

5 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

5 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

5 hours ago